Karnataka Polls: ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ
Team Udayavani, Apr 17, 2023, 12:50 PM IST
ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ:Karnataka poll 2023; ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ- ಮೆರವಣಿಗೆಯಲ್ಲಿ ಜನಸ್ತೋಮ
ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಕಾಂಚನ್, ಕಾಪು ಅಭ್ಯರ್ಥಿ ವಿನಯ ಕುಮಾರ್ ಸೊರಕೆ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು ಇದ್ದರು.
ಇದಕ್ಕೂ ಮೊದಲು ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪ್ರಸಾದ್ ರಾಜ್ ಕಾಂಚನ್, ಚುನಾವಣೆ ಎದುರಿಸಲು ಸಜ್ಜಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಕೊಡುಗೆಯಿಂದ ಉಡುಪಿಯಿಂದ ವಿಶ್ವ ಮಟ್ಟದ ಗುರುತಿಸಿಕೊಂಡಿದೆ. ವಿ.ಎಸ್ ಆಚಾರ್ಯ ಅವರ ದೈವಾಧೀನರಾದ ನಂತರ ಬಿಜೆಪಿ ಧೂಳಿಪಟವಾಗಿದೆ. ಕಾರ್ಯಕರ್ತರ ಕಷ್ಟ ಸುಖದಲ್ಲಿ ನಿರಂತರವಾಗಿ ನಿಮ್ಮ ಜತೆಗೆ ಇರುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್