ಬಾಲಕಿಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ
Team Udayavani, Jun 22, 2022, 12:23 AM IST
ಉಡುಪಿ: ಪರಿಶಿಷ್ಟ ಜಾತಿಯ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾ ಗಿದ್ದು ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾ ಲಯದ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ತೀರ್ಪು ಪ್ರಕಟಿಸಿದ್ದಾರೆ.
ಪೋಕ್ಸೊ ಕಾಯ್ದೆಯಡಿಯಲ್ಲಿ 20 ವರ್ಷ ಪ್ರಾಯದ ಪಶ್ಚಿಮ ಬಂಗಾಲ ಮೂಲದ ರಾಜೀಬ್ ಅಲಿಯಾಸ್ ಚೋಟು ಎನ್ನುವ ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ, 56 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.
ಘಟನೆ ಹಿನ್ನೆಲೆ: 2018 ಫೆಬ್ರವರಿ ತಿಂಗಳಿನಲ್ಲಿ ಉಡುಪಿ ಜಿಲ್ಲೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಪಶ್ಚಿಮ ಬಂಗಾಲ ಮೂಲದ ರಾಜೀಬ್ ರಸ್ತೆ ಕೆಲಸಕ್ಕೆಂದು ಬಂದಿದ್ದು 14 ವರ್ಷದ ಬಾಲಕಿಯನ್ನು ಮನೆಯಿಂದ ಅಪಹರಿಸಿದ್ದ. ಮಗಳು ಕಾಣೆಯಾದ ಬಗ್ಗೆ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಬಾಲಕಿಯನ್ನು ರೈಲು ನಿಲ್ದಾಣವೊಂದರಲ್ಲಿ ಪತ್ತೆ ಮಾಡಿ ಪೊಲೀಸರು ಕರೆತಂದಿದ್ದರು. ಬಳಿಕ ಆಪ್ತ ಸಮಾಲೋಚನೆ ವೇಳೆ ಬಾಲಕಿಯು ಒಂದನೇ ಆರೋಪಿ ರಾಜೀಬ್ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಹಾಗೂ ಇತರ ಐವರ ವಿರುದ್ಧ ಮಾಹಿತಿ ನೀಡಿದ ಆಧಾರದಲ್ಲಿ ಎಲ್ಲರನ್ನು ಬಂಧಿಸಲಾಗಿತ್ತು. ಮೊದಲಿಗೆ ಅಂದಿನ ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ ಭಾಗಶಃ ತನಿಖೆ ನಡೆಸಿದ್ದು ತರುವಾಯ ಡಿವೈಎಸ್ಪಿ ಟಿ.ಆರ್. ಜೈಶಂಕರ್ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
46 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 28 ಸಾಕ್ಷಿಗಳ ವಿಚಾರಣೆ ನಡೆದಿದ್ದು ಸಂತ್ರಸ್ತ ಬಾಲಕಿ ನುಡಿದ ಸಾಕ್ಷಿ ಹಾಗೂ ಆಕೆ ಸಹೋದರ, ಸಹೋದರಿ ಸಾಕ್ಷಿಗಳು, ಸಾಂದರ್ಭಿಕ ಸಾಕ್ಷಿಗಳು ಮೊದಲನೇ ಆರೋಪಿ ಅಪರಾಧಿ ಎಂಬುದನ್ನು ಸಾಬೀತು ಪಡಿಸಲು ಪ್ರಾಸಿಕ್ಯೂಶನ್ ಪರವಾಗಿತ್ತು. ಉಳಿದ ಐವರು ಆರೋಪಿಗಳು ಖುಲಾಸೆಗೊಂಡಿದ್ದಾರೆ.
ಪ್ರಕರಣದಲ್ಲಿ ಅಪರಾಧಿಯಾದ ರಾಜೀಬ್ ಮೇಲೆ ಪರಿಶಿಷ್ಟ ಜಾತಿಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಆಜೀವ ಕಾರಾಗೃಹ ಶಿಕ್ಷೆ ಸಹಿತ ಅಪಹರಣ, ಅತ್ಯಾಚಾರ ಮೊದಲಾದ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಿದ್ದು 56 ಸಾವಿರ ರೂ. ದಂಡ ವಿಧಿಸಲಾಗಿದೆ.
ಈ ದಂಡದಲ್ಲಿ 16 ಸಾವಿರ ರೂ. ಸರಕಾರಕ್ಕೆ ಹಾಗೂ 40 ಸಾವಿರ ರೂ. ನೊಂದ ಬಾಲಕಿಗೆ ನೀಡಲು ಆದೇಶಿಸಿದ್ದಲ್ಲದೆ ಸಂತ್ರಸ್ತೆಗೆ 5 ಲಕ್ಷ ಪರಿಹಾರವನ್ನು ಸರಕಾರ ನೀಡುವಂತೆ ನ್ಯಾಯಾಲಯ ತೀರ್ಪು ನೀಡಿದೆ. ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಪ್ರಾಸಿಕ್ಯೂಶನ್ ಪರವಾಗಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ