“ಉದಯವಾಣಿ” ಹೆಸರು,ಟ್ರೇಡ್‌ಮಾರ್ಕ್‌ನ ಅಕ್ರಮ ಬಳಕೆಗೆ ತಡೆಯಾಜ್ಞೆ


Team Udayavani, Dec 18, 2022, 6:40 AM IST

“ಉದಯವಾಣಿ” ಹೆಸರು,ಟ್ರೇಡ್‌ಮಾರ್ಕ್‌ನ ಅಕ್ರಮ ಬಳಕೆಗೆ ತಡೆಯಾಜ್ಞೆ

ಉಡುಪಿ: “ಉದಯವಾಣಿ’ಯ ಹೆಸರು ಮತ್ತು ಟ್ರೇಡ್‌ ಮಾರ್ಕ್‌ ಅನ್ನು (Udayavani.com) ಯಾವುದೇ ವ್ಯಕ್ತಿಗಳು ಮತ್ತು ಸಂಸ್ಥೆಗಳು ಬಳಸಿಕೊಳ್ಳದಂತೆ ನಿರ್ಬಂಧ ವಿಧಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಶುಕ್ರವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ಅಮರೇಶ್‌ ಕಮನಕೇರಿ ಎಂಬವರು “ಉದಯವಾಣಿ ಕನ್ನಡ ಮತ್ತು ಇಂಗ್ಲಿಷ್‌ ನ್ಯೂಸ್‌ ಮೀಡಿಯಾ’ ಹೆಸರನ್ನೇ ತಮ್ಮ ಡಿಜಿಟಲ್‌ ಮತ್ತು ಮಾಧ್ಯಮ ಸಂಸ್ಥೆಗೆ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಇದು ಸಾರ್ವಜನಿಕರಲ್ಲಿ “ಉದಯವಾಣಿ’ ದೈನಿಕದ ಕುರಿತು ಗೊಂದಲ ಸೃಷ್ಟಿಸುವುದಲ್ಲದೇ, ತಪ್ಪು ಅಭಿಪ್ರಾಯವನ್ನೂ ಮೂಡಿಸಲಿದೆ. ಈ ಹಿನ್ನೆಲೆಯಲ್ಲಿ ಉದಯವಾಣಿ ಹೆಸರನ್ನು ಅನ್ಯರು ಅಕ್ರಮವಾಗಿಬಳಸುತ್ತಿರುವುದರ ವಿರುದ್ಧ ಮಣಿಪಾಲ್‌ ಮೀಡಿಯಾ ನೆಟ್‌ವರ್ಕ್‌ ಲಿ. ಉಡುಪಿಯ ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ಮೊಕದ್ದಮೆ (ಒ.ಎಸ್‌. 2/2022) ದಾಖಲಿಸಿತ್ತು.

ಡಿ. 16 ರಂದು ನ್ಯಾಯಾಧೀಶರು ಅಮರೇಶ್‌ ಕಮನಕೇರಿ ಸಹಿತ ಇನ್ನಾವುದೇ ವ್ಯಕ್ತಿಗಳು ಮುಂದಿನ ತಾರೀಕಿನವರೆಗೆ”ಉದಯವಾಣಿ’ ಹೆಸರು ಮತ್ತು ಟ್ರೇಡ್‌ಮಾರ್ಕ್‌ ಬಳಕೆ ಮಾಡದಂತೆ ನಿರ್ಬಂಧಿಸಿ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ.

ಮುದ್ರಣ ಮತ್ತು ಪ್ರಕಾಶನ ಸಂಸ್ಥೆಯಾದ ಮಣಿಪಾಲ್‌ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌(ಎಂಎಂಎನ್‌ಎಲ್‌) 1970ರಿಂದ ಹೆಸರಾಂತಕನ್ನಡ ದೈನಿಕ “ಉದಯವಾಣಿ’ಯನ್ನು ಪ್ರಕಟಿಸುತ್ತಿದೆ. ಜತೆಗೆ ಮಣಿ ಪಾಲ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ದಾವಣಗೆರೆ, ಮುಂಬಯಿಯಲ್ಲಿ ಉದಯವಾಣಿಯ ಆವೃತ್ತಿಗಳು ಏಕಕಾಲದಲ್ಲಿ ನಿತ್ಯವೂ ಪ್ರಕಟವಾಗುತ್ತಿವೆ.

ಇದರ ಜತೆ “ತರಂಗ’, “ತುಷಾರ’, “ತುಂತುರು’ ನಿಯತಕಾಲಿಕೆಗಳನ್ನು ಎಂಎಂಎನ್‌ಎಲ್‌ ಮುದ್ರಿಸಿ ಪ್ರಕಟಿಸುತ್ತಿದೆ. ಎಂಎಂಎನ್‌ ಎಲ್‌ ಸಂಸ್ಥೆಯು ಟ್ರೇಡ್‌ಮಾರ್ಕ್‌ನ ಮಾಲಕತ್ವವನ್ನು ಹೊಂದಿದೆ. ಈ ಟ್ರೇಡ್‌ಮಾರ್ಕ್‌ ಅನ್ನು ದೇಶ-ವಿದೇಶಗಳಲ್ಲಿ ಸಂಸ್ಥೆಯು ತನ್ನ ಎಲ್ಲಕಾರ್ಯಚಟುವಟಿಕೆಗಳಲ್ಲಿ ಬಳಸುತ್ತಿದ್ದು, ಇನ್ನು ಮುಂದೆಯೂ ಇದೇ ಸಂಸ್ಥೆಯ ಭಾಗವಾಗಿರಲಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.