ಅಮಾಯಕನಿಗೆ ಹಲ್ಲೆ ಪ್ರಕರಣ: ಎಸ್‌ಐ, ಇನ್‌ಸ್ಪೆಕ್ಟರ್‌ ವಿರುದ್ಧ ಜಾಮೀನು ರಹಿತ ವಾರಂಟ್‌


Team Udayavani, Dec 8, 2022, 6:50 AM IST

ಅಮಾಯಕನಿಗೆ ಹಲ್ಲೆ ಪ್ರಕರಣ: ಎಸ್‌ಐ, ಇನ್‌ಸ್ಪೆಕ್ಟರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಉಡುಪಿ: ಯುವಕನ ಮೇಲಿನ ಹಲ್ಲೆ ಮತ್ತು ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಿರಂತರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಎಸ್‌ಐ ಶಕ್ತಿವೇಲು ಮತ್ತು ಪೊಲೀಸ್‌ ನಿರೀಕ್ಷಕ ಶರಣಗೌಡ ವಿರುದ್ಧ ಉಡುಪಿ ಪ್ರಿನ್ಸಿಪಲ್‌ ಸಿವಿಲ್‌ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ನ.28ರಂದು ಜಾಮೀನು ರಹಿತ ವಾರಂಟ್‌ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ
ಉಡುಪಿ ಹೂಡೆಯ ನಿವಾಸಿ ಹಿದಾಯತುಲ್ಲ (27) ಅವರ ಮನೆಗೆ ಪೊಲೀಸ್‌ ಅಧಿಕಾರಿಗಳಾದ ಶಕ್ತಿವೇಲು ಮತ್ತು ಶರಣಗೌಡ ಮತ್ತವರ ಏಳು ಮಂದಿಯ ತಂಡ 2021ರ ನ.29 ರ ತಡರಾತ್ರಿ ಸುಮಾರು 2.30 ರ ವೇಳೆಗೆ ಮನೆಗೆ ಅಕ್ರಮವಾಗಿ ನುಗ್ಗಿ ಹಿದಾಯತುಲ್ಲ ಅವರಿಗೆ ಥಳಿಸಿ ಕಾನೂನು ಬಾಹಿರವಾಗಿ ಬಂಧಿಸಿದ್ದರು. ಬಳಿಕ ಠಾಣೆಗೆ ಕರೆದುಕೊಂಡು ಹೋಗಿ ಅಲ್ಲಿ ಬೂಟಿನಿಂದ ಥಳಿಸಿ, ಲಾಟಿಯಿಂದ ಹೊಡೆದು, ನಿಂದಿಸಿದ್ದರು. ಎನ್‌ಕೌಂಟರ್‌ ಮಾಡಿ ಮುಗಿಸುತ್ತೇವೆ ಎಂದಿದ್ದಲ್ಲದೆ ತಪ್ಪೊಪ್ಪಿಗೆ ಬರಹಕ್ಕೆ ಸಹಿ ಮಾಡಲು ನಿರಂತರವಾಗಿ ದೈಹಿಕ ಹಲ್ಲೆ ನಡೆಸಿದ್ದರು.

ಮಾರಣಾಂತಿಕವಾಗಿ ಹಲ್ಲೆಗೀಡಾದ ಹಿದಾಯತುಲ್ಲ ನನ್ನು 2021 ರ ಡಿ. 4ರಂದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಅಲ್ಲದೆ ಹಲ್ಲೆ ಘಟನೆ ಬಗ್ಗೆ ವೈದ್ಯರಿಗಾಗಲೀ, ನ್ಯಾಯಾಧೀಶರಿಗಾಗಲಿ ತಿಳಿಸಿದ್ದಲ್ಲಿ ಜೀವನಪೂರ್ತಿ ಜೈಲಲ್ಲಿ ಕೊಳೆಯುವಂತೆ ಮಾಡುವುದಾಗಿ ಪೊಲೀಸರು ಬೆದರಿಸಿದ್ದರು. ಘಟನೆಯ ಬಗ್ಗೆ ತನಗೆ ನ್ಯಾಯ ದೊರಕಿಸಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿದಾಯತುಲ್ಲಾ ಉಡುಪಿ ನ್ಯಾಯಾಲಯದಲ್ಲಿ ಖಾಸಗಿ ಪಿರ್ಯಾದಿ ದಾಖಲಿಸಿದ್ದರು. ಈ ಬಗ್ಗೆ ತನ್ನ ಪತ್ನಿ ಸೇರಿ ಹಲವು ಸಾಕ್ಷೀದಾರರನ್ನು ನ್ಯಾಯಲಯದ ಮುಂದಿರಿಸಿ ಘಟನೆಯ ಬಗ್ಗೆ ನ್ಯಾಯಾಲಯದ ಮುಂದೆ ವಿವರಿಸಿದ್ದರು. ದೂರನ್ನು ಮಾನ್ಯ ಮಾಡಿದ ನ್ಯಾಯಾಲಯ ಮಲ್ಪೆ ಠಾಣೆಯ ಅಂದಿನ ಎಸ್‌.ಐ. ಶಕ್ತಿವೇಲು ಮತ್ತು ಸರ್ಕಲ್‌ ಶರಣಗೌಡ ವಿರುದ್ಧ ದೂರು ದಾಖಲಿಸಲು ಆದೇಶಿಸಿತ್ತು. ಅನಂತರ ನ್ಯಾಯಾಲಯಕ್ಕೆ ಆರೋಪಿಗಳು ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಲಾಗಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ವಾರಂಟ್‌ ಜಾರಿ ಮಾಡಲಾಗಿದೆ.

ಟಾಪ್ ನ್ಯೂಸ್

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

arrest

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಸೆರೆ

exam

ಉಭಯ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಸುಗಮ ಆರಂಭ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

exam

ಉಭಯ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಸುಗಮ ಆರಂಭ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ

fishing boats

ಬಂದರುಗಳಲ್ಲಿ ಹೂಳೆತ್ತಿದರೆ ಮೀನುಗಾರರು ನಿರಾತಂಕ

7-shirwa

ಆಟಿಸಂ ಮಕ್ಕಳ ಸಮಸ್ಯೆ ಬಗ್ಗೆ ಸರಕಾರವನ್ನು ಎಚ್ಚರಿಸಬೇಕಿದೆ: ಡಾ| ಭಂಡಾರಿ

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು