ಡ್ರಗ್ಸ್ ಪೆಡ್ಲರ್ಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ವಶ
Team Udayavani, Jan 18, 2023, 1:40 AM IST
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಿರಿಯಡಕದ ರಾಘವೇಂದ್ರ ದೇವಾಡಿಗ (41), ಅಲೆವೂರಿನ ಜಗದೀಶ್ ಪೂಜಾರಿ (32) ಬಂಧಿತರು. ಸೆನ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ 1 ಕೆ.ಜಿ.176 ಗ್ರಾಂ ತೂಕದ ಗಾಂಜಾ, 10 ಗ್ರಾಂ ತೂಕದ Methamphetamine Durg, ನೋಂದಣಿ ಸಂಖ್ಯೆ ಇಲ್ಲದ ಸ್ಕೂಟರ್, ಎರಡು ಪೊಬೈಲ್ ಫೋನ್, ವೇಯಿಂಗ್ ಮೆಶಿನ್, ಪೌಡರ್ ಪ್ಯಾಕ್ ಮಾಡಲು ಬಳಸುವ ಕವರ್ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ವಶಪಡಿಸಿಕೊಂಡ Metham phetamine Durg ಮೌಲ್ಯ 45,000 ರೂ. ಆಗಿದೆ. ಗಾಂಜಾದ ಮೌಲ್ಯ 28,000 ರೂ., ಸ್ಕೂಟರ್ ಮೌಲ್ಯ 80,000 ರೂ.ಆಗಿದೆ.
ವಶಪಡಿಸಿಕೊಂಡಿರುವ ಮೊಬೈಲ್ ಫೋನ್ಗಳ ಮೌಲ್ಯ 55 ಸಾವಿರ ರೂ., ವೇಯಿಂಗ್ ಮೆಶಿನ್ ಮೌಲ್ಯ 1 ಸಾವಿರ ರೂ. ಆಗಿದೆ. ವಶಪಡಿಸಿಕೊಂಡ ಎಲ್ಲ ವಸ್ತುಗಳ ಮೌಲ್ಯ 2,09,000 ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯಾದ್ಯಂತ ಸಕ್ರಿಯ
ಬಂಧಿತ ರಾಘವೇಂದ್ರ ದೇವಾಡಿಗ ಜಿಲ್ಲೆಯಾದ್ಯಂತ ಡ್ರಗ್ಸ್ ಹಾಗೂ ಮಾದಕ ವ್ಯಸನ ಪೂರೈಕೆಯಲ್ಲಿ ಸಕ್ರಿಯನಾಗಿದ್ದಾನೆ. ಶ್ವಾನಪ್ರಿಯನಾಗಿರುವ ಈತ ಡಾಗ್ ರಾಘು ಎಂದೇ ಕುಖ್ಯಾತಿ ಪಡೆದಿದ್ದಾನೆ. ಈ ಹಿಂದೆಯೂ ಪೊಲೀಸರು ಈತನನ್ನು ವಶಕ್ಕೆ ತೆಗೆದುಕೊಂಡಿದ್ದರು. ಮತ್ತೂರ್ವ ಆರೋಪಿ ಜಗದೀಶ್ ಹಗಲು ಹೊತ್ತಿನಲ್ಲಿ ಮೀನು ಮಾರಾಟ ಮಾಡುವ ಪ್ರವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ಈತನ ಆಪ್ತನಾಗಿದ್ದಾನೆ.
ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಮಾದಕ ವಸ್ತುಗಳ ಮೂಲದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ