ಉಡುಪಿಯಿಂದ ಇನ್ನೋವಾ ಕಾರಿನಲ್ಲಿ ವ್ಯಕ್ತಿಯ ಅಪಹರಣ!

ಪ್ರಕರಣ ಸುಖಾಂತ್ಯ: ಕೂಳೂರಿನಲ್ಲಿ ಕಾರನ್ನು ಅಡ್ಡಗಟ್ಟಿ ವಶಕ್ಕೆ ಪಡೆದ ಪೊಲೀಸರು

Team Udayavani, Sep 11, 2022, 6:50 AM IST

ಉಡುಪಿಯಿಂದ ಇನ್ನೋವಾ ಕಾರಿನಲ್ಲಿ ವ್ಯಕ್ತಿಯ ಅಪಹರಣ!

ಉಡುಪಿ: ಇನ್ನೋವಾ ಕಾರಿನಲ್ಲಿ ಬಂದಿದ್ದ ತಂಡ ಶನಿವಾರ ಉಡುಪಿಯ ಶ್ರೀಕೃಷ್ಣ ಮಠದ ಸಮೀಪದಿಂದ ವ್ಯಕ್ತಿಯೋರ್ವರನ್ನು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿ ಅಪಹರಿಸಿದ್ದು, ಆ ಕಾರನ್ನು ಮಂಗಳೂರಿನ ಕೂಳೂರು ಸಮೀಪ ದಲ್ಲಿ ಪೊಲೀಸರು ಅಡ್ಡಗಟ್ಟಿದ್ದು, ಕಾರಿನಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ!

ಕಂಟ್ರೋಲ್‌ ರೂಂಗೆ ಮಾಹಿತಿ
ಬೆಂಗಳೂರು ನೋಂದಣಿಯ ಇನ್ನೋವಾ ಕಾರಿನಲ್ಲಿ ಬಂದಿದ್ದ ತಂಡದವರು ಕಾರಿನಿಂದ ಇಳಿದು ಒಬ್ಬರನ್ನು ಬಲವಂತವಾಗಿ ಕಾರಿಗೆ ಹಾಕಿಕೊಂಡು ಹೋಗಿದ್ದರು. ಇದನ್ನು ಕಂಡ ಸ್ಥಳೀಯರು ಅಪಹರಣವಾಗಿರುವ ಬಗ್ಗೆ ಪೊಲೀಸ್‌ ಕಂಟ್ರೋಲ್‌ ರೂಂಗೆ ಮಾಹಿತಿ ನೀಡಿದ್ದರು. ಕೂಡಲೇ ಅಲರ್ಟ್‌ ಆದ ಉಡುಪಿ ನಗರ ಪೊಲೀಸರು ವಿವಿಧ ವಿಭಾಗ ಹಾಗೂ ಠಾಣೆಗಳಿಗೆ ಎಚ್ಚರಿಕೆ ನೀಡಿದ್ದರು. ವಾಹನ ಕಲ್ಸಂಕ ಮಾರ್ಗವಾಗಿ ಕರಾವಳಿ ಬೈಪಾಸ್‌ ತಲುಪಿರುವ ಬಗ್ಗೆ ಟ್ರಾಫಿಕ್‌ ಪೊಲೀಸರು ಮಾಹಿತಿ ಕಲೆ ಹಾಕಿದ್ದರು. ಅಲ್ಲಿಂದ ಹೆಜಮಾಡಿ ಟೋಲ್‌ಗೇಟ್‌ ದಾಟಿ ಮುಂದೆ ಹೋಗಿರುವ ಬಗ್ಗೆ ಸಿಸಿ ಕೆಮರಾ ದೃಶ್ಯಾವಳಿಗಳಿಂದ ಪೊಲೀಸರಿಗೆ ತಿಳಿದುಬಂದಿತ್ತು.

ಅನಂತರ ಉಡುಪಿ ಪೊಲೀಸರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಕೂಳೂರು ಬಳಿ ಪೊಲೀಸರು ಇನ್ನೋವಾ ಕಾರನ್ನು ತಡೆದು ನಿಲ್ಲಿಸಿ ಕಾರಿನಲ್ಲಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದರು.

ವಿಚಾರಣೆಯಲ್ಲಿ ಪೊಲೀಸರು
ಕಂಡುಕೊಂಡ ಸತ್ಯ
ಪೊಲೀಸರು ವಶಕ್ಕೆ ಪಡೆದ ನಾಲ್ವರನ್ನೂ ವಿಚಾರಣೆ ನಡೆಸಿದಾಗ ಕೆಲಕಾಲ ಸಂಚಲನ ಉಂಟು ಮಾಡಿದ್ದ ಇಡೀ ಪ್ರಕರಣ ತಿರುವು ಪಡೆದುಕೊಂಡಿತ್ತು. ಒಮ್ಮೆಗೆ ಪೊಲೀಸರೇ ದಂಗಾಗಿ ಬಿಟ್ಟರು. ತಮ್ಮ ಕಾರ್ಯಾಚರಣೆಯ ಬಗ್ಗೆ ಮಾತ್ರ ಹೆಮ್ಮೆ ಪಟ್ಟುಕೊಂಡರು. ಇಲ್ಲಿ ನಿಜಕ್ಕೂ ಅಪಹರಣವಾಗಿರಲಿಲ್ಲ.

ಕಾರಿನಲ್ಲಿದ್ದವರು ವೈದ್ಯರು. ಘಟನೆಯ ನಿಜಾಂಶವೆಂದರೆ, ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್‌ ಕಾಲೇಜಿನಿಂದ ತಪ್ಪಿಸಿಕೊಂಡು ಉಡುಪಿಗೆ ಬಂದಿದ್ದ ಮಾನಸಿಕ ಅಸ್ವಸ್ಥ ರೋಗಿಯನ್ನು ಮನೆಯವರು ರಕ್ಷಣೆ ಮಾಡಿದ್ದು.

ಘಟನೆಯ ವಿವರ
ಸೆ. 8ರಂದು ಬೆಂಗಳೂರಿನ ರಾಜರಾಜೇಶ್ವರೀ ನಗರದ ಬಳಿ ಇರುವ ಮಾನಸಿಕ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಬಂದ ಯೋಗೀಶ್‌ ಭಟ್‌ (54) ಅವರು ಉಡುಪಿಯ ಎಂಜಿಎಂ ಸಮೀಪದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಆದರೆ ಇಲ್ಲಿಯೂ ಅವರ ಉಪಟಳ ಹೆಚ್ಚಿತ್ತು. ಈ ಬಗ್ಗೆ ಮನೆಯವರೇ ಆಸ್ಪತ್ರೆಯವರಿಗೆ ಮಾಹಿತಿ ನೀಡಿದ್ದರು. ಈ ನಡುವೆ ಯೋಗೀಶ್‌ ಭಟ್‌ ಅವರು ಮನೆಯಿಂದ ಕೃಷ್ಣ ಮಠದತ್ತ ತೆರಳಿದ್ದರು. ಇತ್ತ ಬೆಂಗಳೂರಿನಿಂದ ಬಂದಿದ್ದ ಮಾನಸಿಕ ವೈದ್ಯರ ತಂಡ ಉಡುಪಿಯ ಕನಕದಾಸ ರಸ್ತೆಯಲ್ಲಿ ಅವರನ್ನು ಪತ್ತೆ ಹಚ್ಚಿ ಇನ್ನೋವಾ ಕಾರಿನೊಳಗೆ ಬಲವಂತವಾಗಿ ಕೂರಿಸಿಕೊಂಡಿದ್ದರು. ಇದನ್ನು ಕಂಡ ಸ್ಥಳೀಯರು ಕಂಟ್ರೋಲ್‌ ರೂಮ್‌ಗೆ ಮಾಹಿತಿ ನೀಡಿದ್ದರು. ಅನಂತರ ಪೊಲೀಸರು ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ಕಾರನ್ನು ಕೂಳೂರಿನಲ್ಲಿ ಪತ್ತೆ ಹಚ್ಚಿ ಘಟನೆಯ ನಿಜಾಂಶ ಕಂಡುಕೊಂಡರು. ಅನಂತರ ವೈದ್ಯರ ತಂಡ ಹಾಗೂ ರೋಗಿಗೆ ಬೆಂಗಳೂರಿಗೆ ತೆರಳಲು ಅನುಮತಿಸಿದ್ದಾರೆ. ಈ ಕಾರ್ಯಾಚರಣೆಯ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದರೆ ಈ ಘಟನೆ ಕೆಲಕಾಲ ಆತಂಕ ಸೃಷ್ಟಿಸಿದ್ದಂತೂ ಸತ್ಯ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.