ಕಡಿಯಾಳಿ: ಅ. 5ರಂದು “ಉಡುಪಿ ದಾಂಡಿಯಾ-2019′ ನೃತ್ಯ
Team Udayavani, Oct 3, 2019, 5:37 AM IST
ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ಆಶ್ರಯದಲ್ಲಿ ಸಹಸಂಸ್ಥೆಗಳಾದ ಮಹಿಳಾ ಮಂಡಳಿ, ಅವಿಘ್ನ ವ್ಯಾಘ್ರಾಸ್ ಅವರಿಂದ ಕಡಿಯಾಳಿ ಯು. ಕಮಲಾ ಬಾೖ ಪ್ರೌಢಶಾಲಾ ವಠಾರದಲ್ಲಿ ಅ. 5ರ ಸಂಜೆ 5ರಿಂದ ರಾತ್ರಿ 10ರ ತನಕ “ಉಡುಪಿ ದಾಂಡಿಯಾ-2019′ ನೃತ್ಯ ಪ್ರದರ್ಶನಗೊಳ್ಳಲಿದೆ.
ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ. ಸ್ಕೌಟ್/ಗೈಡ್ಸ್ ಆಯುಕ್ತೆ ಶಾಂತಾ ವಿ.ಎಸ್. ಆಚಾರ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಮಣಿಪಾಲ ಪವರ್ ಸಂಸ್ಥೆಯ ಅಧ್ಯಕ್ಷೆ ಶ್ರುತಿ ಜಿ. ಶೆಣೈ, ಸಂಯೋಜಕರಾಗಿ ಶಿಲ್ಪಾ ರಘುಪತಿ ಭಟ್ ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪ್ರಕಟನೆ ತಿಳಿಸಿದೆ.
ಮಹಿಳೆಯರು ಮಾತ್ರ
ದಾಂಡಿಯಾ ಕಾರ್ಯಕ್ರಮದಲ್ಲಿ ನೃತ್ಯ ಮಾಡಲು ಮಹಿಳೆಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉತ್ತಮ ನೃತ್ಯ, ಉತ್ತಮ ಉಡುಗೆಗಳಿಗೆ ವಿಶೇಷ ಬಹುಮಾನ ನೀಡಲಾಗುವುದು. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲ ಪ್ರೇಕ್ಷಕರ ವಾಹನಗಳ ಪಾರ್ಕಿಂಗ್ಗೆ ಕಡಿಯಾಳಿ ಹಿ.ಪ್ರಾ.ಶಾಲಾ ಮೈದಾನದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಮಹಿಳೆಯರು, ಯುವತಿಯರು, ಹೆಣ್ಮಕ್ಕಳು ಸೇರಿ ಗುಂಪು ನೃತ್ಯ ಮಾಡಲಿದ್ದಾರೆ.
ಕಾರ್ಯಕ್ರಮ ಯಶಸ್ಸಿಗಾಗಿ ಮಹಿಳಾ ಮಂಡಳಿ ನೇತೃತ್ವದಲ್ಲಿ ಕಳೆದ ತಿಂಗಳಿಂದ ತರಬೇತಿ ನಡೆಯುತ್ತಿದೆ. ಪುರುಷರಿಗೆ ಕಾರ್ಯಕ್ರಮ ವೀಕ್ಷಿಸಲು ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ