ಅನಗತ್ಯ ಓಡಾಟ ನಡೆಸಿದ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಉಡುಪಿ ಡಿಸಿ
Team Udayavani, May 28, 2021, 5:15 PM IST
ಮಣಿಪಾಲ: ಇಂದು ಮಣಿಪಾಲದಲ್ಲಿ ಸ್ವತಃ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಅನಗತ್ಯವಾಗಿ ಓಡಾಟ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದರು. ಸುಮಾರು 35 ವಾಹನಗಳನ್ನು ವಶಕ್ಕೆ ಪಡೆದು ದಂಡ ವಿಧಿಸಿದ್ದಾರೆ.
ಮಣಿಪಾಲ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಮತ್ತು ಸಬ್ ಇನ್ಸ್ಪೆಕ್ಟರ್ ರಾಜ್ ಶೇಖರ್ ವಂದಲಿ ಅವರು ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿದ್ದು, ನಿಯಮ ಉಲ್ಲಂಘಿಸಿದ 25 ರಿಂದ 35 ವಾಹನಗಳನ್ನು ಸೀಝ್ ಮಾಡಿದ್ದಾರೆ.ಹಾಗೂ 7 ರಿಂದ 9 ವಾಹನಗಳ ಮೇಲೆ ಕೇಸು ದಾಖಲಿಸಿ 20 ಸಾವಿರ ರೂಪಾಯಿ ದಂಡ ಹಾಕಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳು ಶಿರ್ವ ಲಸಿಕಾ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನು ಜೂನ್ 7 ವರೆಗೆ ಲಾಕ್’ಡೌನ್ ಮುಂದುವರಿದಿದ್ದು ಜಿಲ್ಲೆಯಲ್ಲಿ ಹತ್ತು ಗಂಟೆಯ ನಂತರ ಬೇಕಾಬಿಟ್ಟಿ ಓಡಾಡಿದರೆ ಪ್ರಕರಣ ದಾಖಲಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ