ತೆರಿಗೆ ಹಣ ವ್ಯಯ ಸಾರ್ಥಕವಾಗಲು ಮತ ಚಲಾಯಿಸಿ


Team Udayavani, Apr 5, 2018, 6:05 AM IST

Udupi-Dc–888.jpg

ಉಡುಪಿ: ವಿಧಾನಸಭಾ ಚುನಾವಣೆಯನ್ನು ನಿರ್ವಹಿಸುವ ಪೂರ್ಣ ಜವಾಬ್ದಾರಿ ಹೊತ್ತಿರುವ ಉಡುಪಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವವರು. ಜಿಲ್ಲಾ ಪಂಚಾಯತ್‌ ಸಿಇಒ ಆಗಿ ಒಂದು ವರ್ಷ, ಜಿಲ್ಲಾಧಿಕಾರಿಯಾಗಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಅವರಿಗೆ ಇದೆ. ಏತನ್ಮಧ್ಯೆ ಎರಡೂ ಜವಾಬ್ದಾರಿಗಳನ್ನು ಏಕಕಾಲದಲ್ಲಿ ನಿರ್ವಹಿಸಿದ್ದಾರೆ. ಪ್ರಿಯಾಂಕಾ ಅವರ ಕಾರ್ಯದಕ್ಷತೆ, ಧೈರ್ಯಕ್ಕೆ ಕಳೆದ ವರ್ಷ ಮರಳು ಮಾಫಿಯಾ ವಿರುದ್ಧ ರಾತ್ರೋರಾತ್ರಿ ನಡೆಸಿದ ದಾಳಿಯೇ ಸಾಕ್ಷಿ.

ಈಗ ಚುನಾವಣೆಯ ಕಾಲದಲ್ಲಿ ಅವರಿಗೆ ವಿಶೇಷಾಧಿ ಕಾರವಿರುತ್ತದೆ, ಜತೆಗೆ ಮತದಾನ ಹೆಚ್ಚಳವಾಗುವಂತೆ ಮಾಡುವ ಹೊಣೆಗಾರಿಕೆಯೂ ಇರುತ್ತದೆ. “ಚುನಾವಣೆ ಎಂದಾಗ ಅಕ್ರಮಗಳನ್ನು ನಡೆಸಲು ಯತ್ನಿಸುವುದು ಸಹಜ, ಇವುಗಳನ್ನು ನಿಯಂತ್ರಿಸಿ ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ನೋಡಿಕೊಳ್ಳುವ ಹೊಣೆಗಾರಿಕೆ ಇದೆ. ಇವೆಲ್ಲವನ್ನು ನಿಭಾಯಿಸುತ್ತೇನೆ’ ಎಂಬ ವಿಶ್ವಾಸ ತಿರುವನಂತಪುರ ಮೂಲದ, 2009ರ ಬ್ಯಾಚ್‌ನ ಈ ಮಹಿಳಾ ಐಎಎಸ್‌ ಅಧಿಕಾರಿಗೆ ಇದೆ. 

ಚುನಾವಣೆ ಸಿದ್ಧತೆಗಳ ಕುರಿತು ಅವರು “ಉದಯವಾಣಿ’ಯೊಂದಿಗೆ ನಡೆಸಿದ ಮಾತುಕತೆ ಇಂತಿದೆ: 

ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 1,103 ಮತಗಟ್ಟೆಗಳಿವೆ. ಕೇವಲ ಮತಗಟ್ಟೆಗಳಿಗಾಗಿಯೇ 5,515 ಸಿಬಂದಿ ಅಗತ್ಯವಿದೆ. ಫ್ಲೈಯಿಂಗ್‌ ಸ್ಕ್ವಾಡ್‌ ತಂಡಗಳು ಸೇರಿ ಸುಮಾರು 6,000 ಸಿಬಂದಿ ಅಗತ್ಯವಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಭದ್ರತೆಯ ದೃಷ್ಟಿಯಲ್ಲಿ 1,201 ಪೊಲೀಸರು, 15 ಸಿಆರ್‌ಪಿಎಫ್ ತುಕಡಿಗಳನ್ನು (ಒಂದು ತುಕಡಿಯಲ್ಲಿ 100 ಸಿಬಂದಿ) ಬಳಸಲಾಗಿತ್ತು. ಈ ಬಾರಿಯೂ ಹೆಚ್ಚು ಕಡಿಮೆ ಇಷ್ಟೇ ಮಾನವ ಶಕ್ತಿ ಬೇಕಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ ಚುನಾವಣೆಯನ್ನು ನಡೆಸಲು ಸುಮಾರು 70 ಲ. ರೂ. ವೆಚ್ಚ ತಗಲುತ್ತದೆ.

ಸೂಕ್ಷ್ಮ- ಅತಿಸೂಕ್ಷ್ಮ ಮತಗಟ್ಟೆ
ಕಳೆದೊಂದು ವರ್ಷದಲ್ಲಿ ಮತಗಟ್ಟೆ ವ್ಯಾಪ್ತಿಯಲ್ಲಿ ನಡೆದ ಕೋಮು ಗಲಭೆ, ಸಂಘರ್ಷ, ಅತ್ಯಾಚಾರ ಪ್ರಕರಣ, ಹಿಂದಿನ ಚುನಾವಣೆಯಲ್ಲಿ ಒಂದೇ ಪಕ್ಷಕ್ಕೆ ಅತಿ ಹೆಚ್ಚು ಮತ ಬಿದ್ದಿರುವುದು, ಮತದಾರರಿಗೆ ಬೆದರಿಕೆಯೊಡ್ಡಿರುವುದು ಹೀಗೆ 23 ಅಂಶಗಳನ್ನು ಗಣಿಸಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಲಾಗುತ್ತದೆ. 23 ಅಂಶಗಳಲ್ಲಿ ಒಂದು ಅಂಶ ಇದ್ದರೂ ಸೂಕ್ಷ್ಮ- ಅತಿಸೂಕ್ಷ್ಮ ಎಂದು ಪರಿಗಣಿಸುತ್ತೇವೆ. ಈಗಿನ್ನೂ ಇದನ್ನು ಅಂತಿಮಗೊಳಿಸಿಲ್ಲ. ಚುನಾವಣೆ ಸಮೀಪಿಸುವಾಗ ಈ ವರ್ಗೀಕರಣಗಳನ್ನು ಘೋಷಿಸುತ್ತೇವೆ. 

ಚುನಾವಣಾ ಆಯೋಗವು ಮದ್ಯ ಮತ್ತು ಹಣ ಬಲವನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ. ಅದರ ಪ್ರಕಾರ ಅನುಮತಿ ಇಲ್ಲದೆ ನಗದು ಮತ್ತು ಚುನಾವಣಾ ಸಾಮಗ್ರಿ ಸಾಗಣೆ, ವೇಳೆ ಮೀರಿ ಅಥವಾ ವೇಳೆಗೆ ಮುನ್ನ ತೆರೆಯುವ ಮದ್ಯದಂಗಡಿಗಳ ಮೇಲೆ ಕ್ರಮ ಇತ್ಯಾದಿ ಕಾನೂನು ಕ್ರಮ ವಹಿಸಲಾಗುತ್ತಿದೆ. ಇಂತಹ ಕಾನೂನು ಉಲ್ಲಂಘನೆಯ ನಾಲ್ಕು ಎಫ್ಐಆರ್‌ಗಳನ್ನು ಪೊಲೀಸ್‌ ಠಾಣೆಗಳಲ್ಲಿ, ಏಳು ಪ್ರಕರಣಗಳನ್ನು ಅಬಕಾರಿ ಕಾಯಿದೆಯಡಿ ದಾಖಲಿಸಲಾಗಿದೆ. 

ಸ್ವೀಪ್‌ – ಮತದಾರ ಜಾಗೃತಿ
ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ವಾದ ಊರುಗಳಲ್ಲಿ ಸ್ವೀಪ್‌ ಸಮಿತಿ ವತಿಯಿಂದ ಮತದಾರರ ಜಾಗೃತಿಗಾಗಿ ಯಕ್ಷಗಾನ ನಡೆಸಲಾಗು ತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಪ್ರಿಸ್ಕ್ರಿಪ್ಷನ್‌ ಚೀಟಿ ಮೇಲೆ ಮತ್ತು ಎಲ್ಲ ಇಲಾಖೆಗಳಿಗೆ ಬರುವ ಅರ್ಜಿಗಳಿಗೆ ಕೊಡುವ ಹಿಂಬರಹಗಳಿಗೆ ಇಲಾಖೆ ಮುದ್ರೆಯೊಂದಿಗೆ “ಮತ ಚಲಾಯಿಸಿ, ಪ್ರಜಾ ಪ್ರಭುತ್ವ ಬೆಳೆಸಿ’ ಎನ್ನುವ ಮುದ್ರೆ ಹಾಕಲಾಗುತ್ತದೆ. ಜಿಲ್ಲೆಯ ಎಲ್ಲ ಗ್ರಾ.ಪಂ., ನಿಗಮ, ಮಂಡಳಿಗಳು ಸೇರಿದಂತೆ ಇಂತಹ ಸುಮಾರು 400 ಮುದ್ರೆಗಳನ್ನು ಸರಬರಾಜು ಮಾಡಲಾಗಿದೆ. ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಮಲ್ಪೆ ಕಡಲ ತೀರದಲ್ಲಿ ಅಂಗವಿಕಲರನ್ನು ಒಳಗೊಳಿಸಿ ಪ್ಯಾರಾಚೂಟ್‌ನಲ್ಲಿ ಮತದಾನ ಜಾಗೃತಿ ಕುರಿತು ಸಂದೇಶ ಸಾರಲಾಗುತ್ತಿದೆ. ವಿದ್ಯಾರ್ಥಿಗಳು ಮನೆಮನೆಗೆ ತೆರಳಿ ಮತದಾನ ಮಾಡುವಂತೆ ವಿನಂತಿಸುತ್ತಿದ್ದಾರೆ. 

ಚುನಾವಣೆ ಸಂಬಂಧಿಸಿ ಅಕ್ರಮಗಳು ನಡೆದಿರುವುದು ಗಮನಕ್ಕೆ ಬಂದರೆ ಸಾರ್ವಜನಿಕರು ದೂರುಗಳನ್ನು ಕಂಟ್ರೋಲ್‌ ರೂಮ್‌ಗೆ (ಟೋಲ್‌ ಫ್ರೀ ನಂಬರ್‌ 1077; 0820-2574802/ 2574360) ಕರೆ ನೀಡಬಹುದು. ಕಂಟ್ರೋಲ್‌ ರೂಮ್‌ ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ. 

ಈ ಬಾರಿ ವಿದ್ಯುನ್ಮಾನ ಮತಯಂತ್ರದ ಜತೆಗೆ ಮತದಾರ ತನ್ನ ಮತ ಸರಿಯಾಗಿ ಚಲಾವಣೆ ಆಗಿದೆಯೇ ಎಂಬುದನ್ನು ಪರಿಶೀಲಿಸಲು ವಿವಿ ಪ್ಯಾಟ್‌ ಯಂತ್ರಗಳಿರುತ್ತವೆ. ಇದರ ಬಗೆಗೆ ಗ್ರಾ.ಪಂ. ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತದಾರರಿಗೆ ಮಾಹಿತಿ ನೀಡಲಾಗುತ್ತಿದೆ. 

ಎ. 8ರಂದು ಮತದಾರರ ಪಟ್ಟಿಯ ವಿಶೇಷ ಅಭಿಯಾನ “ಮಿಂಚಿನ ನೋಂದಣಿ’ಯನ್ನು ಎಲ್ಲ ತಾಲೂಕುಗಳಲ್ಲಿ ಮತಗಟ್ಟೆ ಮಟ್ಟದಲ್ಲಿ ನಡೆಸಲಾಗುತ್ತಿದೆ. ಇದರಲ್ಲಿ ಹೊಸ ಹೆಸರು ಸೇರ್ಪಡೆ, ಹೆಸರು ತೆಗೆಯುವಿಕೆ, ತಿದ್ದುಪಡಿಗಳಿಗೆ ಅವಕಾಶವಿದೆ. ಎ. 14ರ ವರೆಗೂ ಮತದಾರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶವಿದೆ.

ಮಾನವಶಕ್ತಿ, ಖರ್ಚು, ಪರಿಣಾಮ…
ಚುನಾವಣಾ ಸಿಬಂದಿ ಮತ್ತು ಭದ್ರತಾ ಸಿಬಂದಿ ಸೇರಿದಂತೆ ಸುಮಾರು 10,000 ಸಿಬಂದಿ ಕೇವಲ ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಇವರಲ್ಲಿ ಹಿರಿಯ ಅಧಿಕಾರಿಗಳ‌ ಶ್ರಮ ಸುಮಾರು 45 ದಿನಗಳ ಕಾಲವೂ ವಿನಿಯೋಗವಾಗುತ್ತದೆ. ಅಧಿಕೃತವಾಗಿ 70 ಲ. ರೂ. ಖರ್ಚು ತಗಲುತ್ತದೆ ಎಂದು ಹೇಳಿದರೂ ಬಹುತೇಕ ಇಲಾಖೆಗಳ ಕೆಲಸ 45 ದಿನಗಳ ಕಾಲ ಸ್ಥಗಿತಗೊಳ್ಳುವುದರಿಂದ ಅದನ್ನೂ ಪರಿಗಣಿಸುವುದಾದರೆ ಚುನಾವಣೆಗಾಗಿ ಸರಕಾರ ಮಾಡುವ ಖರ್ಚು ಅಪಾರ. ಇವು ನಮ್ಮ ತೆರಿಗೆಯ ಹಣ. ಉಡುಪಿ ಜಿಲ್ಲೆಯಲ್ಲಿ 9.78 ಲಕ್ಷ ಮತದಾರರಿದ್ದಾರೆ. ಹೀಗೆ ತಲಾವಾರು ಮತದಾರರ ಮೇಲೆ ಖರ್ಚಾಗುವ ಮೊತ್ತ ಸಾರ್ಥಕವಾಗಬೇಕಾದರೆ ಅರ್ಹ ಮತದಾರರೆಲ್ಲರೂ ಮತದಾನವನ್ನು ಮಾಡಬೇಕಾಗಿದೆ.

ಚುನಾವಣಾ ಫ್ಲೆಕ್ಸ್‌, ಬ್ಯಾನರ್‌ಮುಕ್ತ ಉಡುಪಿ
ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಚುನಾವಣೆಗೆ ಸಂಬಂಧಿಸಿ ಫ್ಲೆಕ್ಸ್‌, ಬ್ಯಾನರ್‌, ಹೋರ್ಡಿಂಗ್‌ಗಳನ್ನು ಹಾಕಲು ಬಿಡುತ್ತಿಲ್ಲ. ಉಡುಪಿ ನಗರವು ಈ ವಿಷಯದಲ್ಲಿ ಅಧಿಸೂಚಿತ ಪ್ರದೇಶವಾದರೂ ಸೀಮಿತ ಅವಕಾಶದಲ್ಲಿ ಎಲ್ಲ ರಾಜಕೀಯ ಪಕ್ಷಗಳಿಗೆ ಅವಕಾಶ ಕೊಡುವುದು ಕಷ್ಟ. ಎಷ್ಟೇ ಕಾನೂನುಬದ್ಧವಾಗಿ ಅನುಮತಿ ಕೊಟ್ಟರೂ ತಮಗೆ ಸಿಗಲಿಲ್ಲ ಎಂಬ ದೂರುಗಳು ಬರುತ್ತವೆ. ಆದ್ದರಿಂದ ರಾಜಕೀಯ ಪಕ್ಷಗಳ ಸಭೆಯಲ್ಲಿ ಯಾರಿಗೂ ಅನುಮತಿ ಕೊಡದಂತೆ ನಿರ್ಣಯಿಸಲಾಯಿತು. ಯಾರಿಗೂ ಕೊಡದಿರುವ ನೀತಿಯನ್ನು ಎಲ್ಲ ಪಕ್ಷಗಳೂ ಒಪ್ಪಿಕೊಂಡಿವೆ. ಚುನಾವಣೆ ಸಮೀಪಿಸುತ್ತಿದ್ದಂತೆ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಆ ಕಾರ್ಯಕ್ರಮ ನಡೆಯುವ ಎರಡು ಗಂಟೆ ಮೊದಲು ಫ್ಲೆಕ್ಸ್‌, ಬ್ಯಾನರ್‌ ಹಾಕಿ ಕಾರ್ಯಕ್ರಮ ಮುಗಿದ ಎರಡು ಗಂಟೆಗಳಲ್ಲಿ ತೆಗೆಯಬೇಕು. ಇದನ್ನು ಚುನಾವಣಾ ವೆಚ್ಚದ ಲೆಕ್ಕಕ್ಕೆ ಪರಿಗಣಿಸಲಾಗುತ್ತದೆ. 

– ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.