“ಮಹಿಳೆಯರು ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಿ’


Team Udayavani, Mar 12, 2018, 6:45 AM IST

110318use7.jpg

ಉಡುಪಿ: ಅದು ಪಲ್ಸ್‌ ಪೋಲಿಯೋ ಎರಡನೇ ಸುತ್ತಿನ ಕಾರ್ಯಕ್ರಮ. ಆದರೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರಲ್ಲಿ ಮತದಾನದ ಜಾಗೃತಿ ಮೂಡಿಸಲು ಪ್ರಯತ್ನಿಸಿದರು.

ಹೌದು. ಮಾ. 11ರಂದು ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜರಗಿದ ಪಲ್ಸ್‌ ಪೋಲಿಯೋ ಎರಡನೇ ಸುತ್ತಿನ ಕಾರ್ಯಕ್ರಮದ ಉದ್ಘಾಟನಾ ವೇದಿಕೆಯನ್ನು ಜಿಲ್ಲಾಧಿಕಾರಿಯವರು ಮಹಿಳಾ ಮತದಾರರಿಗೆ ಮತದಾನದ ಪಾಠ ಹೇಳಿಕೊಡಲು ಬಳಸಿಕೊಂಡರು. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.
 
ಸೀರೆ, ಮಿಕ್ಸಿ ಆಮಿಷ
ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ರಾಜಕೀಯ ಪಕ್ಷಗಳು ಸೀರೆ, ಮಿಕ್ಸಿ, ಕುಕ್ಕರ್‌ ಮೊದಲಾದ ವಸ್ತುಗಳನ್ನು ನೀಡುವ ಮೂಲಕ ಆಮಿಷ ಒಡ್ಡುತ್ತವೆ. ಆದರೆ ಮಹಿಳೆಯರು ರಾಜಕೀಯ ಪಕ್ಷಗಳ ಯಾವುದೇ ಆಮಿಷಗಳಿಗೆ ಒಳಗಾಗದೆ ಮುಕ್ತ ಮತ್ತು ನಿರ್ಭೀತಿಯಿಂದ ಮತ ಚಲಾಯಿಸಬೇಕು. ಎಂದು ಪ್ರಿಯಾಂಕಾ ಹೇಳಿದರು.

ಮತದಾನದ ಮೂಲಕ ಮಹಿಳೆಯರಿಗೆ ಸಮಾನತೆಯ ಹಕ್ಕು ದೊರೆತಿದೆ. ಈ ಹಕ್ಕನ್ನು ಯಾವುದೇ ಕಾರಣಕ್ಕೂ ರಾಜಕೀಯ ಪಕ್ಷಗಳ ಆಮಿಷಗಳಿಗೆ ಬಲಿ ಕೊಡಬಾರದು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಇಲ್ಲದಿದ್ದರೆ ಸೇರಿಸಲು ಈಗಲೂ ಅವಕಾಶವಿದೆ. ಪ್ರತಿಯೊಬ್ಬ ಮಹಿಳೆ ಮತ ಚಲಾಯಿಸಬೇಕು. ಯೋಗ್ಯ ವ್ಯಕ್ತಿಗೆ ಮತ ನೀಡಿ. ಪ್ರಜಾಪ್ರಭುತ್ವ ನೀಡಿರುವ ಅಧಿಕಾರ ಚಲಾಯಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಪ್ರತಿಜ್ಞಾ ವಿಧಿ
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎಲ್ಲರಿಗೂ ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗದೇ ಮತ ಚಲಾಯಿಸುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಪಕ್ಷಗಳ ವಾಹನ ಬಳಸಬೇಡಿ
ಈ ಬಾರಿ ಯಾವುದೇ ಬಾಹ್ಯ ಹಸ್ತಕ್ಷೇಪಗಳಿಲ್ಲದೆ ನಿಯಮಬದ್ಧವಾಗಿ ಮತದಾನಕ್ಕೆ  ಚುನಾವಣಾ ಆಯೋಗ ಹೆಚ್ಚಿನ ಒತ್ತು ನೀಡಿದ್ದು ಯಾರೂ ಕೂಡ ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗಬಾರದು. ತಮ್ಮ ಮನಸಾಕ್ಷಿಗೆ ಯೋಗ್ಯ ಅನ್ನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು. ಮನೆಯಲ್ಲಿರುವ ಅಶಕ್ತ ಮತ್ತು ಅಂಗವಿಕಲರು ಕೂಡ ಮತ ಚಲಾವಣೆಗೆ ಅನುಕೂಲವಾಗುವಂತೆ ಜಿಲ್ಲಾಡಳಿತದಿಂದಲೇ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ. ರಾಜಕೀಯ ಪಕ್ಷಗಳು ಕಳುಹಿಸುವ ವಾಹನಗಳನ್ನು ಕೂಡ ಬಳಸಬೇಡಿ. ಮತಗಟ್ಟೆಗಳಲ್ಲಿಯೂ ರೋಗಿಗಳು, ವೃದ್ಧರು ಮತ್ತು ವಿಕಲಚೇತನರಿಗೆ ಎಲ್ಲ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು.
– ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, 
ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.