ಉಡುಪಿ ಜಿಲ್ಲೆ: 100 ಮನೆಗಳಿಗೆ ಹಾನಿ
Team Udayavani, Aug 8, 2019, 6:25 AM IST
ಉಡುಪಿ/ಹೆಬ್ರಿ: ಜಿಲ್ಲೆಯಲ್ಲಿ ಬುಧವಾರ ದಿನವಿಡೀ ಉತ್ತಮ ಮಳೆಯಾಗಿದೆ. ಸಂಜೆಯ ಬಳಿಕ ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿದಿದೆ. ಆಗುಂಬೆ ಘಾಟಿಯಲ್ಲಿ ಸಂಜೆ ವೇಳೆಗೆ ಮರ ಬಿದ್ದು ತಾಸುಗಳ ಕಾಲ ಸಂಚಾರ ಸ್ಥಗಿತವಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಬುಧವಾರ ಬಿಡುಗಡೆ ಮಾಡಿದ ವರದಿ ಪ್ರಕಾರ ಸುಮಾರು 100 ಮನೆಗಳಿಗೆ ಹಾನಿಯಾಗಿದೆ.
ಸಂಜೆ ಅನಂತರ ತೆಕ್ಕಟ್ಟೆ, ಕೊಲ್ಲೂರು, ಕೋಟೇಶ್ವರ, ಬ್ರಹ್ಮಾವರ, ಕುಂದಾಪುರ, ಬೈಂದೂರು ಸೇರಿದಂತೆ ವಿವಿಧ ಕಡೆಯಲ್ಲಿ ಭಾರೀ ಗಾಳಿ ಮಳೆಯಾಗಿದೆ.
ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮೆಸ್ಕಾಂಗೆ ಒಟ್ಟು 17.93 ಲ.ರೂ. ನಷ್ಟ ಉಂಟಾಗಿದೆ.
ಮುಟ್ಲುಪಾಡಿ: ಗಾಳಿಯಿಂದ ಹಾನಿ
ಅಜೆಕಾರು: ಬುಧವಾರ ಸಂಜೆ ಭಾರೀ ಗಾಳಿಗೆ ಮುಟ್ಲುಪಾಡಿ ಪರಿಸರದ ಬಹುತೇಕ ಅಂಗಡಿ ಮತ್ತು ಮನೆಗಳು ಹಾನಿಗೀಡಾಗಿವೆ. 20 ಮನೆಗಳ ಮೇಲ್ಛಾವಣಿಗೆೆ ಸಂಪೂರ್ಣ ಹಾನಿಯಾಗಿದ್ದು, 100ಕ್ಕೂ ಅಧಿಕ ಮನೆಗಳ ಮೇಲ್ಛಾವಣಿಗೆ ಭಾಗಶಃ ಹಾನಿಯಾಗಿದೆ. ರಸ್ತೆ, ಮನೆಗಳ ಮೇಲೆ 100ಕ್ಕೂ ಅಧಿಕ ಮರಗಳು ಉರುಳಿವೆ. 25 ವಿದ್ಯುತ್ ಕಂಬಗಳು ಹಾನಿಗೀಡಾಗಿವೆ. ಸಂತ್ರಸ್ತ ರಿಗೆ ಮುಟ್ಲುಪಾಡಿ ಸರಕಾರಿ ಶಾಲೆ ಯಲ್ಲಿ ಪರಿಹಾರ ಕೇಂದ್ರ ತೆರೆಯಲಾಗಿದೆ.
ಕುಂದಾಪುರ: ಮನೆ ಹಾನಿ
ಕುಂದಾಪುರ: ತಾಲೂಕಿನೆಲ್ಲೆಡೆ ಬುಧವಾರ ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಿತ್ತು. ಮಂಗಳವಾರ ರಾತ್ರಿ ಸುರಿದ ಮಳೆಗೆ ಹಲವೆಡೆಗಳಲ್ಲಿ ಮನೆಗಳಿಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ