ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣ: ಅನ್ಯಜಿಲ್ಲೆಯ ಬಾಲ್ಯವಿವಾಹ ಸವಾಲು


Team Udayavani, Sep 22, 2021, 4:28 AM IST

 ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣ: ಅನ್ಯಜಿಲ್ಲೆಯ ಬಾಲ್ಯವಿವಾಹ ಸವಾಲು

ಉಡುಪಿ: ಉತ್ತರ ಕನ್ನಡ ಭಾಗದಲ್ಲಿ ಈಗಲೂ ಚಾಲ್ತಿಯಲ್ಲಿರುವ ಬಾಲ್ಯವಿವಾಹ ಪದ್ಧತಿ ಉಡುಪಿ ಜಿಲ್ಲೆಯ ಪಾಲಿಗೆ ಕಂಟಕವಾಗಿ ಪರಿಣಮಿಸುತ್ತಿದೆ. ಜಿಲ್ಲೆಯಲ್ಲಿ ದಾಖಲಾಗುವ ಪೋಕ್ಸೋ ಪ್ರಕರಣದಲ್ಲಿ ಶೇ.80ಕ್ಕೂ ಅಧಿಕ ಪ್ರಕರಣಗಳು ಅನ್ಯಜಿಲ್ಲೆಯ ಮಂದಿಯದ್ದೇ ಆಗಿವೆ.

ಹೊರಜಿಲ್ಲೆಯಲ್ಲಿ ಮದುವೆ ಆಗಿಕೊಂಡು ಉದ್ಯೋಗ ಅರಸಿ ಉಡುಪಿ ಜಿಲ್ಲೆಗೆ ಆಗಮಿ ಸುವಾಗ ಇಂತಹ ಪ್ರಕರಣ ಬೆಳಕಿಗೆ ಬರುತ್ತವೆ. ಯುವತಿ ಗರ್ಭವತಿಯಾಗಿ ಆಸ್ಪತ್ರೆಗೆ ದಾಖ ಲಾಗುವ ವೇಳೆ ಸಂಬಂಧ ಪಟ್ಟ ವರಿಗೆ ಮಾಹಿತಿ ಲಭಿಸುತ್ತದೆ. ಈ ವೇಳೆ ಅವರನ್ನು ಗುರುತಿಸಿ ಪೋಕ್ಸೋ ಪ್ರಕರಣ ದಾಖಲಿಸಲಾಗುತ್ತದೆ.

ಹಲವು ಕಾರಣ:

ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಪ್ರಕರಣ ಗಳು ಬೀದರ್‌, ಬಿಜಾಪುರ, ಗದಗ, ಬೆಳಗಾಂ, ಬಾಗಲಕೋಟೆ, ಬಳ್ಳಾರಿ, ಹಾವೇರಿ ಮೂಲ ದವರದ್ದಾಗಿದೆ. ಅವರಲ್ಲಿ ಮದುವೆಯಾದ ಬಗ್ಗೆ ಯಾವ ದಾಖಲೆಯೂ ಇರುವುದಿಲ್ಲ. ತಮ್ಮ ಊರಿನಲ್ಲಿ ಕುಟುಂಬದೊಳಗೆ, ಸಂಬಂಧಿಕರೊಂದಿಗೆ ಮದುವೆಯಾಗುತ್ತಾರೆ. ಮುಖ್ಯವಾಗಿ ಆಸ್ತಿ ಬೇರೆಯವರ ಪಾಲಾಗ ಬಾರದು ಎಂಬ ಕಾರಣಕ್ಕೆ ಬಾಲ್ಯದಲ್ಲಿಯೇ ವಿವಾಹ ನಿಗದಿಯಾಗಿರುತ್ತದೆ. ಇಂಥ‌ವರು ಅನ್ಯ ಜಿಲ್ಲೆಗೆ ಹೋಗಿ ನೆಲೆಸಿದಾಗ ಸಮಸ್ಯೆ ಕಂಡುಬರುತ್ತದೆ.

ಸ್ವಯಂಪ್ರೇರಿತ ದೂರು  ದಾಖಲಿಸಲು ಅವಕಾಶ :‌

ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ-2016ರ ಪ್ರಕಾರ ಪ್ರತೀ ಬಾಲ್ಯ ವಿವಾಹವು ಪ್ರಾರಂಭದಿಂದಲೇ ಅನೂರ್ಜಿತವಾಗುತ್ತದೆ. ಬಾಲ್ಯ ವಿವಾಹ ಕಂಡುಬಂದಲ್ಲಿ ಆಯಾ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಅವಕಾಶವಿದೆ. ಈ ಕಾಯ್ದೆಯಡಿ ಮಹಿಳೆಯರೂ ಜೈಲು ವಾಸ ಶಿಕ್ಷೆಗೆ ಅರ್ಹರಾಗಿರುತ್ತಾರೆ. 2011ರ ನವೆಂಬರ್‌ ತಿಂಗಳಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶನಾಲಯದಡಿ ಬಾಲ್ಯ ವಿವಾಹ ನಿಷೇಧ ಉಸ್ತುವಾರಿ ಕೋಶವನ್ನು ಸ್ಥಾಪಿಸಲಾಗಿದೆ. ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಸಮಿತಿಗಳು ನಿರಂತರವಾಗಿ ಶ್ರಮಿಸುತ್ತಿವೆ. ಉಡುಪಿ ಜಿಲ್ಲೆಯಲ್ಲಿ ವರದಿಯಾದ ಪ್ರಕರಣಗಳಿಲ್ಲ. ಆದರೆ ಅನ್ಯ ಜಿಲ್ಲೆಯಲ್ಲಿ ಇದು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದಕ್ಕೆ ಕಡಿವಾಣ ಅತ್ಯಗತ್ಯವಾಗಿದೆ.

ಬಾಲ್ಯವಿವಾಹವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದರಷ್ಟೇ ಪೋಕೊÕà ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಿದೆ. ಸ್ಥಳೀಯವಾಗಿ ಪೋಕ್ಸೋ ಪ್ರಕರಣಗಳು ನಡೆಯುವುದು ವಿರಳ. ಅನ್ಯ ಜಿಲ್ಲೆಯಲ್ಲಿ ಮದುವೆಯಾಗಿ ಕೆಲಸ ಅರಸಿ ಜಿಲ್ಲೆಗೆ ಆಗಮಿಸಿದಾಗ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕುಮಾರ್‌ ನಾಯ್ಕ,  ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ (ಪ್ರಭಾರ)

 

-ವಿಶೇಷ ವರದಿ

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.