ಮಾರ್ಚ್‌ನೊಳಗೆ ನೀರಿನ ಕಾಮಗಾರಿ ಪೂರ್ಣಗೊಳಿಸಿ


Team Udayavani, Feb 28, 2019, 12:30 AM IST

dinakar-babu.jpg

ಉಡುಪಿ: ಜಿಲ್ಲಾ ಪಂಚಾಯತ್‌ ವತಿಯಿಂದ ಕೈಗೊಂಡಿರುವ ಎಲ್ಲ ಕುಡಿಯುವ ನೀರು ಕಾಮಗಾರಿಗಳನ್ನು ಮಾರ್ಚ್‌ ಅಂತ್ಯದ ಒಳಗೆ ಪೂರ್ಣಗೊಳಿಸಿ, ಯಾವುದೇ ಕಾಮಗಾರಿಗಳನ್ನು ಬಾಕಿ ಇರಿಸಿಕೊಳ್ಳಬೇಡಿ ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ.

ಅವರು ಬುಧವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಣ್ಣ ನೀರಾವರಿ ಇಲಾಖೆಯಿಂದ ಕಿಂಡಿ ಅಣೆಕಟ್ಟುಗಳಿಗೆ ಹಾಕಿರುವ ಹಲಗೆಯಲ್ಲಿ ಕೆಲವು ಕಡೆಗಳಲ್ಲಿ ಸೋರಿಕೆಯಾಗುತ್ತಿದೆ. ಅದನ್ನು ಕೂಡಲೇ ಸರಿಪಡಿಸಿ ಮತ್ತು ಉದ್ಯಾವರದಲ್ಲಿ ಕಿಂಡಿ ಅಣೆಕಟ್ಟಿಗೆ ಕೂಡಲೇ ಹಲಗೆ ಹಾಕಬೇಕು ಎಂದರು.

ತೆರಿಗೆ ವಸೂಲಿ ಪ್ರಮಾಣ ಕಡಿಮೆ
ಗ್ರಾಮ ಪಂಚಾಯತ್‌ಗಳ ತೆರಿಗೆ ವಸೂಲಾತಿ ಪ್ರಮಾಣ ಕಡಿಮೆ ಇದ್ದು, ವಸೂಲಾದ ತೆರಿಗೆಯನ್ನು ಅದೇ ದಿನ ಜಮೆ ಮಾಡುವಂತೆ ತಿಳಿಸಿದ ಜಿಲ್ಲಾ ಪಂಚಾಯತ್‌ ಸಿಇಒ ಸಿಂಧೂ ಬಿ. ರೂಪೇಶ್‌, ತೆರಿಗೆ ವಸೂಲಾತಿಯಲ್ಲಿ ಸಂಪೂರ್ಣ ಗುರಿ ಸಾಧಿಸುವಂತೆ ತಿಳಿಸಿದರು. ಕಟ್ಟಡ ಬಾಡಿಗೆ ವಸೂಲಿ ಪ್ರಮಾಣವೂ ಕಡಿಮೆ ಇದ್ದು, ಮಾರ್ಚ್‌ ಅಂತ್ಯದೊಳಗೆ ಸಂಪೂರ್ಣ ತೆರಿಗೆ ವಸೂಲಾತಿ ಮಾಡುವಂತೆ ತಿಳಿಸಿದರು. ಎಸ್‌ಸಿಪಿ ಟಿಎಸ್‌ಪಿ ಯೋಜನೆಗಳಲ್ಲಿ ಪ್ರಗತಿ ಕುಂಠಿತವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಂಗನ ಕಾಯಿಲೆ ನಿಯಂತ್ರಣದಲ್ಲಿ
ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ರಾಮ ರಾವ್‌ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಮಂಗಗಳ ಸಾವಿನ ಪ್ರಕರಣವೂ ವಿರಳವಾಗಿದೆ. ಆದರೂ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ, ಮುಂದಿನ ದಿನಗಳಲ್ಲಿ ನಿರ್ಮಿಸಲಾಗಲಿರುವ ಶೌಚಾಲಯಗಳಲ್ಲಿ ಟ್ವಿನ್‌ ಪಿಟ್‌ ಟಾಯ್ಲೆಟ್‌ ನಿರ್ಮಿಸಬೇಕಿದ್ದು, ಈ ಕುರಿತಂತೆ ಎಲ್ಲ ಪಂಚಾಯತ್‌ ಮತ್ತು ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಹೇಳಿದರು.

ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶಶಿಕಾಂತ್‌ ಪಡುಬಿದ್ರಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ಉದಯ್‌ ಎಸ್‌. ಕೋಟ್ಯಾನ್‌ ಉಪಸ್ಥಿತರಿದ್ದರು.

ಮರಳು ಸಮಸ್ಯೆ: ಪರಿಹಾರಕ್ಕೆ ಸೂಚನೆ
ಮರಳಿನ ಕೊರತೆಯಿಂದ ವಸತಿ ನಿರ್ಮಾಣ ಚಟುವಟಿಕೆ ಕುಂಠಿತವಾಗಿದ್ದು, ಮರಳು ಲಭ್ಯತೆ ಕುರಿತಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡುವಂತೆ ಅಧ್ಯಕ್ಷರು ಸೂಚಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಉತ್ತರಿಸಿ, ಜಿಲ್ಲೆಯಲ್ಲಿ ನಾನ್‌ ಸಿಆರ್‌ಝಡ್‌ ವ್ಯಾಪ್ತಿಯಲ್ಲಿನ 21 ಬ್ಲಾಕ್‌ ಗಳನ್ನು ಲೋಕೋಪಯೋಗಿ, ನಿರ್ಮಿತಿ, ಕೆ.ಆರ್‌.ಐ.ಡಿ.ಎಲ್‌., ಪಿ.ಆರ್‌.ಇ.ಡಿ., ಗ್ರಾಮ ಪಂಚಾಯತ್‌ ಸೇರಿದಂತೆ ವಿವಿಧ ಸರಕಾರಿ ಸಂಸ್ಥೆಗಳಿಗೆ ಮರಳುಗಾರಿಕೆ ಮಾಡಲು ಅನುಮತಿ ನೀಡಲಾಗಿದೆ. ಸಿಆರ್‌ಝಡ್‌ ವ್ಯಾಪ್ತಿಯಲ್ಲಿ 7 ಮರಳು ದಿಬ್ಬಗಳಿಗೆ ಕೆ.ಸಿ.ಝಡ್‌.ಎಂ.ಎ.ನಿಂದ ಅನುಮೋದನೆ ದೊರೆತಿದ್ದು, ಇದರಲ್ಲಿ 7,96,522 ಮೆ.ಟನ್‌ ಮರಳು ತೆರವುಗೊಳಿಸಲು ಅನುಮೋದನೆ ದೊರೆತಿದೆ. ಜಿಲ್ಲಾ 7 ಸದಸ್ಯರ ಸಮಿತಿ ಸಭೆಯನ್ನು ಕರೆದು ಶೀಘ್ರದಲ್ಲಿ ಹಂಚಿಕೆ ಮಾಡಲಾಗುವುದು ಎಂದರು. 

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.