ಉಡುಪಿ ಜಿಲ್ಲಾ ಭಾಗದ ಅಪರಾಧ ಸುದ್ದಿಗಳು


Team Udayavani, Jun 18, 2022, 1:15 AM IST

ಉಡುಪಿ ಜಿಲ್ಲಾ ಭಾಗದ ಅಪರಾಧ ಸುದ್ದಿಗಳು

ಗಾಂಜಾ ಸೇವನೆ: ಓರ್ವ ವಶಕ್ಕೆ
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಕಿನ್ನಿಮೂಲ್ಕಿಯ ಮೊಹಮ್ಮದ್‌ ಪರ್ವೆಜ್‌ (23)ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಸೆನ್‌ ಪೊಲೀಸ್‌ ಉಪನಿರೀಕ್ಷಕ ಲಕ್ಷ್ಮಣ ಅವರು ಕರ್ತವ್ಯದಲ್ಲಿದ್ದಾಗ ಈತನನ್ನು ವಶಕ್ಕೆ ಪಡೆದಿದ್ದಾರೆ. ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ಢಿಕ್ಕಿ: ಮಹಿಳೆಗೆ ಗಾಯ
ಉಡುಪಿ: ಬೈಕ್‌ ಢಿಕ್ಕಿ ಹೊಡೆದು ಪಾದಚಾರಿ ಮಹಿಳೆ ಗಾಯಗೊಂಡ ಘಟನೆ ನಡೆದಿದೆ. ಮೂಲತಃ ಗದಗ ಜಿಲ್ಲೆಯ ರೇಣವ್ವ ಫ‌ಕಿರೇಶ್‌ ಗಾನಿಗೇರ್‌ ಅವರು ನಾದಿನಿ ನೇತ್ರಾವತಿ ಅವರೊಂದಿಗೆ ಕಲ್ಸಂಕದಲ್ಲಿ ನಿಂತ ವೇಳೆ ಅಂಬಾಗಿಲು ಕಡೆಯಿಂದ ಕಲ್ಸಂಕದ ಕಡೆ ಅತೀ ವೇಗದಿಂದ ಆಗಮಿಸಿದ ಬುಲೆಟ್‌ ಸವಾರ ನೇತ್ರಾವತಿಯವರಿಗೆ ಢಿಕ್ಕಿ ಹೊಡೆದ ಪರಿಣಾಮ ಘವರು ರಸ್ತೆಗೆ ಬಿದ್ದು, ಕೈ ಕಾಲುಗಳಿಗೆ ತರಿಚಿದ ಗಾಯವಾಗಿದೆ. ಸವಾರ ಬುಲೆಟ್‌ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅನಂತರ ನೇತ್ರಾವತಿಯವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು -ಬೈಕ್‌ ಢಿಕ್ಕಿ: ಸವಾರನಿಗೆ ಗಾಯ
ಉಡುಪಿ: ಬೈಕ್‌ಗೆ ಕಾರು ಢಿಕ್ಕಿ ಹೊಡೆದು ಬೈಕ್‌ ಸವಾರ ಗಾಯಗೊಂಡ ಘಟನೆ ನಡೆದಿದೆ. ಹಾವಂಜೆಯ ಜೋಯ್ಸನ್‌ ಕ್ಲೇರೆನ್ಸ್‌ ಡಿ’ಆಲ್ಮೇಡಾ ಅವರು ಬೈಕ್‌ನಲ್ಲಿ ಮಣಿಪಾಲ- ಕೊಳಲಗಿರಿ ಮಖ್ಯ ರಸ್ತೆಯಲ್ಲಿ ಹೋಗುತ್ತಿರುವಾಗ ಶಿಂಬ್ರಾದ ವ್ಯಾಲಿ ವ್ಯೂ ಕೌಂಟಿ ಕ್ಲಬ್‌ ಬಳಿ ಕೊಳಲಗಿರಿ ಕಡೆಯಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಜೋಯ್ಸನ್‌ ಬೈಕ್‌ ಸಹಿತ ರಸ್ತೆಗೆ ಬಿದ್ದಿದ್ದು ಅವರ ಬಲಗಾಲಿನ ಮೂಳೆ ಮುರಿತ ಹಾಗೂ ಎಡಗಾಲಿನ ಮೊಣಗಂಟಿಗೆ ತರಚಿದ ಗಾಯ ಉಂಟಾಗಿದೆ. ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೂಲಿ ಕಾರ್ಮಿಕಳಿಗೆ ಜೀವ ಬೆದರಿಕೆ
ಪಡುಬಿದ್ರಿ: ಕಂಚಿನಡ್ಕ ಪರಿಸರದ ಕೂಲಿ ಕಾರ್ಮಿಕ ಮಹಿಳೆಯೋರ್ವರೊಂದಿಗೆ ಸ್ಮಾರ್ಟ್‌ ಫೋನ್‌ನ ಸ್ಟೇಟಸ್‌ನಲ್ಲಿನ ಸಂಜ್ಞಾ ಸಂವಾದ ಕುರಿತಾಗಿ ಉಂಟಾದ ತಪ್ಪು ಕಲ್ಪನೆಯಿಂದ ಆಕೆಗೆ ಫೋನ್‌ ಕರೆ ಮಾಡಿ “ಬರ್ತಿಯಾ’ ಎಂದು ಕೇಳಿದ ಕಂಚಿನಡ್ಕದ ಆರೋಪಿ ನಿಕೇಶ (27) ಮಹಿಳೆಯ ನಕಾರಾತ್ಮಕ ಉತ್ತರಕ್ಕೆ ಕೋಪಗೊಂಡು ಆಕೆಗೆ ಬೈದು ಜೀವ ಬೆದರಿಕೆಯೊಡ್ಡಿದ ಬಗ್ಗೆೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.

ಕಳೆದ ಮಂಗಳವಾರ ಮೊಬೈಲ್‌ನಲ್ಲಿ 500 ರೂ. ನೋಟಿನ ಚಿತ್ರವನ್ನೂ ಮಹಿಳೆಗೆ ರವಾನಿಸಿದ್ದ ಆರೋಪಿಯ ಸಂಜ್ಞಾ ಸಂದೇಶದ ಅರ್ಥವನ್ನು ಅರಿಯದೇ ಹಾನಗಲ್‌ ತಾ| ಕೂಲಿ ಕಾರ್ಮಿಕ ಮಹಿಳೆ “ಏನಿದು’ ಎಂಬಂತೆ ಥಮ್ಸ್‌ ಅಪ್‌ ನೀಡಿದ್ದರು. ಆರೋಪಿಯು ಇದಕ್ಕೆ “ಓಕೆ’ ಎಂದು ಉತ್ತರಿಸಿ ಮಹಿಳೆಗೆ ಕರೆ ಮಾಡಿದ್ದನು. ಆ ಕರೆಯ ಅರ್ಧದಲ್ಲೇ ಸಮೀಪದಲ್ಲಿದ್ದ ಇನ್ನೋರ್ವ ವ್ಯಕ್ತಿ ಆರೋಪಿ ನಿಕೇಶನಿಗೆ ಉತ್ತರಿಸಿದ್ದರು. ಇದಕ್ಕೆ ಕೋಪಗೊಂಡಿದ್ದ ಆರೋಪಿಯು ಮಹಿಳೆಯನ್ನು ಅಡ್ಡಗಟ್ಟಿ ಬೈದು ಪೊಲೀಸರಿಗೆ ತಿಳಿಸಿದ್ದಲ್ಲಿ ಪರಿಣಾಮ ನೆಟ್ಟಗಿರದು ಎಂದು ಜೀವ ಬೆದರಿಕೆಯನ್ನೂ ಒಡ್ಡಿರುವುದಾಗಿ ಪೊಲೀಸರಿಗಿತ್ತ ದೂರಲ್ಲಿ ತಿಳಿಸಲಾಗಿದೆ.

ಬೈಕ್‌ ಕಳ್ಳರಿಗೆ ಜಾಮೀನು
ಕುಂದಾಪುರ: ಕೋಟ ಪೊಲೀಸ್‌ ಠಾಣೆ ವ್ಯಾಪ್ತಿ ಸೇರಿದಂತೆ ಬ್ರಹ್ಮಾವರ, ಉಡುಪಿ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ 15 ಕ್ಕೂ ಹೆಚ್ಚು ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಶಂಕರ್‌ ಗೌಡ ಹಾಗೂ ಸೋಮಶೇಖರ್‌ಗೆ ಕುಂದಾಪುರ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಆರೋಪಿಗಳು ರಾಯಚೂರು ಹಾಗೂ ಬಾಗಲಕೋಟೆ ಮೂಲದವ ರಾಗಿದ್ದು ಸುಲಭವಾಗಿ ಹಣ ಸಂಪಾದಿಸಲು ಬೈಕ್‌ ಕಳವಿಗೆ ಇಳಿದಿದ್ದರು ಎನ್ನಲಾಗಿತ್ತು. ಆರೋಪಿ ಗಳ ಪರವಾಗಿ ಕುಂದಾಪುರದ ನ್ಯಾಯವಾದಿಗಳಾದ ಶ್ಯಾಮಸುಂದರ್‌ ನಾಯರಿ ಹಾಗೂ ನೀಲ್‌ ಬ್ರಿಯಾನ್‌ ಪಿರೇರಾ ವಾದಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.