ಉಡುಪಿ ಜಿಲ್ಲಾ ಅಪರಾಧ ಸುದ್ದಿಗಳು


Team Udayavani, Jun 16, 2022, 1:07 AM IST

ಉಡುಪಿ ಜಿಲ್ಲಾ ಅಪರಾಧ ಸುದ್ದಿಗಳು

ಲಾರಿ ಚಕ್ರ ಹರಿದು ಪಾದಚಾರಿ ಸಾವು
ಪಡುಬಿದ್ರಿ: ಕಾರ್ಕಳ – ಪಡುಬಿದ್ರಿ ಜಂಕ್ಷನ್‌ನಲ್ಲಿ ಬುಧವಾರ ಮಧ್ಯಾಹ್ನದ ವೇಳೆ ರಸ್ತೆ ದಾಟಲು ಹೆದ್ದಾರಿಯ ಪಶ್ಚಿಮ ಅಂಚಿನಲ್ಲಿ ನಿಂತಿದ್ದ ಸಾಂತೂರು ಗ್ರಾಮದ ನಿವಾಸಿ, ಬಡಗಿ ಕಾಯಕದ ಜಯರಾಮ ಆಚಾರ್ಯ (51) ಅವರ ಸೊಂಟದ ಮೇಲೆ ಲಾರಿ ಚಕ್ರವು ಹರಿದು ತೀವ್ರತರ ಗಾಯಗೊಂಡಿದ್ದಾರೆ. ತತ್‌ಕ್ಷಣ ಅವರನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಒಯ್ದರೂ ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಲಾರಿಯ ಚಾಲಕ ಘಟನಾ ಸ್ಥಳದಿಂದ ಓಡಿ ಹೋಗಿದ್ದಾನೆ. ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ – ಬೈಕ್‌ ಢಿಕ್ಕಿ
ಕುಂದಾಪುರ: ಕಾಳಾವರ ಗ್ರಾಮದ ದಬ್ಬೆಕಟ್ಟೆ ಬಳಿ ಪ್ರಸನ್ನ ಅವರು ಲಾರಿಯನ್ನು ದಬ್ಬೆಕಟ್ಟೆ ಕಡೆಯಿಂದ ಬೇಳೂರು ಕಡೆಗೆ ಚಲಾಯಿಸುತ್ತಿದ್ದಾಗ ಕೊಟೇಶ್ವರ ಕಡೆಗೆ ಬರುತ್ತಿದ್ದ ಬೈಕ್‌ಗೆ ಢಿಕ್ಕಿಯಾಗಿದೆ.
ಗಣೇಶ ಬಡಾಬೆಟ್ಟು ಅವರು ಬೈಕಿನಲ್ಲಿ ಪ್ರವೀಣ್‌ ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ಅಪಘಾತವಾಗಿ ಇಬ್ಬರಿಗೂ ಗಾಯವಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಸೇವನೆ: ಇಬ್ಬರು
ವಿದ್ಯಾರ್ಥಿಗಳು ವಶಕ್ಕೆ
ಮಣಿಪಾಲ: ವಿದ್ಯಾರತ್ನ ನಗರದ ರಾಯಲ್‌ ಎಂಬೆಸಿ ಫ್ಲ್ಯಾಟ್‌ನಲ್ಲಿ ಜೂ. 13ರಂದು ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ಬಲ್ಮಠ ನಿವಾಸಿಗಳಾದ ನಿಹಾಲ್‌ ಯುವನ್‌ಚಾರ್ಲ್ಸ್‌ ಗೋವಿಯಸ್‌ (20), ಕರಣ್‌ ಆರ್‌. ಕೆ. (21) ಎಂಬವರನ್ನು ಪೊಲೀಸರು ಪೊರೆನ್ಸಿಕ್‌ ವೈದ್ಯರಲ್ಲಿ ತಪಾಸಣೆಗೊಳಪಡಿಸಿದ್ದು, ಗಾಂಜಾ ಸೇವನೆ ದೃಢಪಟ್ಟಿರುವುದಾಗಿ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲಗಿದಲ್ಲಿಯೇ ಯುವಕ ಸಾವು
ಸಿದ್ದಾಪುರ: ಸಿದ್ದಾಪುರ ಸರಕಾರಿ ಪ್ರೌಢಶಾಲೆಯ ಆಟದ ಮೈದಾನದ ಬಳಿ ಕುಡಿದು ಮಲಗಿದ್ದ ರಾಣೆಬೆನ್ನೂರು ತಾಲೂಕಿನ ಉದ್ದಗಟ್ಟಿ ಗ್ರಾಮದ ಕೂಲಿ ಕಾರ್ಮಿಕ ಯಲ್ಲಪ್ಪ (32) ಅವರು ಮೃತಪಟ್ಟಿದ್ದಾರೆ. ಮದ್ಯದಿಂದಲೂ ಆಥವಾ ಬೇರೆ ಯಾವುದೋ ಕಾರಣದಿಂದ ಮೃತಪಟ್ಟಿರಬಹುದು ಎಂದು ಯಲ್ಲಪ್ಪ ಅವರ ಚಿಕ್ಕಪ್ಪ ಶಿವಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಾಲದ ಹಣ ಪಾವತಿಗೆ ಹೇಳಿದ್ದಕ್ಕೆ ಹಲ್ಲೆ
ಗಂಗೊಳ್ಳಿ: ಸಂಘದಲ್ಲಿ ಪಡೆದ ಸಾಲದ ಹಣ ಮರುಪಾವತಿಗೆ ಹೇಳಿದ ಶೋಭಾ ಖಾರ್ವಿ ದೊಡ್ಡಹಿತ್ಲು ಅವರ ಮೇಲೆ ಹಲ್ಲೆ ನಡೆದಿದೆ. ರೇಖಾ ಖಾರ್ವಿ ಅವರು ಶೋಭಾ ಅವರ ಹೆಸರಿನಲ್ಲಿ 1 ಲಕ್ಷ ರೂ. ಸಾಲ ಪಡೆದಿದ್ದು ಸರಿಯಾಗಿ ಕಂತನ್ನು ಕಟ್ಟಿರಲಿಲ್ಲ. ಪಾವತಿಸಲು ಹೇಳಿದ್ದಕ್ಕೆ ರೇಖಾ ಖಾರ್ವಿ, ಅವರ ಗಂಡ ಲಕ್ಷ್ಮಣ, ಮಗ ನಿಖೀಲ್‌ ಖಾರ್ವಿ, ಮಗಳು ಮೀನಾಕ್ಷಿ ಹಾಗೂ ರೇಖಾ ಖಾರ್ವಿಯವರ ತಮ್ಮ ಅಜಿತ್‌ ಖಾರ್ವಿ ಅವರು ಹಲ್ಲೆ ನಡೆಸಿದ್ದಾರೆ. ಬಿಡಿಸಿಲು ಬಂದ ಶೋಭಾ ಅವರ ಪತಿ ಮೇಲೂ ಹಲ್ಲೆಯಾಗಿದ್ದು ಜೀವ ಬೆದರಿಕೆ ಹಾಕಲಾಗಿದೆ. ಚಿಕಿತ್ಸೆಗೆ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿ ಹಣಕಾಸಿನ ಅಭಾವದಿಂದ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡಕ: ಕ್ಲಿನಿಕ್‌ಗೆಂದು ತೆರಳಿದ ವ್ಯಕ್ತಿ ನಾಪತ್ತೆ
ಹೆಬ್ರಿ: ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಕೋಟ್ನಕಟ್ಟೆ ನಿವಾಸಿ ಬಿ. ಪ್ರಕಾಶ್‌ ಪೈ (67) ಜೂ. 13ರಂದು ಬೆಳಗ್ಗೆ 11.30ರ ಸುಮಾರಿಗೆ ನಗರದ ಸರ್ವೀಸ್‌ ಬಸ್‌ ನಿಲ್ದಾಣದ ಬಳಿ ಇರುವ ಕ್ಲಿನಿಕ್‌ಗೆ ಚಿಕಿತ್ಸೆಗೆಂದು ತೆರಳಿದವರು ವಾಪಸು ಬಾರದೆ ನಾಪತ್ತೆಯಾಗಿದ್ದಾರೆ.

5 ಅಡಿ 10 ಇಂಚು ಎತ್ತರ, ಗೋಧಿ ಮೈಬಣ್ಣ, ದೃಢಕಾಯ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.