ಉಡುಪಿ ಜಿಲ್ಲೆ: 3 ದಿನಗಳಲ್ಲಿ 1.75 ಲ.ರೂ. ದಂಡ ವಸೂಲಿ
ಸಂಚಾರ ನಿಯಮ ಉಲ್ಲಂಘನೆ- ಪರಿಷ್ಕೃತ ಕಾಯಿದೆ
Team Udayavani, Sep 8, 2019, 4:48 AM IST
ಉಡುಪಿ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಹೆಚ್ಚಳ ಆದೇಶ ಉಡುಪಿ ಜಿಲ್ಲೆಯಲ್ಲಿ ಸೆ.5ರಂದು ಜಾರಿಗೆ ಬಂದಿದ್ದು, ಇದುವರೆಗೆ 1,75,800 ರೂ. ಸ್ಥಳದಲ್ಲೇ ದಂಡ ವಸೂಲಿ ಮಾಡಲಾಗಿದೆ.
ಶನಿವಾರ ಒಂದೇ ದಿನ 1,12,500 ರೂ. ದಂಡ ವಸೂಲಿ ಮಾಡಲಾಗಿದೆ. ಇದರಲ್ಲಿ 66 ಸೀಟ್ ಬೆಲ್ಟ್ ಹಾಕದಿರುವುದು, 72 ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಚಾಲನೆ ಪ್ರಕರಣಗಳು ಸೇರಿವೆ. ಇತರ ಕೆಲವು ಪ್ರಕರಣಗಳಿಗೆ ಕೋರ್ಟ್ ನೋಟೀಸು ನೀಡಲಾಗಿದೆ.
3 ದಿನಗಳಲ್ಲಿ ಒಟ್ಟು 300 ಪ್ರಕರಣಗಳನ್ನು ದಾಖಲಿಸಿ ಸ್ಥಳದಲ್ಲಿ ದಂಡ ವಸೂಲಿ ಮಾಡಿರುವ ಜತೆಗೆ ಕೆಲವು ಪ್ರಕರಣಗಳಿಗೆ ಕೋರ್ಟ್ ನೋಟಿಸ್ ನೀಡಲಾಗಿದೆ.
ವಿದ್ಯಾರ್ಥಿಗಳಿಗೂ ದಂಡ ಬಿಸಿ
ಶನಿವಾರ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ನಗರದಲ್ಲಿ ಹತ್ತಕ್ಕೂ ಅಧಿಕ ತೆರೆದ ವಾಹನಗಳಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಮೆರವಣಿಗೆ ನಡೆಯಿತು. ಇದರಲ್ಲಿ ಇತರ ವಾಹನಗಳೂ ಪಾಲ್ಗೊಂಡಿದ್ದವು.
ಮೆರವಣಿಗೆಗೆ ಪೊಲೀಸರು ಭದ್ರತೆ ಒದಗಿಸಿದ್ದರು. ಆದರೆ ಮೆರವಣಿಗೆ ಸಂಜೆ ಎಂಜಿಎಂ ಕಾಲೇಜು ಬಳಿ ತೆರಳಿ ಅನಂತರ ಕೆಲವು ವಿದ್ಯಾರ್ಥಿಗಳು ಎಂಜಿಎಂ ಮೈದಾನ ಪ್ರವೇಶಿಸಲು ಯತ್ನಿಸಿದರು. ಇದನ್ನು ಪೊಲೀಸರು ತಡೆದರು. ಅನಂತರ ದಾಖಲೆ ಸಮರ್ಪಕ ಇಲ್ಲದಿರುವುದು ಸೇರಿದಂತೆ ವಿವಿಧ ಸಂಚಾರ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಿದರು.
ಮಂಗಳೂರಿನಲ್ಲಿ ನೂತನ ದಂಡ ವಸೂಲಿ ಆದೇಶ ಇನ್ನೂ ಜಾರಿಗೆ ಬಂದಿಲ್ಲ. ಸಾಫ್ಟ್ವೇರ್ ಅಪ್ಡೇಟ್ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ ಎಂದು ಪೊಲೀಸ್ ಆಯುಕ್ತ ಡಾ| ಹರ್ಷ ಪಿ.ಎಸ್. ಶುಕ್ರವಾರ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ