ಲಾಕ್‌ಡೌನ್‌: ಹಸಿದವರ ಹೊಟ್ಟೆ ಹಸಿವು ತಣಿಸುವ ಉಡುಪಿ ಜಿಲ್ಲಾ ತಂಡ

ಇಚ್ಛಿತರು ಅಕ್ಕಿ, ಬೇಳೆ, ಧವಸ ಧಾನ್ಯವನ್ನು ನೀಡಿ ಈ ಸೇವೆಗೆ ಸಹಕರಿಸಬಹುದು

Team Udayavani, Mar 29, 2020, 5:53 AM IST

ಲಾಕ್‌ಡೌನ್‌: ಹಸಿದವರ ಹೊಟ್ಟೆ ಹಸಿವು ತಣಿಸುವ ಉಡುಪಿ ಜಿಲ್ಲಾ ತಂಡ

ಕಟಪಾಡಿ: ಕೋವಿಡ್‌ 19 ವೈರಸ್‌ ವ್ಯಾಪಕವಾಗಿ ಹರಡದಂತೆ ಕರೆಯಲಾದ ಭಾರತ ಲಾಕೌಡೌನ್‌ನಿಂದಾಗಿ ಹಸಿದವರ ಹೊಟ್ಟೆ ಹಸಿವು ತಣಿಸುವ ಸೇವೆಯು ಕಟಪಾಡಿಯ ತಂಡವೊಂದರಿಂದ ಸದ್ದಿಲ್ಲದೆ ಸಾಗುತ್ತಿದೆ.

ಕಳೆದ ಎರಡು ಮೂರು ದಿನಗಳಿಂದಲೂ ಜಿಲ್ಲಾ ಪಂಚಾಯತ್‌ ಸದಸ್ಯೆ ಗೀತಾಂಜಲಿ ಸುವರ್ಣ ಕಟಪಾಡಿ ಅವರು ಅಡುಗೆಯನ್ನು ಸಿದ್ಧಪಡಿಸಿ ದಿನವೊಂದರ ಸುಮಾರು 140 ಹಸಿದವರ ಹೊಟ್ಟೆಯನ್ನು ತಣಿಸುವ ಕೆಲಸ ಮಾಡುತ್ತಿದ್ದಾರೆ.

ಉಡುಪಿ, ಮಣಿಪಾಲದಾದ್ಯಂತ ಸುಮಾರು 80ರಿಂದ 100ರಷ್ಟು ಅನ್ನ ಸಾಂಬಾರ್‌ ಪೊಟ್ಟಣವು ಅಸಹಾಯಕರಾಗಿರುವ ಹಸಿದವರನ್ನು ಗುರುತಿಸಿ ನೀಡಲಾಗುತ್ತಿದೆ. ಇದರೊಂದಿಗೆ ಒಂದು ಬಾಟಲಿ ಕುಡಿಯುವ ನೀರು ಕೂಡಾ ವಿತರಿಸಲಾಗುತ್ತಿದೆ.

ಕಟಪಾಡಿ ಫಾರೆಸ್ಟ್‌ ಗೇಟ್‌ ಬಳಿಯ ಬಸ್‌ ತಂಗುದಾಣವೊಂದರಲ್ಲಿ ಗೋವಾದಿಂದ ಬಂದಿದ್ದು, ಕೇರಳದತ್ತ ತೆರಳುವವ ಎಂದು ಹೇಳುವ ಮಾನಸಿಕ ಅಸ್ವಸ್ಥನೋರ್ವ ಇರುವುದನ್ನು ಕಂಡು ಬಂದ ಫೋನ್‌ ಕರೆಯನ್ನಾಧರಿಸಿ ಈ ತಂಡವು ಸ್ಥಳಕ್ಕಾಗಮಿಸಿ ಆತನಿಗೂ ಅನ್ನದ
ಪೊಟ್ಟಣ ಮತ್ತು ಕುಡಿಯುವ ನೀರಿನ ಬಾಟಲಿಯನ್ನು ನೀಡಿತು.

ಉಡುಪಿ
ಹಸಿವಿನಿಂದ ಬಳಲುತ್ತಿರುವ ನಿರಾಶ್ರಿತರಿಗೆ ಉಡುಪಿಯ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ನಿತ್ಯವೂ ಅನ್ನದಾನ ಮಾಡುತ್ತಿದ್ದಾರೆ. ಅವರು ಉಚಿತವಾಗಿ ಮಧ್ಯಾಹ್ನದ ಹೊತ್ತು ಬಿಸಿ ಊಟದ ಪ್ಯಾಕ್‌ನ್ನು ಹಸಿದವರಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ವಿತರಿಸುತ್ತಿದ್ದಾರೆ. ನಿತ್ಯವೂ 80ರಷ್ಟು ಬಿಸಿ ಊಟ ಪೊಟ್ಟಣದ ವಿತರಣೆ ಅವರಿಂದ ನಡೆಯುತ್ತಿದೆ.

ಉದ್ಯಾವರ (ಕಟಪಾಡಿ): ಉಡುಪಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು ಇವರ ನೇತƒತ್ವದಲ್ಲಿ ಉದ್ಯಾವರ ಜಿ. ಪಂ.ವ್ಯಾಪ್ತಿಯಲ್ಲಿ ಆಶ್ರಯ ರಹಿತರಿಗೆ, ಕೂಲಿ ಕಾರ್ಮಿಕರಿಗೆ ಊಟವನ್ನು ತಯಾರಿಸಿ ವಿತರಿಸಿದರು.

ಬೆಳ್ಮಣ್‌: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬೆಳು ವಾಯಿಂದ ಬಾಗಲಕೋಟೆಗೆ ಹೊರಟಿರುವ ಕೂಲಿ ಕಾರ್ಮಿಕರಿಗೆ ಬೆಳ್ಮಣ್‌ನಲ್ಲಿ ಪೊಲೀಸರು ಹಾಗೂ ಸಾಮಾಜಿಕ ಕಾರ್ಯಕರ್ತರು ಊಟದ ವ್ಯವಸ್ಥೆಯನ್ನು ಮಾಡಿ ಮತ್ತೆ ಬೆಳುವಾಯಿಗೆ ಕಳುಹಿಸಿಕೊಟ್ಟ ಘಟನೆ ಶನಿವಾರ ನಡೆದಿದೆ.
ಬೆಳ್ಮಣ್‌ ಜೇಸಿಐ ಅಧ್ಯಕ್ಷ ಸತ್ಯನಾರಾಯಣ ಭಟ್‌ ರವರು ತಮ್ಮ ಮನೆಯಲ್ಲಿ 40 ಮಂದಿಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಿದರು. ಹರಿಪ್ರಸಾದ್‌ ನಂದಳಿಕೆ, ಸರ್ವಜ್ಞ ತಂತ್ರಿ, ಅನಿತಾ ಡಿ’ಸೋಜಾ ಸಹಕರಿಸಿದ್ದರು.

ಬೆಳುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷರು ಹಾಗೂ ಮೂಡಬಿದಿರೆ ಶಾಸಕ ಉಮಾನಾಥ್‌ ಕೋಟ್ಯಾನ್‌ ಅವರಿಗೆ ವಿಷಯ ತಿಳಿಸಲಾಗಿ ಸಂತ್ರಸ್ತರಿಗೆ ಬೆಳುವಾಯಿಯಲ್ಲಿ ಉಳಿದುಕೊಳ್ಳಲು ಹಾಗೂ ಊಟದ ವ್ಯವಸ್ಥೆಗೂ ಅವರು ಸಹಕರಿಸಿದರು.

ಭಾರತ ಲಾಕ್‌ಔಟ್‌ನಿಂದಾಗಿ ಹೊರಜಿಲ್ಲಾ ಕಾರ್ಮಿಕರು, ದಾರಿಹೋಕರು, ಕೆಲವು ಭಿಕ್ಷಕರು, ಮಾನಸಿಕ ಅಸ್ವಸ್ಥರು ಉಣ್ಣಲು ಊಟ ಇಲ್ಲದೆ ಹಸಿವಿನಿಂದ ಕಂಗಾಲಾಗಬಾರದು ಎಂಬ ದೃಷ್ಟಿಯಿಂದ ಈ ಸೇವೆಯನ್ನು ಆರಂಭಿಸಲಾಗಿದೆ. ಪುಣ್ಯದ ಕೆಲಸ ಎಂದು ಭಾವಿಸಿ ಸೇವೆಯನ್ನು ಮುನ್ನಡೆಸುತ್ತಿದ್ದು, ಇಚ್ಛಿತರು ಅಕ್ಕಿ, ಬೇಳೆ, ಧವಸ ಧಾನ್ಯವನ್ನು ನೀಡಿ ಈ ಸೇವೆಯನ್ನು ನಿರಂತರಗೊಳಿಸಲು ಸಹಕರಿಸಬಹುದು ಎಂದು ಗೀತಾಂಜಲಿ ಎಂ. ಸುವರ್ಣ(9901035715) ಉದಯವಾಣಿ ಗೆ ಪ್ರತಿಕ್ರಿಯಿಸಿದ್ದಾರೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.