Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ


Team Udayavani, May 2, 2024, 2:28 PM IST

Udayavani Kannada Newspaper

ಉಡುಪಿ: ಪರಿಸರ ಸ್ನೇಹಿ ವಾಹನಗಳಿಗೆ ಸರಕಾರ ಉತ್ತೇಜನ ನೀಡುತ್ತಿದ್ದು, ರಸ್ತೆಗಳಲ್ಲಿ ಎಲೆಕ್ಟ್ರಿಕ್‌ ಹಾಗೂ ಸಿಎನ್‌ಜಿ ಲಘು ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿವೆ. ಕರಾವಳಿ ಭಾಗದಲ್ಲಿ ಅಧಿಕ ಸಂಖ್ಯೆಯಲ್ಲಿರುವ ಖಾಸಗಿ ಬಸ್‌ಗಳು ಕೂಡ ಸಿಎನ್‌ಜಿ ಬಳಸಿ ಬಸ್‌ಗಳನ್ನು ಓಡಿಸಲು ಮುಂದಾಗುತ್ತಿದ್ದು, ಈಗಾಗಲೇ ಅಂಬಿಕಾ ಹೆಸರಿನ ಖಾಸಗಿ ಬಸ್‌ ಸಿಎನ್‌ಜಿ
ಮೂಲಕ ಚಲಿಸಿ ಪರಿಸರ ಸ್ನೇಹಿ ಬಸ್‌ ಎನಿಸಿಕೊಂಡಿದೆ.

1978ರಲ್ಲಿ ಮೊದಲ ಉಡುಪಿ-ಕುಂದಾಪುರ ಮಾರ್ಗಕ್ಕೆ ಮೊದಲ ಖಾಸಗಿ ಬಸ್‌ ಸೇವೆ ಆರಂಭಿಸಿದ ಮಲ್ಪೆಯ ಎಂಡಿ ಶ್ರೀಧರ್‌ ಅವರ ನೆನಪಿಗಾಗಿ ಅವರ ಪುತ್ರ ಬಸ್‌ ಮಾಲಕ ಎಂ.ಎಸ್‌.ಸೂರಜ್‌ ಅವರು ಬಸ್‌ಗೆ ಸಿಎನ್‌ಜಿ ಅಳವಡಿಸುವ ಮೂಲಕ ಪರಿಸರ ಸ್ನೇಹಿ ಜತೆಗೆ ಲಾಭದಾಯಕವನ್ನಾಗಿಸಿದ್ದಾರೆ. ಇವರ ಬಳಿ ವಿವಿಧ ರೂಟ್‌ಗಳಿಗೆ ಸಂಚರಿಸುವ ಒಟ್ಟು 7 ಬಸ್‌ಗಳಿದ್ದು, ಈ ಪೈಕಿ ಉಡುಪಿ ಒಂದು ಬಸ್‌ಗೆ ಸಿಎನ್‌ಜಿ ಅಳವಡಿಕೆ ಮಾಡಿದ್ದಾರೆ. ಇದರಿಂದ ದಿನಕ್ಕೆ 800 ರೂ.ಗಳಿಂದ 1,000 ರೂ.ಗಳಷ್ಟು ಹಣ ಉಳಿತಾಯವಾಗುತ್ತದೆಯಂತೆ.

ಡೀಸೆಲ್‌ ಬಸ್‌ಗಳು ಒಂದು ಲೀ.ಗೆ 3.70 ರಿಂದ 4.1 ರಷ್ಟು ಮೈಲೇಜ್‌ ನೀಡಿದರೆ ಸಿಎನ್‌ಜಿ ಬಸ್‌ಗಳು 5.5ರಿಂದ 6ರಷ್ಟು ಮೈಲೇಜ್‌ ನೀಡುತ್ತದೆ. ಡೀಸೆಲ್‌ ಬಸ್‌ ಗೆ ಹೋಲಿಸಿದರೆ ಸಿಎನ್‌ಜಿ ವೆಚ್ಚವೂ ಕಡಿಮೆಯಿದೆ.

ನಿರ್ವಹಣೆ ಸುಲಭ
ಡೀಸೆಲ್‌ ಎಂಜಿನ್‌ ಬಸ್‌ಗಳಲ್ಲಿ ನಿರ್ವಹಣೆ ದುಬಾರಿ. ಟರ್ಬೊ, ಇಂಟರ್‌ಕೂಲರ್‌ಗಳ ನಿರ್ವಹಣೆ ಮಾಡಬೇಕಾಗುತ್ತದೆ. ಆದರೆ ಸಿಎನ್‌ಜಿ ಬಸ್‌ಗಳಲ್ಲಿ 3 ಸಿಲಿಂಡರ್‌ಗಳನ್ನು ಅಳವಡಿಸಲಾಗಿದ್ದು, ಸ್ಪಾರ್ಕ್‌ ಪ್ಲಗ್‌ಗಳನ್ನು ಆದ್ಯತೆ ಮೇರೆಗೆ ಬದಲಾಯಿಸಿದರೆ ಸಾಕು. ಉಳಿದಂತೆ ಹೆಚ್ಚಿನ ನಿರ್ವಹಣೆಯಿಲ್ಲ. ಪರಿಸರ ಮಾಲಿನ್ಯವೂ ಉಂಟಾಗುವುದಿಲ್ಲ. ಶಬ್ದ ಮಾಲಿನ್ಯವೂ ಕಡಿಮೆ. ನಗರ ಸಂಚಾರಕ್ಕೆ ಬಹು ಉಪಯೋಗವಾಗಿದೆ.

ಸಬ್ಸಿಡಿ ಕೊರತೆ
ಪರಿಸರ ಸ್ನೇಹಿ ವಾಹನ ಉತ್ತೇಜಿಸುತ್ತಿರುವ ಸರಕಾರಿ ಸಿಎನ್‌ಜಿ ವಾಹನಕ್ಕೆ ಯಾವುದೇ ಸಬ್ಸಿಡಿ ನೀಡದಿರುವ ಕಾರಣ ಕೆಲವರು ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜತೆಗೆ ದರವೂ ದುಬಾರಿಯಾಗಿದೆ. ಎಲೆಕ್ಟ್ರಿಕ್‌ ವಾಹನ ಕೊಂಡುಕೊಳ್ಳುವವರಿಗೆ ಮೊದಲಿಗೆ ಸಬ್ಸಿಡಿ ನೀಡಿದ್ದ ಸರಕಾರ ಬಳಿಕ ಅದರಲ್ಲಿ ಅರ್ಧದಷ್ಟನ್ನು ಸ್ಥಗಿತಗೊಳಿಸಿತು. ದರವನ್ನಾದರೂ ಕಡಿಮೆ ಮಾಡಿದರೆ ಮತ್ತಷ್ಟು ಪರಿಸರ ಸ್ನೇಹಿ ವಾಹನಗಳು ರಸ್ತೆಗೆ ಇಳಿಯಲಿವೆ.

ಸಿಎನ್‌ಜಿ ಲಭ್ಯತೆ ಸಮಸ್ಯೆ
ಜಿಲ್ಲೆಯಲ್ಲಿ ಬೇಡಿಕೆಗೆ ತಕ್ಕಂತೆ ಸಿಎನ್‌ಜಿ ಪೂರೈಕೆಯಾಗದ ಕಾರಣ ಕೆಲವೊಮ್ಮೆ ವ್ಯತ್ಯಯ ಉಂಟಾಗುತ್ತಿದೆ. ಮಂಗಳೂರು, ಕುಂದಾಪುರ, ಪಡುಬಿದ್ರಿ ಸಿಎನ್‌ಜಿ ಪಂಪ್‌ಗ್ಳಿಗೆ ಹೋಲಿಸಿದರೆ ಉಡುಪಿಯಲ್ಲಿ ಸಿಎನ್‌ಜಿ ದರ 3 ರೂ.ಅಧಿಕವಿದೆ. ಅದಾನಿ ಸಂಸ್ಥೆಯ ಮೂಲಕ ಉಡುಪಿ ಜಿಲ್ಲೆಗೆ ಸಿಎನ್‌ಜಿ ಪೂರೈಕೆಯಾಗುತ್ತಿದ್ದು, ಜಿಲ್ಲೆಯ ಎಲ್ಲ ಕಡೆಯೂ ಏಕರೂಪದ ದರ ನಿಗದಿ ಮಾಡುವ ಬಗ್ಗೆ ಸಂಸ್ಥೆಯ ಮುಖ್ಯಸ್ಥರಿಗೂ ಮನವರಿಕೆ ಮಾಡಲಾಗಿದೆ ಎನ್ನುತ್ತಾರೆ ಬಸ್‌ ಮಾಲಕರು.

ಮತ್ತಷ್ಟು ಪ್ರೋತ್ಸಾಹ ಬೇಕಿದೆ
ಡೀಸೆಲ್‌ ಬಸ್‌ಗೆ ಹೋಲಿಸಿದರೆ ಸಿಎನ್‌ಜಿ ಬಸ್‌ ದರ ಸುಮಾರು 3ರಿಂದ 3.5 ಲ.ರೂ.ಗಳಷ್ಟು ದುಬಾರಿ. ಆದರೆ ದೈನಂದಿನ ನಿರ್ವಹಣೆ ಕಡಿಮೆ. ಇಂಧನದ ಹಣದಲ್ಲಿಯೂ ಉಳಿತಾಯವಾಗಲಿದೆ. ಸಿಎನ್‌ಜಿ ಬಸ್‌ಗಳನ್ನು ಮತ್ತಷ್ಟು ಪ್ರೋತ್ಸಾಹಿಸುವ ಉದ್ದೇಶದಿಂದ ಸಿಎನ್‌ಜಿ ಸ್ಟೇಷನ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಜತೆಗೆ ಸರಕಾರ ಹೊಸ ವಾಹನ ಖರೀದಿಸುವವರಿಗೆ ಪ್ರೋತ್ಸಾಹ ನೀಡುವ ಕೆಲಸವಾಗಬೇಕು.
ಎಂ.ಎಸ್‌.ಸೂರಜ್‌, ಬಸ್‌ ಮಾಲಕರು

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

EPF

ಉದ್ಯೋಗ ಸೃಷ್ಟಿಗಾಗಿ ಇಎಲ್‌ಐ ಯೋಜನೆ: ಶಶಿಕಾಂತ್‌

1-aa-aa-KMC

ಡಾ| ಶರತ್‌ ಕೆ. ರಾವ್‌ ಅವರಿಗೆ ಎಫ್‌ಆರ್‌ಸಿಪಿ ಪ್ರಶಸ್ತಿ

police

ಬೆದ್ರಪಲ್ಕೆ: ಹಸುವಿನ ಕೊಳೆತ ರುಂಡ ಪತ್ತೆ

puttige-3

Udupi; ಗೀತಾರ್ಥ ಚಿಂತನೆ 321: ದೇವ ಪರ, ದೇವ ವಿರೋಧ- ಎರಡೇ ವರ್ಗ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.