ಉಡುಪಿ: ಜಲಕ್ಷಾಮದ ಆತಂಕ – ಬಜೆ ಡ್ಯಾಂ ತಗ್ಗಿದ ಸ್ವರ್ಣಾ ನದಿ ಒಳ ಹರಿವು

ಎತ್ತರ ಪ್ರದೇಶಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ತಲೆದೋರಿದೆ.

Team Udayavani, Mar 6, 2023, 4:33 PM IST

ಉಡುಪಿ: ಜಲಕ್ಷಾಮದ ಆತಂಕ – ಬಜೆ ಡ್ಯಾಂ ತಗ್ಗಿದ ಸ್ವರ್ಣಾ ನದಿ ಒಳ ಹರಿವು

ಉಡುಪಿ: ಬೇಸಗೆ ಯಲ್ಲಿ ಉಡುಪಿ ನಗರಕ್ಕೆ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಈಗಿನಿಂದಲೇ ಮುಂಜಾಗ್ರತೆ ವಹಿಸದಿದ್ದರೆ ಜಲಕ್ಷಾಮ ಭೀತಿ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನಗರಸಭೆ ಮುಂಜಾಗ್ರತಾ ಕ್ರಮಗಳನ್ನು ಆರಂಭಿಸಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ಹಿರಿಯಡಕ ಸ್ವರ್ಣಾ ನದಿ ಬಜೆ ಅಣೆಕಟ್ಟಿನಲ್ಲಿ ತಿಂಗಳ ಹಿಂದೆ ಒಳ ಹರಿವು ನಿಂತಿದೆ. ಕಳೆದ ವರ್ಷ ಈ ಸಮಯದಲ್ಲಿ ಒಳ ಹರಿವು ಇತ್ತು. ಸದ್ಯ ನೀರಿನ ಪ್ರಮಾಣ ಮೇ ಮೊದಲ ವಾರದವರೆಗೆ ಸಾಕಾಗುವಷ್ಟು ಇದೆ.

ಹಿಂದಿನ ವರ್ಷಗಳಲ್ಲಿ ನಗರದ 35 ವಾರ್ಡ್‌ಗಳನ್ನು ಮೂರು ವಲಯ ಗಳಾಗಿ ವಿಂಗಡಿಸಿ ಪ್ರತಿದಿನಕ್ಕೆ 8 ಗಂಟೆ ಗಳಂತೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಐದಾರು ತಿಂಗಳ ಹಿಂದೆ ವಲಯ ವಾರು ಸ್ಥಗಿತಗೊಳಿಸಿ ಪ್ರಾಯೋಗಿಕ ದಿನದ 24 ಗಂಟೆ ನೀರು ಪೂರೈಕೆ ಮಾಡುವ ಯೋಜನೆಯೊಂದಿಗೆ ಪೂರೈಕೆ ಮಾಡಲಾಗುತ್ತಿದೆ. ಆದರೂ ಎತ್ತರ ಪ್ರದೇಶದ ಕೆಲವೆಡೆ ನೀರು ಸಮರ್ಪಕ ಪೂರೈಕೆಯಾಗುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ.

ತುರ್ತು ನೀರಿನ ಸಮಸ್ಯೆ ಎದುರಾದರೆ ಕೊನೆಯ ಕ್ಷಣದಲ್ಲಿ ವಿಳಂಬವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸ್ವರ್ಣಾ ನದಿ ಗುಂಡಿಗಳಲ್ಲಿ ಪಂಪಿಂಗ್‌ ನಡೆಸಿ ಬಜೆ ಕಡೆಗೆ ನೀರು ಹರಿಸುವ ಯೋಜನೆಗೆ ಟೆಂಡರ್‌ ಪ್ರಕ್ರಿಯೆ ನಡೆದು, ವರ್ಕ್‌ ಆರ್ಡರ್‌ ಆಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಎಲ್ಲ ವಾರ್ಡ್‌ಗಳಿಗೆ ಏಕಕಾಲದಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ನಿತ್ಯ 30 ಎಂಎಲ್‌ಡಿ (ಮಿಲಿಯನ್‌ ಲೀ. ಪರ್‌ ಡೇ) ನೀರು ಪಂಪಿಂಗ್‌ ಮಾಡಲಾಗುತ್ತಿದೆ. ತಗ್ಗು  ಪ್ರದೇಶದಲ್ಲಿ ಸಾಕಷ್ಟು ಒತ್ತಡದಲ್ಲಿ ನೀರು ಪೂರೈಕೆಯಾಗುತ್ತದೆ. ಕೆಲವರು ಹೆಚ್ಚು ಬಳಸುವ ಕಾರಣ ಓವರ್‌ಹೆಡ್‌ ಟ್ಯಾಂಕ್‌ ಶೇಖರಣೆಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಪರಿಣಾಮವಾಗಿ ಎತ್ತರ ಪ್ರದೇಶಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ತಲೆದೋರಿದೆ.

ಜಲಮೂಲಗಳ ಬಳಕೆಗೂ ಕ್ರಮ
ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ನಗರ ವ್ಯಾಪ್ತಿಯಲ್ಲಿರುವ ಜಲಮೂಲಗಳ ಬಳಕೆ ಮಾಡಿಕೊಳ್ಳದಿದ್ದರೆ ಸಮಸ್ಯೆ ಎದುರಾಗಲಿದೆ. ನಗರದಲ್ಲಿರುವ 35ಕ್ಕೂ ಅಧಿಕ ಬೋರ್‌ವೆಲ್‌, ಬಾವಿಗಳನ್ನು ವ್ಯವಸ್ಥಿತವಾಗಿಸಿ ನೀರು ಪಡೆಯುವ ಯೋಜನೆ ರೂಪಿಸಲು ನಗರಸಭೆ ಮುಂದಾಗಿದೆ. ಪ್ರಸ್ತುತ ಬಜೆ ಡ್ಯಾಂ ಅಣೆಕಟ್ಟಿನ ಪಂಪಿಂಗ್‌ ಸ್ಟೇಶನ್‌ನಲ್ಲಿ 500 ಎಚ್‌ಪಿ ಸಾಮರ್ಥ್ಯದ ಹೊಸ ಪಂಪ್‌ ಅಳವಡಿಸಲಾಗಿದ್ದು, ಸದ್ಯಕ್ಕೆ ಪ್ರತೀದಿನ 24 ಗಂಟೆ ಪಂಪಿಂಗ್‌
ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಪಂಪಿಂಗ್‌ ಸಮಯವನ್ನು ಕಡಿಮೆಗೊಳಿಸುವ ಬಗ್ಗೆ ನಗರಸಭೆ ಚಿಂತಿಸಿದೆ.

ನೀರಿನ ಮಟ್ಟ- ಆ ವರ್ಷ, ಈ ವರ್ಷ
ಈ ಹಿಂದಿನ ಮೂರು ವರ್ಷಗಳಿಂದ ಮಳೆ ಉತ್ತಮವಾಗಿದ್ದ ಕಾರಣ ನಗರ ವ್ಯಾಪ್ತಿಗೆ ಕುಡಿಯುವ ನೀರಿಗೆ ಕೊರತೆ ಉಂಟಾಗಿಲ್ಲ. ಪ್ರಸ್ತುತ ಸ್ವರ್ಣಾ ನದಿ ಬಜೆ ಅಣೆಕಟ್ಟುವಿನಲ್ಲಿ ಮಾ. 5 ರಂದು 5.70 ಮೀಟರ್‌ ನೀರಿನ ಮಟ್ಟವಿದೆ. ಶಿರೂರು ಅಣೆಕಟ್ಟಿನಲ್ಲಿ 2 ಮೀ. ನೀರು ಪ್ರಮಾಣವಿದೆ. ಶಿರೂರು
ಡ್ಯಾಂನ ನೀರಿನ ಗೇಟ್‌ ಇನ್ನೂ ತೆರೆದಿಲ್ಲ. ಕಳೆದ ವರ್ಷ ಮಾ.5ರಂದು 5.90 ನೀರಿನ ಮಟ್ಟವಿತ್ತು. ಶಿರೂರು ಡ್ಯಾಂನಲ್ಲಿ ನೀರಿನ ಮಟ್ಟ 4.50 ಇತ್ತು.

ಬೇಸಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗದಂತೆ ಹಲವು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ಶಿರೂರು ಡ್ರೆಜ್ಜಿಂಗ್‌ ನಡೆಸಲು ಟೆಂಡರ್‌ ಪ್ರಕ್ರಿಯೆ ನಡೆದಿದೆ. ಅನಗತ್ಯ ಕುಡಿಯುವ ನೀರನ್ನು ತೋಟಗಳಿಗೆ ಮತ್ತು ವಾಹನ ತೊಳೆಯಲು ಬಳಕೆ ಮಾಡಬಾರದು.
-ಸುಮಿತ್ರಾ ನಾಯಕ್‌, ಅಧ್ಯಕ್ಷರು, ಉಡುಪಿ ನಗರಸಭೆ

ನೀರಿನ ಮಹತ್ವ ತಿಳಿದುಕೊಂಡು ಮಿತ ಬಳಕೆಗೆ ಸೂಕ್ತ ಕ್ರಮ ಈಗಿನಿಂದಲೇ ಆರಂಭಗೊಳ್ಳಬೇಕು.
-ಪ್ರೊ| ಉದಯ ಶಂಕರ್‌,ಭೂಗರ್ಭ ಶಾಸ್ತ್ರಜ್ಞರು, ಎಂಐಟಿ. ಮಣಿಪಾಲ

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.