ಉಡುಪಿ ಕ್ಷೇತ್ರ: 2 ಸಾವಿರ ಎಕ್ರೆಯಲ್ಲಿ ಸಾವಯವ ಕೃಷಿ


Team Udayavani, Apr 30, 2021, 4:30 AM IST

ಉಡುಪಿ ಕ್ಷೇತ್ರ: 2 ಸಾವಿರ ಎಕ್ರೆಯಲ್ಲಿ ಸಾವಯವ ಕೃಷಿ

ಸಾಂದರ್ಭಿಕ ಚಿತ್ರ

ಉಡುಪಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಡಿಲು ಭೂಮಿ ಕೃಷಿ  ಆಂದೋಲನದ ಹಿನ್ನೆಲೆಯಲ್ಲಿ ಸ್ಥಾಪಿಸಿದ ಕೇದಾರೋತ್ಥಾನ ಟ್ರಸ್ಟ್‌ ವತಿಯಿಂದ ಸುಮಾರು 2,000 ಎಕ್ರೆ ಹಡಿಲು ಭೂಮಿಯಲ್ಲಿ ಸಾವಯವ ಪದ್ಧತಿಯಲ್ಲಿ ಕೃಷಿ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಕೆ.ರಘುಪತಿ ಭಟ್‌ ತಿಳಿಸಿದ್ದಾರೆ.

ಅಮೃತ್‌ ಗಾರ್ಡನ್‌ನಲ್ಲಿ ಗುರುವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯವಿರುವ ಬೀಜಗಳನ್ನು ಈಗಾಗಲೇ ಖರೀದಿಸಲಾಗಿದೆ. 500 ಎಕ್ರೆಗೆ ಬೇಕಾದ ನೇಜಿಯನ್ನು ಕೇಂದ್ರದಿಂದ ಸಿದ್ಧಪಡಿಸಿ ಇಡಲಾಗಿದೆ. ಕೃಷಿಯಲ್ಲಿ ತಂತ್ರಜ್ಞಾನ ಬಳಸಿಕೊಳ್ಳುವ ಉದ್ದೇಶದಿಂದ ಕ್ಷೇತ್ರದಲ್ಲಿ 6 ಯಂತ್ರ ಸಹಾಯಕ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು. ಕ್ಷೇತ್ರದಲ್ಲಿ ಹೆಚ್ಚಿನ ಕೃಷಿ ಭೂಮಿಗಳಲ್ಲಿ ಮಳೆಗಾಲದಲ್ಲಿ ನೀರು ತುಂಬುವುದರಿಂದ ಹಡಿಲು ಬಿಡಲಾಗಿದೆ. ಈ ನಿಟ್ಟಿನಲ್ಲಿ ಮೊದಲು ನೀರು ಹರಿದು ಬರುವ ತೋಡುಗಳ ದುರಸ್ತಿ ಮಾಡಬೇಕಾಗಿದೆ. ಈಗಾಗಲೇ 15 ಹಿಟಾಚಿಯಲ್ಲಿ ಹೊಳೆತ್ತುವ ಕೆಲಸ ನಡೆಯುತ್ತಿದೆ. ಒಂದು ಎಕ್ರೆ ಕೃಷಿ ಮಾಡಲು 20,000ರೂ. ವೆಚ್ಚವಾಗುತ್ತದೆ. ಸುಮಾರು 2,000 ಎಕ್ರೆಯಲ್ಲಿ ವ್ಯವಸಾಯ ನಡೆಸಲು ಸುಮಾರು 4-5 ಕೋಟಿ ರೂ. ಬೇಕಾಗಬಹುದು. ಆದುದರಿಂದ ಈ ಯೋಜನೆಗೆ ದಾನಿಗಳಿಂದ ದೇಣಿಗೆ ಪಡೆಯಲು ನಿರ್ಧರಿಸಲಾಗಿದೆ ಎಂದರು.

ಯಾವುದೇ ಒಪ್ಪಂದವಿಲ್ಲ :

ಹಡಿಲು ಭೂಮಿಯಲ್ಲಿ ಕೃಷಿ ಮಾಡುವುದಕ್ಕೆ ಸಂಬಂಧಿಸಿ ಟ್ರಸ್ಟ್‌ ಮತ್ತು ಭೂಮಿಯ ಮಾಲಕರ ಮಧ್ಯೆ ಯಾವುದೇ ಒಪ್ಪಂದ ಇರುವುದಿಲ್ಲ. ಎಲ್ಲವೂ ವಿಶ್ವಾಸದಿಂದ ಕೆಲಸ ಮಾಡಲಾಗುವುದು. ಇದರಲ್ಲಿ ಹಣ ಹೂಡಿಕೆ ಮಾಡಿದರೆ ಇಳುವರಿ ಮಾರಾಟ ಮಾಡಿ ಬಡ್ಡಿ ರಹಿತವಾಗಿ ಹಣ ವಾಪಸು ನೀಡಲಾಗುವುದು. ಈ ಕುರಿತ ಎಲ್ಲ ಲೆಕ್ಕಾಚಾರಗಳು ಕೂಡ ಪಾರದರ್ಶಕವಾಗಿರುತ್ತದೆ ಎಂದು ಹೇಳಿದರು.

ರೈತರಿಗೆ ಸಹಕಾರ :

ಸಾವಯವ ಕೃಷಿಯಿಂದ ಬರುವ ಇಳುವರಿಯನ್ನು ಟ್ರಸ್ಟ್‌ ಪಡೆದುಕೊಳ್ಳಲಿದೆ. ಈ ಬಾರಿ ಯಾವುದೇ ಲಾಭದ ನಿರೀಕ್ಷೆ ಯನ್ನು ಹೊಂದಿಲ್ಲ. ಹಡಿಲು ಭೂಮಿಯಲ್ಲಿ ಮಾಲಕರೇ ಕೃಷಿ ಮಾಡುವಂತೆ ಮಾಡುವುದು ನಮ್ಮ ಮೊದಲ ಆದ್ಯತೆ. ಅವರು ಮಾಡದಿದ್ದರೆ ನಾವು ಮಾಡುತ್ತೇವೆ. ಅದೇ ರೀತಿ ಭೂಮಿಯ ಮಾಲಕರು ತಾವೇ ಕೃಷಿ ಮಾಡಲು ಬಯಸಿದಲ್ಲಿ ಅವರಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.  ಟ್ರಸ್ಟ್‌ ಸದಸ್ಯರಾದ ಮುರಳಿ ಕಡೆಕಾರ್‌, ರಾಘವೇಂದ್ರ ಕಿಣಿ, ಮಹೇಶ್‌ ಠಾಕೂರ್‌, ಜಿ.ಪಂ. ಮಾಜಿ ಅಧ್ಯಕ್ಷ ದಿನಕರ್‌ ಬಾಬು, ಜಿ.ಪಂ. ಸ್ಥಾಯೀ ಸಮಿತಿ ಮಾಜಿ ಅಧ್ಯಕ್ಷ ಪ್ರತಾಪ್‌ ಹೆಗ್ಡೆ ಮಾರಾಳಿ, ಜೀವನ ಯಂತ್ರ ಅಗ್ರಿ ಸೊಲ್ಯೂಷನ್ಸ್‌ನ ಪ್ರ. ವ್ಯವಸ್ಥಾಪಕ ಶ್ರೀಕಾಂತ್‌ ಭಟ್‌ ಉಪಸ್ಥಿತರಿದ್ದರು.

4ನೇ ವರ್ಷಕ್ಕೆ ವಾಪಾಸು :

ವರ್ಷದಿಂದ ವರ್ಷಕ್ಕೆ ಹಡಿಲು ಭೂಮಿಯ ಕೃಷಿಯನ್ನು ವಿಸ್ತರಿಸಲಾಗುತ್ತದೆ. ಆ ಮೂಲಕ ಎಲ್ಲ ಹಡಿಲು ಬಿದ್ದ ಭೂಮಿಯನ್ನು ಕೃಷಿ ಯೋಗ್ಯ ಭೂಮಿಯನ್ನಾಗಿಸುವುದೇ ಗುರಿಯಾಗಿದೆ. ಹಡಿಲು ಭೂಮಿಯಲ್ಲಿ ಮಾಲಕರಿಗೆ ಕೃಷಿ ಮಾಡಲು ಸಾಧ್ಯವಾಗದಿದ್ದರೆ ಸತತವಾಗಿ ಮೂರು ವರ್ಷ ಗಳ ಟ್ರಸ್ಟ್‌ ವತಿಯಿಂದ ಕೃಷಿ ಮಾಡಲಾಗುತ್ತದೆ. ನಾಲ್ಕು ವರ್ಷದ ಬಳಿಕ ಆ ಭೂಮಿಯ ಮಾಲಕರೇ ಕೃಷಿಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಭಟ್‌ ತಿಳಿಸಿದರು.

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.