ಉಡುಪಿ ಪ್ರಥಮ, ದ.ಕ. ಜಿಲ್ಲೆ ತೃತೀಯ ಪಡಿತರ ಸಾಮಗ್ರಿ ವಿತರಣೆ


Team Udayavani, Apr 4, 2020, 11:19 AM IST

ಉಡುಪಿ ಪ್ರಥಮ, ದ.ಕ. ಜಿಲ್ಲೆ ತೃತೀಯ ಪಡಿತರ ಸಾಮಗ್ರಿ ವಿತರಣೆ

ಉಡುಪಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಹಾಗೂ ಸರಕಾರದ ಆದೇಶಾನುಸಾರ ಎಪ್ರಿಲ್‌, ಮೇ ತಿಂಗಳ ಪಡಿತರ ವಿತರಣೆ ಪ್ರಾರಂಭವಾದ ಎರಡು ದಿನದಲ್ಲಿ ಅಧಿಕ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಉಡುಪಿ ಪ್ರಥಮ, ದ.ಕ. ತೃತೀಯ ಸ್ಥಾನ ಪಡೆದುಕೊಂಡಿದೆ.

ಉಡುಪಿ ಜಿಲ್ಲೆಯಲ್ಲಿ 2,29,508 ಪಡಿತರ ಚೀಟಿದಾರರಿದ್ದು, ಮೊದಲ ಎರಡು ದಿನಗಳಲ್ಲಿಯೇ 26,500 ಕುಟುಂಬಗಳಿಗೆ ಪಡಿತರ ವಿತರಿಸುವ ಮೂಲಕ 10ರಲ್ಲಿ 9 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಮೊದಲ ಸ್ಥಾನದಲ್ಲಿದೆ. ಕೊಡಗು ಜಿಲ್ಲೆಯು 10,000 ಕುಟುಂಬಗಳಿಗೆ ಹಾಗೂ ದ.ಕ. ಜಿಲ್ಲೆಯಲ್ಲಿ 4,30,665 ಪಡಿತರ ಚೀಟಿದಾರರಿದ್ದು, 31,600 ಕುಟುಂಬಗಳಿಗೆ ಪಡಿತರ ವಿತರಿಸುವ ಮೂಲಕ ಕ್ರಮವಾಗಿ ಶೇ. 7.6 ಹಾಗೂ 7.28ರಷ್ಟು ಪ್ರಗತಿ ಸಾಧಿಸಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿವೆ.

ಗೋಧಿ ಪ್ರಸ್ತಾವನೆ
ಉಡುಪಿ ಜಿಲ್ಲೆಗೆ ತಿಂಗಳಿಗೆ 45,000 ಕ್ವಿಂಟಾಲ್‌ ಅಗತ್ಯವಿದೆ. ಈ ಬಾರಿ ಎರಡು ತಿಂಗಳ ರೇಷನ್‌ ನೀಡುತ್ತಿರುವುದರಿಂದ 90,000 ಕ್ವಿಂಟಲ್‌ ಹಾಗೂ ದ.ಕ. ಜಿಲ್ಲೆಯಲ್ಲಿ 99,500 ಕ್ವಿಂಟಲ್‌ ಅಕ್ಕಿ ಅಗತ್ಯವಿದೆ. ಪ್ರಸ್ತುತ ದ.ಕ. ಜಿಲ್ಲೆಯಿಂದ 10,030 ಕ್ವಿ. ಹಾಗೂ ಉಡುಪಿಯಿಂದ 6,500 ಕ್ವಿ. ಗೋಧಿ ಪ್ರಸ್ತಾವನೆಯನ್ನು ಇಲಾಖೆಗೆ ಕಳುಹಿಸಲಾಗಿದೆ.

1,192 ಪಡಿತರ ವಿತರಣಾ ಕೇಂದ್ರ
ಉಡುಪಿ ಜಿಲ್ಲೆಯಲ್ಲಿ 292 ಹಾಗೂ ದ.ಕ. ಜಿಲ್ಲೆಯಲ್ಲಿ 900 ಪಡಿತರ ವಿತರಣಾ ಕೇಂದ್ರಗಳಿವೆ. ಈ ಹಿಂದೆಲ್ಲ ತಿಂಗಳ ಕೊನೆಯ ವರೆಗೂ ಗ್ರಾಹಕರು ಪಡಿತರ ಒಯ್ಯುತ್ತಿದ್ದರೆ ಈ ಬಾರಿ ಆರಂಭದಲ್ಲೇ ಹೆಚ್ಚಿನವರೂ ಧಾವಿಸಿ ಬಂದಿರುವ ಕಾರಣ ಮೊದಲ ಎರಡು ದಿನಗಳಲ್ಲಿಯೇ ಕೆಲವು ಕೇಂದ್ರಗಳಲ್ಲಿ ಬಹುತೇಕ ದಾಸ್ತಾನು ವಿತರಣೆಯಾಗಿದೆ. ಗೋದಾಮುಗಳಲ್ಲಿ ಸಾಕಷ್ಟು ದಾಸ್ತಾನು ಇದ್ದು ಆವಶ್ಯಕತೆಗನುಗುಣವಾಗಿ ಶೀಘ್ರದಲ್ಲೇ ಪೂರೈಸಲಾಗುವುದು ಎಂದು ಇಲಾಖಾ ಆಧಿಕಾರಿಗಳು ತಿಳಿಸಿದ್ದಾರೆ.

ಗೊಂದಲ ಬೇಡ
ನಮ್ಮಲ್ಲಿ ಆಹಾರ ಸಾಮಗ್ರಿ ಕೊರತೆ ಇಲ್ಲ. ವಿತರಣೆ ಸಹ ನಿರಂತವಾಗಿರಲಿದೆ. ಎಪ್ರಿಲ್‌ ತಿಂಗಳ ಕೊನೆಯ ವರೆಗೆ ಆಹಾರ ಸಾಮಗ್ರಿ ವಿತರಣೆ ಮಾಡಲು ಅವಕಾಶವಿದೆ. ಸಾರ್ವಜನಿಕರು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
-ಡಾ| ಮಂಜುನಾಥನ್‌, ಜಂಟಿ ನಿರ್ದೇಶಕ, ಆಹಾರ ಮತ್ತು ನಾಗರಿಕ ಇಲಾಖೆ, ದ.ಕ. ಮತ್ತು ಉಡುಪಿ ಜಿಲ್ಲೆ

ದ.ಕ. ಜಿಲ್ಲೆಗೆ 20 ಸಾವಿರ
ಕ್ವಿಂಟಾಲ್‌ ಕುಚ್ಚಲಕ್ಕಿ
ಮಂಗಳೂರು/ಉಡುಪಿ: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡ್‌ದಾರರಿಗೆ ವಿತರಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್‌ ಕುಚ್ಚಲಕ್ಕಿ ಬಿಡುಗಡೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕುಚ್ಚಲಕ್ಕಿ ನೀಡಬೇಕೆಂದು ವ್ಯಾಪಕ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಸರಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಮುಂದಿನ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಬಿಳಿ ಕುಚ್ಚಲಕ್ಕಿ ವಿತರಣೆ ಕೆಲವೆಡೆಗಳಲ್ಲಿ ನಡೆಯುತ್ತಿದೆ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.