Udupi; ಮೀನುಗಾರಿಕೆ ಸಂಪರ್ಕ ರಸ್ತೆಗಳು ನಿರ್ವಹಣೆಯಿಲ್ಲದೇ ದುಃಸ್ಥಿತಿಗೆ


Team Udayavani, Feb 28, 2024, 12:58 AM IST

Udupi; ಮೀನುಗಾರಿಕೆ ಸಂಪರ್ಕ ರಸ್ತೆಗಳು ನಿರ್ವಹಣೆಯಿಲ್ಲದೇ ದುಃಸ್ಥಿತಿಗೆ

ಉಡುಪಿ: ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಕೃಷಿ ಮತ್ತು ಮೀನುಗಾರಿಕೆ ತನ್ನದೇ ಕೊಡುಗೆ ನೀಡುತ್ತಾ ಬಂದಿದೆ. ಆದರೆ ಬಂದರು, ಕಿರು ಬಂದರು ಸಹಿತ ಮೀನುಗಾರಿಕೆ ಚಟುವಟಿಕೆಗಳಿಗೆ ಸಂಪರ್ಕಿಸುವ ರಸ್ತೆಗಳು ದುರಸ್ತಿ, ನಿರ್ವಹಣೆಯಿಲ್ಲದೇ ದುಃಸ್ಥಿತಿಗೆ ತಲುಪಿದೆ.

ಕಳೆದ ಮೂರು ವರ್ಷಗಳಿಂದ ಮೀನುಗಾರಿಕೆಗೆ ಸಂಬಂಧಿಸಿದ ಕೊಂಡಿ ರಸ್ತೆ ದುರಸ್ತಿ ಹಾಗೂ ನಿರ್ವಹಣೆಗೆ ಯಾವುದೇ ಅನುದಾನ ಮೀನುಗಾರಿಕೆ ಇಲಾಖೆಯಿಂದ ಒದಗಿಸಿಲ್ಲ.ಹೆಜಮಾಡಿಯಿಂದ ಬೈಂದೂರಿನ ಶಿರೂರು ವರೆಗೂ ಎನ್‌ಎಚ್‌ 66ರಿಂದ ಮೀನುಗಾರಿಕೆ ಪ್ರದೇಶಕ್ಕೆ ಹಲವು ಕೊಂಡಿ ರಸ್ತೆಗಳು ಇವೆ.

ಇದರಲ್ಲಿ ಮಲ್ಪೆ ಹಾಗೂ ಗಂಗೊಳ್ಳಿ ಬಂದರು ಸಂಪರ್ಕಿಸುವ ಮುಖ್ಯ ರಸ್ತೆಯೂ ಇದೆ. ಅದರ ದುರಸ್ತಿ, ಪುನರ್‌ ನಿರ್ಮಾಣ ಇತ್ಯಾದಿ ನಡೆಯುತ್ತಿದೆ. ಆದರೆ, ಉಳಿದ ಭಾಗದ ಮೀನುಗಾರಿಕೆ ರಸ್ತೆಗಳು ದುರಸ್ತಿಯೇ ಕಾಣುತ್ತಿಲ್ಲ.
ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಕೆಲವೊಂದು ಭಾಗದಲ್ಲಿ ರಸ್ತೆ ದುರಸ್ತಿ ನಡೆದಿದೆ. ಆದರೆ, ಮೀನುಗಾರಿಕೆ ಇಲಾಖೆಯಿಂದ ಕಳೆದ ಮೂರು ವರ್ಷದಲ್ಲಿ ಅಧಿಕೃತವಾಗಿ ದುರಸ್ತಿ ಹಾಗೂ ನಿರ್ವಹಣೆಗೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ.

20 ಕೋ.ರೂ. ಅನುದಾನ: 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಂಪರ್ಕ ರಸ್ತೆಗಳ ದುರಸ್ತಿಗೆ ಮೀನುಗಾರಿಕೆ ಇಲಾಖೆಯಿಂದ 20 ಕೋ.ರೂ. ಅನುದಾನ ಮೀಸಲಿಡಲಾಗಿದೆ. ಮೀನುಗಾರಿಕೆ ಕೊಂಡಿ ರಸ್ತೆಗಳ ಪ್ರಸ್ತುತ ಸ್ಥಿತಿ ಆಧರಿಸಿ ದುರಸ್ಥಿ ಕಾಮಗಾರಿ ನಡೆಸಲಾಗುತ್ತದೆ. ಆದರೆ, ಇದು ಉಡುಪಿ ಜಿಲ್ಲೆಗೆ ಮೀಸಲಿಟ್ಟಿರುವ ಅನುದಾನವಲ್ಲ. ರಾಜ್ಯಕ್ಕೆ ಮೀಸಲಿಟ್ಟಿರುವ ಅನುದಾನವಾಗಿದ್ದು, ಉಡುಪಿ ಜಿಲ್ಲೆಗೆ ಎಷ್ಟು ಸಿಗಲಿದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ.

ರಸ್ತೆ ನಿರ್ಮಾಣಕ್ಕೆ ಹಂಚಿಕೆಯಾಗಿರುವ ಅನುದಾನ
ಮೀನುಗಾರಿಕೆ ರಸ್ತೆ ನಿರ್ಮಾಣ ಸಂಬಂಧ 2020-21ನೇ ಸಾಲಿನಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1 ಕಾಮಗಾರಿ 93.45 ಲಕ್ಷ ರೂ.ಗಳಲ್ಲಿ ನಡೆದಿತ್ತು. 2021-22ರಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ 9 ಕಾಮಗಾರಿಗಳು ಸುಮಾರು 32 ಲಕ್ಷ ರೂ.ಗಳಲ್ಲಿ ನಡೆದಿತ್ತು. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 41 ಲಕ್ಷ ರೂ. ವೆಚ್ಚದಲ್ಲಿ 6 ಕಾಮಗಾರಿ, ಕುಂದಾಪುರ ಕ್ಷೇತ್ರದಲ್ಲಿ 5 ಕಾಮಗಾರಿ ಸುಮಾರು 21 ಲಕ್ಷ ರೂ. ವೆಚ್ಚದಲ್ಲಿ ಹಾಗೂ ಇದೇ ವರ್ಷ ಬೈಂದೂರಿನಲ್ಲಿ 10 ಕೋ.ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗಿತ್ತು. ಆದರೆ, ದುರಸ್ತಿ ಹಾಗೂ ನಿರ್ವಹಣೆಗೆ ಅನುದಾನ ಮೀಸಲಿಟ್ಟಿಲ್ಲ.

ಸ್ಥಳೀಯರ ಆಗ್ರಹ: ಮೀನುಗಾರಿಕೆಗೆ ಸಂಬಂಧಿಸಿದ ಕೊಂಡಿ ರಸ್ತೆಯಲ್ಲಿ ನಿರಂತರ ವಾಹನ ಸಂಚಾರ ಇರುವುದರಿಂದ ಹಾಗೂ ಮೀನುಸಾಗಾಟ ಮಾಡುವ ವಾಹನಗಳೇ ಹೆಚ್ಚು ಸಂಚರಿಸುವುದರಿಂದ ಪ್ರತಿ ವರ್ಷವೂ ದುರಸ್ತಿಗೆ ಸರಕಾರ ಅನುದಾನ ಮೀಸಲಿಡಬೇಕು. ಮೀನುಗಾರಿಕೆ ರಸ್ತೆಯಾದರೂ ಸ್ಥಳೀಯರ ಸಂಚಾರಕ್ಕೂ ಅದೇ ರಸ್ತೆ ಬಳಸುವುದರಿಂದ ಹಾನಿಯಾದ ತತ್‌ಕ್ಷಣವೇ ಸರಿಪಡಿಸುವ ವ್ಯವಸ್ಥೆಯನ್ನು ಮೀನುಗಾರಿಕೆ ಇಲಾಖೆ ಮಾಡಬೇಕು. ಲೋಕೋಪಯೋಗಿ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ಸ್ಥಳೀಯ ಆಡಳಿತದ ತಾಂತ್ರಿಕ ಸಮಸ್ಯೆಯಿಂದ ಕೆಲವು ಕಡೆಗಳಲ್ಲಿ ರಸ್ತೆ ಅಭಿವೃದ್ಧಿಯೇ ಆಗಿಲ್ಲ ಎಂಬ ದೂರುಗಳು ಇವೆ.

ಕಳೆದ ಮೂರು ವರ್ಷ ಮೀನುಗಾರಿಕೆ ರಸ್ತೆ ದುರಸ್ತಿ, ನಿರ್ವಹಣೆಗೆ ಅನುದಾನ ಒದಗಿಸಿಲ್ಲ. ಈ ವರ್ಷ 20 ಕೋ.ರೂ. ಮೀನುಗಾರಿಕೆ ಕೊಂಡಿ ರಸ್ತೆ ದುರಸ್ತಿ, ನಿರ್ವಹಣೆಗೆ ಮೀಸಲಿಟ್ಟಿದ್ದೇವೆ. ರಸ್ತೆಗಳ ಪ್ರಸ್ತುತ ಸ್ಥಿತಿಗೆ ಅನುಸಾರವಾಗಿ ಅನುದಾನ ವಿನಿಯೋಗಿಸಲಾಗುವುದು.
– ಮಂಕಾಳ ವೈದ್ಯ, ಮೀನುಗಾರಿಕೆ ಸಚಿವ

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.