ಉಡುಪಿ: 3 ವರ್ಷಗಳ ಬಳಿಕ ಮತ್ತೆ ಪ್ರಥಮ


Team Udayavani, May 12, 2017, 2:21 AM IST

Udupi-Result-11-5.jpg

ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಮೂರು ವರ್ಷಗಳ ಬಳಿಕ ಮತ್ತೆ ಗತವೈಭವದ ಪ್ರಥಮ ಸ್ಥಾನ ಗಳಿಸಿದೆ. ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ  ಶ್ರೇಷ್ಠ ಸ್ಥಾನವನ್ನು ಗಳಿಸಿದ್ದಾರೆ. ಈ ವರ್ಷ (2016-17) ರೆಗ್ಯುಲರ್‌ ವಿದ್ಯಾರ್ಥಿಗಳಲ್ಲಿ ಶೇ. 90.01 ಫ‌ಲಿತಾಂಶ ಜಿಲ್ಲೆಗೆ ದೊರಕಿದೆ. ಆದರೆ ಕಳೆದ ಮೂರು ವರ್ಷಗಳಲ್ಲಿ ಇದಕ್ಕಿಂತ ಹೆಚ್ಚಿನ ಫ‌ಲಿತಾಂಶ ಬಂದಿದ್ದರೂ ದ್ವಿತೀಯ ಸ್ಥಾನಿಯಾಗಿತ್ತು. 2004-5ರಲ್ಲಿ ಶೇ. 75.26 (ದ್ವಿ.), 2005-6ರಲ್ಲಿ ಶೇ.79.96 (ಪ್ರ.), 2006-7ರಲ್ಲಿ ಶೇ.79.65 (ದ್ವಿ), 2007-8ರಲ್ಲಿ ಶೇ. 76.20 (ದ್ವಿ), 2008-9ರಲ್ಲಿ ಶೇ. 80.39 (ದ್ವಿ.), 2009-10ರಲ್ಲಿ ಶೇ. 89.08 (ಪ್ರ.), 2010-11ರಲ್ಲಿ ಶೇ. 87.15 (ಪ್ರ.), 2011-12ರಲ್ಲಿ ಶೇ. 85.32 (ದ್ವಿ.), 2012-13ರಲ್ಲಿ ಶೇ. 92.72 (ಪ್ರ.), 2013-14ರಲ್ಲಿ ಶೇ. 90.93 (ದ್ವಿ.), 2014- 15ರಲ್ಲಿ ಶೇ.92.32 (ದ್ವಿ.), 2015-16ರಲ್ಲಿ ಶೇ. 90.35 (ದ್ವಿ.) ಫ‌ಲಿತಾಂಶ ದೊರಕಿತ್ತು.  ಈ ಫ‌ಲಿತಾಂಶದಲ್ಲಿ ಪುನರಾವರ್ತಿತರು, ಖಾಸಗಿ ಅಭ್ಯರ್ಥಿಗಳ ಫ‌ಲಿತಾಂಶ ಸೇರಿಲ್ಲ.

ಫ‌ಲಿತಾಂಶ ಕುಸಿತ: ರಾಜ್ಯಮಟ್ಟದ ಫ‌ಲಿತಾಂಶದಲ್ಲಿ ಶೇ. 4.82 ಫ‌ಲಿತಾಂಶ ಹೋದ ವರ್ಷಕ್ಕಿಂತ ಇಳಿಕೆಯಾಗಿರುವುದೂ ಜಿಲ್ಲೆಯ ಫ‌ಲಿತಾಂಶದಲ್ಲಿ ಸ್ವಲ್ಪ ಇಳಿಕೆ (ಶೇ. 0.34) ಕಂಡುಬರಲು ಕಾರಣವಾಗಿದೆ ಎನ್ನಬಹುದು.

ವಿದ್ಯಾರ್ಥಿ ಸಂಖ್ಯೆ ಏರಿಕೆ: ಜಿಲ್ಲೆಯಲ್ಲಿ 14,688 ರೆಗ್ಯುಲರ್‌ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆದಿದ್ದಾರೆ. ಪುನರಾವರ್ತಿತರು, ಖಾಸಗಿ ಅಭ್ಯರ್ಥಿಗಳು ಸೇರಿ 16,428 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಳೆದ ವರ್ಷ ರೆಗ್ಯುಲರ್‌ 13,296, ಒಟ್ಟು 14,832 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಅಂಕಿ-ಅಂಶದ ಪ್ರಕಾರ ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ.

13 ವರ್ಷಗಳಲ್ಲಿ ಐದು ವರ್ಷಗಳನ್ನು ಬಿಟ್ಟು ಉಳಿದೆಲ್ಲಾ ವರ್ಷಗಳಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಇದುವರೆಗೆ ಪ್ರಥಮ, ದ್ವಿತೀಯ ಸ್ಥಾನ ಬಿಟ್ಟು ಅದಕ್ಕಿಂತ ಕೆಳಗೆ ಹೋಗದೆ ಇರುವುದೂ ವಿಶೇಷ. ದ್ವಿತೀಯ ಸ್ಥಾನ ಬರುವಾಗಲೂ ದ.ಕ. ಜಿಲ್ಲೆಗಿಂತ ಬಹಳ ಅತ್ಯಲ್ಪ ಅಂತರದಲ್ಲಿ ಕಡಿಮೆ ಫ‌ಲಿತಾಂಶ ಬಂದಿರುವುದು ಗೋಚರವಾಗುತ್ತದೆ. ಅತ್ಯುತ್ತಮ ಫ‌ಲಿತಾಂಶ ದೊರೆಯಬೇಕೆಂಬ ಇರಾದೆಯಿಂದ ಎಲ್ಲ ಕಾಲೇಜುಗಳಿಗೂ ಕಾಲಕಾಲಕ್ಕೆ ಭೇಟಿ ನೀಡಿ ಮಾರ್ಗದರ್ಶನ ನೀಡಿದ್ದೆ. ಶಿಕ್ಷಕರು, ಜನಪ್ರತಿನಿಧಿಗಳು, ಪ್ರಾಂಶುಪಾಲರು, ವಿದ್ಯಾರ್ಥಿಗಳ ಸಹಕಾರದಿಂದ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಯಿತು ಎಂದು ಡಿಡಿಪಿಯು ಆರ್‌.ಬಿ. ನಾಯಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಫ‌ಲಿತಾಂಶ ಸಾಧನೆಗಾಗಿ ಜನಪ್ರತಿನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಗತ ಫ‌ಲಿತಾಂಶ- ಹ್ಯಾಟ್ರಿಕ್‌ ವಿಶೇಷ
ಕಳೆದ 13 ವರ್ಷಗಳಲ್ಲಿ ಉಡುಪಿ ಜಿಲ್ಲೆ ಒಂದೋ ಪ್ರಥಮ, ಇಲ್ಲವೇ ದ್ವಿತೀಯ ಸ್ಥಾನ ಪಡೆದುಕೊಳ್ಳುತ್ತಿತ್ತು. 2005-06, 2009-10, 2010-11, 2012-13ನೇ ಸಾಲಿನಲ್ಲಿ ಪ್ರಥಮ ಸ್ಥಾನವನ್ನು ಪಡೆದ ಉಡುಪಿ ಜಿಲ್ಲೆ ಈಗ ಮತ್ತೆ ಅದೇ ಕೀರ್ತಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. 2006-07ರಿಂದ ಸತತ ಮೂರು ವರ್ಷ, 2013-14ರಿಂದ ಸತತ ಮೂರು ವರ್ಷ ದ್ವಿತೀಯ ಸ್ಥಾನ ಪಡೆದಿರುವುದು ಜಿಲ್ಲೆಯ ಹಿರಿಮೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.