ಉಡುಪಿ: ಹೆಡ್ ಕಾನ್ ಸ್ಟೇಬಲ್ ಆತ್ಮಹತ್ಯೆ ಪ್ರಕರಣ : ಎರಡು ಆಡಿಯೋ ಪೊಲೀಸ್ ವಶಕ್ಕೆ
Team Udayavani, May 2, 2022, 9:39 PM IST
ಉಡುಪಿ : ಕರ್ತವ್ಯದಲ್ಲಿದ್ದಾಗ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ಕಾನ್ಸ್ಟೆಬಲ್ ರಾಜೇಶ್ ಕುಂದರ್ ಅವರು ತಮ್ಮ ಸಹೋದ್ಯೋಗಿಗಳ ದೌರ್ಜನ್ಯದ ಬಗ್ಗೆ ಮೇಲಧಿಕಾರಿಗಳಿಗೆ ನೀಡಿರುವ ದೂರಿನ ಮೊಬೈಲ್ ವಾಯ್ಸ್ ರೆಕಾರ್ಡ್ಗಳು ಬಹಿರಂಗವಾಗಿವೆ.
ಒಂದನೇ ಆಡಿಯೋದಲ್ಲಿರುವಂತೆ ರಾಜೇಶ್ ಕುಂದರ್ ಹಿಜಾಬ್ ಗಲಾಟೆ ಸಂದರ್ಭ ಗಂಗೊಳ್ಳಿ ಠಾಣೆಗೆ ಕ್ಷಿಪ್ರ ದಾಳಿ ಪಡೆ ಕರ್ತವ್ಯಕ್ಕೆ ನಿಯೋಜಿತರಾಗಿದ್ದರು. ಅವರ ಕೈಕೆಳಗೆ ಇಬ್ಬರು ಸಿಬಂದಿಯಾದ ಅಶ್ಪಕ್ ಮತ್ತು ಉಮೇಶ್ ಎಂಬವರು ಹೇಳದೆ ಕೇಳದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಬಗ್ಗೆ ರಾಜೇಶ್ ಕುಂದರ್ ಅವರು ಡಿಎಆರ್ ಹೆಡ್ ಕ್ವಾರ್ಟರ್ ಗೆ ಕರೆ ಮಾಡಿ ದೂರು ನೀಡಿದ್ದರು.
ಎರಡನೇ ಆಡಿಯೋದಲ್ಲಿ ದೂರು ನೀಡಿದ್ದಕ್ಕೆ ಅಶ್ಪಕ್ ಮತ್ತು ಉಮೇಶ್ ಅವರು ಸೇರಿ ಮಲಗಿದ್ದ ತನ್ನ ಮೇಲೆ ಹಲ್ಲೆ ನಡೆಸಿದ್ದು, ಅಲ್ಲಿಂದ ತಪ್ಪಿಸಿಕೊಂಡು ರಸ್ತೆಯಲ್ಲಿ ಬರೀ ಮೈಯಲ್ಲಿ ವಾಹನವಿಲ್ಲದೆ ನಡೆದುಕೊಂಡು ತೆರಳುತ್ತಿರುವುದಾಗಿ ತಿಳಿಸಿದ್ದಾರೆ. ಸೂಕ್ತ ಕ್ರಮ ವಹಿಸಲು ಕಂಟ್ರೋಲ್ ರೂಮ್ಗೆ ಮಾಹಿತಿ ನೀಡಿ ತನಗೆ ಸಹಾಯ ಮಾಡುವಂತೆ ತಿಳಿಸಿದ್ದರು. ಸಹಾಯ ಮಾಡದಿದ್ದರೆ ಬೇರೇನಾದರೂ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.
ಇದನ್ನೂ ಓದಿ : ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಿದ ಬಿಜೆಪಿ ಶಾಸಕ
ಎರಡೂ ಆಡಿಯೋಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಆಡಿಯೋದಲ್ಲಿರುವ ಧ್ವನಿ ರಾಜೇಶ್ ಕುಂದರ್ ಅವರದ್ದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್