ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಭವ್ಯ ಸ್ವಾಗತ
Team Udayavani, Sep 10, 2019, 7:46 PM IST
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಮಂಗಳವಾರ ಉಡುಪಿಗೆ ಆಗಮಿಸಿದಾಗ ಭವ್ಯ ಸ್ವಾಗತ ನೀಡಲಾಯಿತು.
ನಗರದ ಜೋಡುಕಟ್ಟೆಯಿಂದ ಕಾರ್ಯಕರ್ತರ ಸಮಾವೇಶ ಆಯೋಜನೆಗೊಂಡಿದ್ದ ಕಿದಿಯೂರು ಹೊಟೇಲ್ ಸಭಾಂಗಣದವರೆಗೆ ಕಾರ್ಯಕರ್ತರು, ಮುಖಂಡರು ಪಾದಯಾತ್ರೆಯ ಮೂಲಕ ಸಾಗಿಬಂದರು. ಜೋಡುಕಟ್ಟೆಯಲ್ಲಿ ಆರತಿ ಬೆಳಗಿ ಸ್ವಾಗತಿಸಲಾಯಿತು. ಅಲ್ಲಿಂದ ಕೊಂಬು, ನಾಸಿಕ್ ಬ್ಯಾಂಡ್ನ್ನೊಳಗೊಂಡ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ನಳಿನ್ ಜನರಿಗೆ ಕೈ ಮುಗಿಯುತ್ತಾ ಕೈ ಬೀಸುತ್ತಾ ಸಾಗಿಬಂದರು. ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಕೆ. ರಘುಪತಿ ಭಟ್, ಸುನಿಲ್ ಕುಮಾರ್, ಲಾಲಾಜಿ ಆರ್. ಮೆಂಡನ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಮಂಗಳೂರು ವಿಭಾಗ ಉಸ್ತುವಾರಿ ಕೆ. ಉದಯಕುಮಾರ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ