ಉಡುಪಿ ಹೆಲ್ಪ್ ಆ್ಯಪ್ ಬಿಡುಗಡೆ
Team Udayavani, Jun 13, 2019, 6:10 AM IST
ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಸಂಭವಿಸುವ ಅವಘಡಗಳ ತುರ್ತು ಸ್ಪಂದನೆಗಾಗಿ ಸಿದ್ಧಪಡಿಸಲಾದ ಉಡುಪಿ ಹೆಲ್ಪ್ (Udupihelp) ಆ್ಯಪ್ ಅನ್ನು ಉಸ್ತುವಾರಿ ಸಚಿವೆ ಡಾ| ಜಯಮಾಲಾ ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಡುಗಡೆ ಮಾಡಿದರು.
ಜನಸಾಮಾನ್ಯರ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಲು ಜಿಲ್ಲಾಡಳಿತ ಉತ್ತಮ ಕಾರ್ಯ ಕೈಗೊಂಡಿದೆ. ಮಳೆಗಾಲದಲ್ಲಿ ಅವಘಡ ಸಂಭವಿಸಿದಾಗ ತುರ್ತು ಸ್ಪಂದನೆ ಅಗತ್ಯವಿದೆ. ಜನರು ಈ ಆ್ಯಪ್ ಮೂಲಕ ತಮ್ಮ ದೂರುಗಳನ್ನು ನೇರವಾಗಿ ಸ್ಥಳೀಯಾಡಳಿತಕ್ಕೆ ನೀಡಬಹುದಾಗಿದೆ ಎಂದು ಸಚಿವೆ ತಿಳಿಸಿದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಆ್ಯಪ್ನಲ್ಲಿ ದೂರು ದಾಖಲಾದ 6 ಗಂಟೆಯೊಳಗೆ ನಗರಸಭೆ ಅಧಿಕಾರಿಗಳು ಸ್ಪಂದಿಸಲಿದ್ದಾರೆ. ಆ್ಯಪ್ನಲ್ಲಿ ಘಟನೆಗೆ ಸಂಬಂಧಿಸಿದ ಫೋಟೋ ಮತ್ತು ವೀಡಿಯೋ ಅಪ್ಲೋಡ್ ಮಾಡಬಹುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಸಾರ್ವಜನಿಕರು ಮೊಬೈಲ್ ಗೂಗಲ್ ಪ್ಲೇ ಸ್ಟೋರ್ನಿಂದ ಆ್ಯಪ್ ಡೌನ್ಲೋಡ್ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ