ಸಕಾರಾತ್ಮಕ ಮನೋಭಾವ ಬೇಕು; ಹಿಂದೂ ಸಮಾಜೋತ್ಸವದಲ್ಲಿ ಡಾ:ಹೆಗ್ಗಡೆ
Team Udayavani, Nov 26, 2017, 5:42 PM IST
ಉಡುಪಿ:ನಮ್ಮಲ್ಲಿ ಸಕಾರಾತ್ಮಕವಾದ ಚಿಂತನೆ ಬೆಳೆಸಿಕೊಳ್ಳಬೇಕು. ಯಾವುದೂ ನೆರವೇರಲ್ಲ ಎಂಬ ಭಾವನೆ ಬೇಡ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದಾಗಲಿ, ಗೋರಕ್ಷಣೆಯ ಬಗ್ಗೆಯಾಗಲಿ ಎಲ್ಲದರ ಬಗ್ಗೆಯೂ ಸಕಾರಾತ್ಮಕ ಚಿಂತನೆ ಇರಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಉಡುಪಿಯ ಎಂಜಿಎಂ ಮೈದಾನದಲ್ಲಿ ಧರ್ಮ ಸಂಸದ್ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ಮಾತನಾಡಿದರು.
ವೃಕ್ಷದ ಬೇರುಗಳಾಗಿ ನಾವು ಹಿಂದುತ್ವವನ್ನು ಗಟ್ಟಿ ಮಾಡಬೇಕು. ನಾವು ನಮ್ಮತನ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರು ದೇಶಪ್ರೇಮ, ಗೋರಕ್ಷಣೆಯ ಪ್ರೇಮ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಧರ್ಮಸ್ಥಳದ ವತಿಯಿಂದ 250ಕ್ಕೂ ಹೆಚ್ಚು ದೇವಾಲಯಗಳ ಜೀರ್ಣೋದ್ಧಾರ ಮಾಡಲಾಗಿದೆ. ದೇವಾಲಯಗಳ ಮೇಲೆ ಸರ್ಕಾರದ ಹಸ್ತಕ್ಷೇಪದ ಬಗ್ಗೆ ಹೆಗ್ಗಡೆಯವರು ಬೇಸರ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಪೇಜಾವರಶ್ರೀ, ವಿಶ್ವಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯದರ್ಶಿ ತೊಗಾಡಿಯಾ ಸೇರಿದಂತೆ ಹಲವು ಪ್ರಮುಖ ಸ್ವಾಮೀಜಿಗಳು ಉಪಸ್ಥಿತರಿದ್ದರು.
ಮಧ್ಯಾಹ್ನ ಜೋಡುಕಟ್ಟೆಯಿಂದ ಎಂಜಿಎಂ ಕಾಲೇಜು ಮೈದಾನದವರೆಗೆ (ಸುಮಾರು 5ಕಿ.ಮೀವರೆಗೆ) ಬೃಹತ್ ಶೋಭಾಯಾತ್ರೆ ನಡೆಯಿತು. ಸಾವಿರಾರು ಮಂದಿ ಕಾರ್ಯಕರ್ತರು, ಸಾಧು ಸಂತರು ಭಾಗವಹಿಸಿದ್ದರು.
ಚಿತ್ರಗಳು:ಶ್ರೀರಾಮ್, ಲಕ್ಷ್ಮಿ ಮಚ್ಚಿನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್