ಉಡುಪಿ: ವಿದೇಶದಿಂದ ಬಂದವರ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯ
Team Udayavani, Apr 7, 2020, 5:35 AM IST
ಉಡುಪಿ: ವಿದೇಶದಿಂದ ಬಂದ ಎಲ್ಲರ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲೆ ಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ವಿದೇಶಗಳಿಂದ ಬಂದಿದ್ದರು. ಅವರೆಲ್ಲರ ಕ್ವಾರಂಟೈನ್ ಅವಧಿ ಮುಗಿದ ಕಾರಣ ವಿದೇಶಗಳಿಂದ ಬಂದವರಿಂದ ನಮ್ಮ ಜಿಲ್ಲೆ ಗೆ ಕೋವಿಡ್ 19 ಭಯ ಸದ್ಯಕ್ಕಿಲ್ಲ. ಪಾಸಿಟಿವ್ ಬಂದ ಮೂವರ ನಿಕಟವರ್ತಿಗಳು ಐಸೊಲೇಶನ್ ವಾರ್ಡ್ನಲ್ಲಿದ್ದಾ ರೆ. ಸದ್ಯ ಯಾರಲ್ಲೂ ರೋಗ ಲಕ್ಷಣಗಳು ಕಂಡುಬಂದಿಲ್ಲ. ಪ್ರಾಥಮಿಕ ಸಂಪರ್ಕ ಇದ್ದ ವ್ಯಕ್ತಿಗಳ ವರದಿ ನೆಗೆಟಿವ್ ಬಂದಿದೆ. ಸಾರ್ವಜನಿಕರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದರು.
ಪಾಸಿಟಿವ್ ಬಂದ ಕಾರ್ಕಳದ ಮಹಿಳೆಯ ಜತೆ ಜಿಲ್ಲೆ ಯ 33 ಮಂದಿ ಪ್ರಯಾಣ ಮಾಡಿದ್ದರು. ಅವರೆಲ್ಲರ ಆರೋಗ್ಯ ತಪಾಸಣೆ ಮಾಡಿದ್ದೇವೆ. ಯಾರಿಗೂ ತೊಂದರೆ ಇಲ್ಲ. ದಿಲ್ಲಿ ಸಂಪರ್ಕದಲ್ಲಿದ್ದ ಎಲ್ಲಾ 16 ಮಂದಿ ಆರೋಗ್ಯ ತಪಾಸಣೆ ಮಾಡಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ. ಅವರು ಹೋಂ ಕ್ವಾರಂಟೈನ್ನಲ್ಲಿದ್ದಾ ರೆ ಎಂದರು.
ಅನಗತ್ಯ ತಿರುಗಿದರೆ ವಾಹನ ಜಪ್ತಿ
ಲಾಕ್ಡೌನ್ ಅವಧಿ ಮುಗಿಯುವವರೆಗೆ ಶಿಸ್ತು, ಸಂಯಮ ಪಾಲಿಸಬೇಕು. ಬೆಳಗ್ಗೆ 7ರಿಂದ 11.30ರ ವರೆಗೆ ಅಗತ್ಯ ವಸ್ತು ಖರೀದಿಗೆ ಮಾತ್ರ ಅವಕಾಶವಿದೆ. ಕೆಲಸವಿಲ್ಲದೆ ತಿರುಗುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾರೂ ಅವಕಾಶದ ದುರುಪ ಯೋಗ ಮಾಡಬಾರದು. ಕೆಲಸವಿಲ್ಲದೆ ಓಡಾಡುತ್ತಿದ್ದರೆ ವಾಹನ ಜಪ್ತಿ ಮಾಡುತ್ತೇವೆ ಎಂದರು.
ದಾನಿಗಳ ನೆರವು
ಲಾಕ್ಡೌನ್ ಅವಧಿಯಲ್ಲಿ ಸಾಕಷ್ಟು ದಾನಿಗಳು ನೆರವಿಗೆ ಧಾವಿಸಿದ್ದಾ ರೆ. ಊಟೋಪಚಾರ ಮತ್ತು ದಿನಸಿಯನ್ನು ದಾನಿಗಳಿಂದ ನಿರ್ವಹಿಸಲಾಗಿದೆ. ಈವರೆಗೆ ಸರಕಾರದ ಯಾವುದೇ ಅನುದಾನ ಬಳಸಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್