![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Udupi ಮನೆ ಕಳವು: ತನಿಖೆಗೆ ನಾಲ್ಕು ತಂಡ ರಚನೆ
Team Udayavani, Dec 23, 2023, 1:32 AM IST
![udUdupi ಮನೆ ಕಳವು: ತನಿಖೆಗೆ ನಾಲ್ಕು ತಂಡ ರಚನೆ](https://www.udayavani.com/wp-content/uploads/2023/12/ud-5-620x388.jpg)
ಉಡುಪಿ: ಉಡುಪಿಯ ಪುತ್ತೂರಿನ ಮನೆಯಲ್ಲಿ ಕಳ್ಳತನ ಹಾಗೂ ಆದಿಉಡುಪಿಯ ಎಸ್ಬಿಐ ಎಟಿಎಂನಲ್ಲಿ ಕಳವಿಗೆ ಯತ್ನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಈಗಾಗಲೇ 4 ತಂಡಗಳನ್ನು ರಚನೆ ಮಾಡಲಾಗಿದ್ದು, ವಿವಿಧೆಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪುತ್ತೂರಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು 2,50,000 ರೂ.ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದರು.
ಕಳ್ಳತನ ನಡೆದ ಮನೆಯಲ್ಲಿ ಲಭಿಸಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಬನಿಯನ್ ಧರಿಸಿ, ಚಪ್ಪಲಿಗಳನ್ನು ಸೊಂಟಕ್ಕೆ ಸಿಲುಕಿಸಿಕೊಂಡು ಕಳ್ಳತನ ನಡೆಸುತ್ತಿರುವ ದೃಶ್ಯಾವಳಿಗಳು ಪೊಲೀಸರಿಗೆ ಲಭಿಸಿದೆ. ಇದೇ ಮಾದರಿಯ ಕಳ್ಳತನಗಳು ಈ ಹಿಂದೆ ಬೆಂಗಳೂರು ಹಾಗೂ ಮಂಗಳೂರಿನ ಉರ್ವದಲ್ಲಿ ನಡೆದಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಪೊಲೀಸರು ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಕಳ್ಳತನ ಮಾಡಿರುವವರು ಯಾರು ಎಂಬ ವಿವರ ಇನ್ನಷ್ಟೆ ತಿಳಿದುಬರಬೇಕಿದೆ ಎಂದು ನಗರ ಠಾಣೆಯ ಇನ್ಸ್ಪೆಕ್ಟರ್ ಮಂಜಪ್ಪ ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ 3ರಿಂದ 4 ಮಂದಿ ಕಳ್ಳತನದಲ್ಲಿ ಭಾಗಿಯಾಗಿರುವ ದೃಶ್ಯಾವಳಿಗಳು ಕಂಡುಬರುತ್ತಿವೆ. ಕೃತ್ಯ ಎಸಗಿದವರು ಮಾಸ್ಕ್ ಧರಿಸಿದ್ದಾರೆ. ಯಾವ ಗ್ಯಾಂಗ್ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇತರ ಕಡೆಗಳಲ್ಲಿಯೂ ಇಂತಹ ಘಟನೆಗಳು ನಡೆದಿದೆಯಾದರೂ ಇದು ಅವರೇ ಮಾಡಿರುವುದೇ ಅಥವಾ ಬೇರೆಯವರು ಮಾಡಿರುವುದೇ ಎಂಬುದನ್ನು ಆರೋಪಿಗಳ ಪತ್ತೆಯ ಬಳಿಕವೇ ತಿಳಿದುಕೊಳ್ಳಲು ಸಾಧ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ.ತಿಳಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.