ಉಡುಪಿ: ಸಿಂಡ್‌ ವಾಹನ ಮೇಳ-2017 ಉದ್ಘಾಟನೆ


Team Udayavani, Sep 24, 2017, 3:47 PM IST

24Maniapl-12.jpg

ಉಡುಪಿ: ಸಿಂಡಿಕೇಟ್‌ ಬ್ಯಾಂಕ್‌ ಉಡುಪಿ ಪ್ರಾದೇಶಿಕ ಕಚೇರಿಯ ಪ್ರಾಯೋಜಕತ್ವದಲ್ಲಿ ಅವರ ಅಧಿಕೃತ ಕಾರು ವಿತರಕರ ಸಹಭಾಗಿತ್ವದಲ್ಲಿ ನವ ರಾತ್ರಿ ಪ್ರಯುಕ್ತ ಉಡುಪಿಯ ಎಂಜಿಎಂ ಗ್ರೌಂಡ್‌ನ‌ಲ್ಲಿ ಆಯೋಜಿಸಿರುವ ‘ಸಿಂಡ್‌ ವಾಹನ ಮೇಳ-2017’ರ ಉದ್ಘಾಟನೆ ಶನಿವಾರ ನಡೆಯಿತು.

ಸಿಂಡಿಕೇಟ್‌ ಬ್ಯಾಂಕಿನ ಗ್ರಾಹಕರಾದ ಬಿಆರ್‌ಕೆ ಆ್ಯಂಡ್‌ ಸನ್ಸ್‌ ಆಡಳಿತ ಪಾಲುದಾರ ಬೋಳ ರಾಮನಾಥ ಕಾಮತ್‌ ಕಾರ್ಕಳ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಹಿಂದೆ ಮನೆಯಲ್ಲೊಂದು ಕಾರಿದ್ದರೆ ಅದು ಅವರ ಪ್ರತಿಷ್ಠೆಯ ಸಂಕೇತವಾಗಿತ್ತು. ಆದರೆ ಇಂದಿನ ಆಧುನಿಕ ಯುಗದಲ್ಲಿ ಆವಶ್ಯಕತೆ ಪೂರೈಸಿಕೊಳ್ಳಲು ಒಂದು ಮನೆಯಲ್ಲಿ ಕನಿಷ್ಠ ಎರಡು – ಮೂರು ಕಾರುಗಳಿದ್ದರೂ ಸಾಕಾಗದು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಾಹನ ಮೇಳವು ಕಾರುಗಳನ್ನು ಖರೀದಿಸುವ ಮುನ್ನ ಸೂಕ್ತ ಮಾಹಿತಿ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಒಂದೇ ಸೂರಿನಡಿ ಮಾಹಿತಿ
ಅಧ್ಯಕ್ಷತೆ ವಹಿಸಿದ್ದ ಸಿಂಡಿಕೇಟ್‌ ಬ್ಯಾಂಕ್‌ ವಲಯ ಕಚೇರಿಯ ಮಹಾ ಪ್ರಬಂಧಕ ಸತೀಶ್‌ ಕಾಮತ್‌ ಮಾತನಾಡಿ, ಗ್ರಾಹಕರಿಗೆ ಸೇವೆಯೊಂದಿಗೆ ಅವರ ಆವಶ್ಯಕತೆಗೆ ಬೇಕಾದ ವಸ್ತು, ವಾಹನಾದಿಗಳ ಖರೀದಿಗೆ ಅನುಕೂಲವಾಗುವಂತಹ ಸಾಲ ಸೌಲಭ್ಯಗಳನ್ನು ಒದಗಿಸುವ ಜವಾಬ್ದಾರಿಯಿಂದ ಮತ್ತು ಬ್ಯಾಂಕಿನ ವ್ಯವಹಾರ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ಜನತೆಗೆ ಒಂದೇ ಸೂರಿನಡಿ ವಿವಿಧ ಕಂಪೆನಿಗಳ ವಾಹನಗಳ ಕುರಿತಾದ ಸ್ಥೂಲ ಮಾಹಿತಿ ಲಭ್ಯವಾಗಲಿದೆ ಎಂದರು.

ಪ್ರಧಾನ ಕಚೇರಿಯ ಮಹಾ ಪ್ರಬಂಧಕ ಮಧು ಪಿ. ಹೆಗ್ಡೆ, ವಲಯ ಕಚೇರಿಯ ಡಿಜಿಎಂ ಬಿ.ಆರ್‌. ಹಿರೇಮಠ ಅವರು ಶುಭ ಹಾರೈಸಿದರು. ಪ್ರಾದೇಶಿಕ ಕಚೇರಿಯ ಉಪ ಮಹಾ ಪ್ರಬಂಧಕ ಎಸ್‌.ಎಸ್‌. ಹೆಗ್ಡೆ ಸ್ವಾಗತಿಸಿದರು. ಸಿಂಡಿಕೇಟ್‌ ಬ್ಯಾಂಕ್‌ ಪ್ರಾದೇಶಿಕ ಕಚೇರಿಯ ಅಧಿಕಾರಿ ರಾಮಚಂದ್ರ ಎನ್‌. ಮಧ್ದೋಡಿ ಕಾರ್ಯಕ್ರಮ ನಿರೂಪಿಸಿದರು. ಪ್ರಾದೇಶಿಕ ಕಚೇರಿಯ ಮುಖ್ಯ ಅಧಿಕಾರಿ ಡೈಸಿ ಎಂ. ಡಿ’ಸೋಜಾ ವಂದಿಸಿದರು.

ಟಾಪ್ ನ್ಯೂಸ್

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.