Udupi; ಜಿಲ್ಲಾ ಕ್ಯಾಟರಿಂಗ್‌ ಮಾಲಕರ ಸಂಘ ಉದ್ಘಾಟನೆ


Team Udayavani, Feb 28, 2024, 12:28 AM IST

Udupi; ಜಿಲ್ಲಾ ಕ್ಯಾಟರಿಂಗ್‌ ಮಾಲಕರ ಸಂಘ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ಕ್ಯಾಟರಿಂಗ್‌ ಮಾಲಕರ ಸಂಘದ ಉದ್ಘಾಟನೆ ಕಾರ್ಯಕ್ರಮ ಮಂಗಳ ವಾರ ಸಂತೆಕಟ್ಟೆ ಲಕ್ಷ್ಮೀನಗರದ ಗ್ರೀನ್‌ ಎಕರ್ಷ್‌ನಲ್ಲಿ ಜರಗಿತು.

ಕೇಮಾರು ಸಾಂದೀಪನೀ ಸಾಧನಾ ಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ, ಉಡುಪಿ ಡಯಾಸಿಸ್‌ನ ವಿಕಾರ್‌ ಜನರಲ್‌ ವಂ| ಫರ್ಡಿನಾಂಡ್‌ ಗೊನ್ಸಾಲ್ವಿಸ್‌ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.

ಈಶವಿಠಲದಾಸ ಶ್ರೀಗಳು ಮಾತನಾಡಿ, ಸಂಘಟನೆಗಳಿಂದ ಪರಿಹಾರ ಸಾಧ್ಯವಿದೆ. ಕಾರ್ಯ ಕ್ರಮಗಳಲ್ಲಿ ಗುಣಮಟ್ಟದ ಆಹಾರ ಒದಗಿಸುವ ಮೂಲಕ ಎಲ್ಲ ಕ್ಯಾಟರಿಂಗ್‌ ಸಂಸ್ಥೆಗಳು ಉತ್ತಮ ಹೆಸರುಗಳಿಸಿ ಅಭಿವೃದ್ಧಿ ಹೊಂದ ಬೇಕು ಎಂದರು. ಮಾಲಕರು, ನೌಕರರ ಮಕ್ಕಳು ಶಿಕ್ಷಣ, ಆರೋಗ್ಯದ ಬಗ್ಗೆ ಮುತುವರ್ಜಿ ವಹಿಸುವಂತೆ ಸಲಹೆ ನೀಡಿದರು.

ವಂ| ಫರ್ಡಿನಾಂಡ್‌ ಗೊನ್‌ಸಾಲ್ವಿಸ್‌ ಮಾತನಾಡಿ, ಜನರ ಹಸಿವು ನೀಗಿಸುವ, ಊಟ ಕೊಡುವ ಪುಣ್ಯದ ಕಾರ್ಯವನ್ನು ಕ್ಯಾಟರಿಂಗ್‌ ಸಂಸ್ಥೆಗಳು ನಿರ್ವಹಿಸುತ್ತಿವೆ. ಎಲ್ಲರೂ ಸಂಘಟಿತರಾಗಿದ್ದರೆ ಸಾಧನೆ ಮಾಡಲು ಸಾಧ್ಯ. ಉತ್ತಮ ಊಟೋಪಚಾರದ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಿ ಎಲ್ಲ ಕ್ಯಾಟರಿಂಗ್‌ ಸಂಸ್ಥೆಗಳು ಜನರ ಪ್ರೀತಿಗೆ ಪಾತ್ರರಾಗಬೇಕು ಎಂದು ಹಾರೈಸಿದರು.

ಸಂಘದ ಪ್ರಮುಖರಾದ, ವಿವಿಧ ಕ್ಯಾಟರಿಂಗ್‌ ಸಂಸ್ಥೆಯ ಮಾಲಕರಾದ ಭರತ್‌ ಶೆಟ್ಟಿ, ಇಗ್ನೇಷಿಯಸ್‌ ಡಿ’ಸೋಜಾ, ರೊನಾಲ್ಡ… ರಾಡ್ರಿಗಸ್‌, ರವೀಂದ್ರ ಶೆಟ್ಟಿ ಶಿರ್ವ, ಅನಿಲ್‌ ಡಿಮೆಲ್ಲೊ, ಅನಿಲ್‌ ಡೆಸಾ, ದಯಾನಂದ್‌, ರಮೇಶ್‌, ಭಾಸ್ಕರ್‌, ಸುಶಾಂತ್‌, ಪ್ರಸಾದ್‌ ಅಂಚನ್‌ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಜೂಲಿ ಯಸ್‌ ಲಿವೀಸ್‌ ದಾನಿಗಳ ಪಟ್ಟಿ ವಾಚಿಸಿ ದರು. ಕಾರ್ಯದರ್ಶಿ ಗಣೇಶ್‌ ಸಾಲ್ಯಾನ್‌ ವಂದಿಸಿದರು. ಗೌರವ ಸಲಹೆಗಾರ ಡೇನಿಷ್‌ ರಾಡ್ರಿಗಸ್‌ ಪ್ರಸ್ತಾವನೆಗೈದು, ಕೋಶಾಧಿಕಾರಿ ದೀಕ್ಷಿತ್‌ ಶೆಟ್ಟಿ ಸ್ವಾಗತಿಸಿ, ಆಲ್ವಿನ್‌ ಅಂದ್ರಾದೆ ನಿರೂಪಿಸಿದರು.

ಸಮಸ್ಯೆಗೆ ಸ್ಪಂದಿಸಲು ಸಿಎಂ ಬಳಿ ನಿಯೋಗ
ದ.ಕ. ಜಿಲ್ಲಾ ಕ್ಯಾಟರಿಂಗ್‌ ಮಾಲಕರ ಸಂಘದ ಅಧ್ಯಕ್ಷ ದೀಪಕ್‌ ಕೋಟ್ಯಾನ್‌ ಮಾತನಾಡಿ, ಈಗಾಗಲೇ ಕ್ಯಾಟರಿಂಗ್‌ ಉದ್ಯಮ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಇದರಲ್ಲಿ ಟ್ರಾನ್ಸ್‌ಪೊàರ್ಟ್‌, ಟ್ಯಾಕ್ಸ್‌ ಪ್ರಮುಖವಾಗಿದೆ. ಕ್ಯಾಟರಿಂಗ್‌ ಉದ್ಯಮಕ್ಕೆ ವರ್ಷಪೂರ್ತಿ ಆದಾಯ ಇರುವುದಿಲ್ಲ. ಈ ನಿಟ್ಟಿನಲ್ಲಿ ಸರಕಾರ ತೆರಿಗೆ ವಿಷಯದಲ್ಲಿ ಕ್ಯಾಟರಿಂಗ್‌ ಉದ್ಯಮಕ್ಕೆ ರಿಯಾಯಿತಿ ನೀಡಬೇಕು. ಈ ನಿಟ್ಟಿನಲ್ಲಿ ಉಡುಪಿ, ದ.ಕ. ಜಿಲ್ಲೆ ಕ್ಯಾಟರಿಂಗ್‌ ಮಾಲಕರ ಸಂಘದ ನಿಯೋಗವು ಮುಖ್ಯಮಂತ್ರಿ ಬಳಿನಿಯೋಗ ತೆರಳಿ ಶೀಘ್ರವಾಗಿ ಮನವಿ ಸಲ್ಲಿಸಬೇಕಿದೆ ಎಂದರು.

ಜಿಲ್ಲಾ ಕ್ಯಾಟರಿಂಗ್‌ ಮಾಲಕರ ಸಂಘದ ಅಧ್ಯಕ್ಷ ನವೀನ್‌ ಅಮೀನ್‌ ಶಂಕರಪುರ ಮಾತನಾಡಿ, ಉತ್ತಮ ಸಂಘಟನೆಯಾಗಿ ಒಗ್ಗಟ್ಟಿನಿಂದ ಇರಬೇಕು. ಮುಂದಿನ ದಿನಗಳಲ್ಲಿ ದರ ಪಟ್ಟಿ ಅನುಷ್ಠಾನಕ್ಕೆ ವ್ಯವಸ್ಥೆ ಆಗಬೇಕಿದೆ. ಕಾನೂನಿನ ತೊಂದರೆಗಳು ಮತ್ತು ಮಾಲಕರು, ನೌಕರರಿಗೆ ಸಂಕಷ್ಟ ಎದುರಾದಾಗ ಎಲ್ಲರೂ ಒಗ್ಗೂಡಿ ಸ್ಪಂದಿಸಲು ಸಂಘದ ಪಾತ್ರ ಮಹತ್ವದ್ದಾಗಿರುತ್ತದೆ ಎಂದರು.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.