Udupi; ಭಾರತ, ಸನಾತನ ಧರ್ಮ ಉಳಿವಿಗಾಗಿ ಬಿಜೆಪಿ ಗೆಲ್ಲಿಸಿ: ಬಸನಗೌಡ ಯತ್ನಾಳ್‌

ಉಡುಪಿ- ಚಿಕ್ಕಮಗಳೂರಿಗೆ ಕೋಟ, ದಕ್ಷಿಣ ಕನ್ನಡಕ್ಕೆ ಚೌಟ ಹಾಗೂ ಕಾಂಗ್ರೆಸ್‌ಗೆ ಗೂಟ

Team Udayavani, Apr 4, 2024, 1:29 AM IST

Udupi;  ಭಾರತ, ಸನಾತನ ಧರ್ಮ ಉಳಿವಿಗಾಗಿ ಬಿಜೆಪಿ ಗೆಲ್ಲಿಸಿ: ಬಸನಗೌಡ ಯತ್ನಾಳ್‌

ಉಡುಪಿ: ಕಾಂಗ್ರೆಸ್‌ ಹಿಂದೂ ವಿರೋಧ ಸಿದ್ಧಾಂತ ಅನುಸರಿಸಿಕೊಂಡು ಬರುತ್ತಿದೆ. ಭಾರತ, ಸನಾತನ ಧರ್ಮದಉಳಿವಿನ ಚುನಾವಣೆ ಇದಾಗಿದೆ. ಉಡುಪಿ-ಚಿಕ್ಕಮಗಳೂರು ಮತ್ತು ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ
ಅಭ್ಯರ್ಥಿಗಳು ಸ್ಪಷ್ಟ ಬಹುಮತದೊಂ ದಿಗೆ ಜಯ ಸಾಧಿಸಲಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕಡಿಯಾಳಿಯಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು.

ಹಿಂದುತ್ವ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ. ಕೇಂದ್ರದ ಕಳೆದ 10 ವರ್ಷದ ಅಭಿವೃದ್ಧಿ ಕಾರ್ಯ ಕೇವಲ ಟ್ರೈಲರ್‌. ಮುಂದಿನ 5 ವರ್ಷ ನಿಜವಾದ ಸಿನೆಮಾ. ಉಡುಪಿ-ಚಿಕ್ಕಮಗಳೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ, ದ.ಕ.ದಲ್ಲಿ ಬೃಜೇಶ್‌ ಚೌಟ್‌ ಜಯಶಾಲಿ ಯಾಗಲಿದ್ದಾರೆ. ಒಟ್ಟಿನಲ್ಲಿ ಉಡುಪಿ- ಚಿಕ್ಕಮಗಳೂರಿಗೆ ಕೋಟ, ದಕ್ಷಿಣ ಕನ್ನಡಕ್ಕೆ ಚೌಟ ಹಾಗೂ ಕಾಂಗ್ರೆಸ್‌ಗೆ ಗೂಟ ಎಂದು ಹೇಳಿದರು.

ಪ್ರಧಾನಿ ಮೋದಿ ಭ್ರಷ್ಟರ ಬಿಡುವುದಿಲ್ಲ. ಈಗ ಕೇಜ್ರಿವಾಲ್‌ ಜೈಲು ಸೇರಿದ್ದಾರೆ. ಮುಂದೆ ಡಿಂಗ್ರಿವಾಲ್‌ ಕೂಡ ಜೈಲಿಗೆ ಹೋಗಲಿದ್ದಾರೆ. ನಿಷ್ಠಾವಂತಕಾರ್ಯಕರ್ತರಿಗೆ ಟಿಕೆಟ್‌ ನೀಡುವುದು ಬಿಜೆಪಿ ಮಾತ್ರ. ಕಾಂಗ್ರೆಸ್‌ನಲ್ಲಿ ಸಚಿವರು ತಮ್ಮ ಸಂಬಂಧಿಕರಿಗೆ ಟಿಕೆಟ್‌ ಕೊಡಿಸಿ, ತಮ್ಮ ಕುರ್ಚಿಯನ್ನು ಭದ್ರ ಮಾಡಿಕೊಂಡಿದ್ದಾರೆ ಎಂದರು.

ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾತನಾಡಿ, ಕೇಂದ್ರ ಸರಕಾರದ ನೀತಿ, ಮೋದಿಯ ವರ ನೇತೃತ್ವ, ರಾಷ್ಟ್ರದ ಬಗ್ಗೆ ಇರುವ ನಮ್ಮನಿಯತ್ತು ಹಾಗೂ ಜನರ ಬಗ್ಗೆ ಇರುವ ನಮ್ಮ ಬದ್ಧತೆಯ ಆಧಾರದಲ್ಲಿ ಚುನಾ ವಣೆ ಎದುರಿಸಲಿದ್ದೇವೆ ಎಂದರು.

ಭವಿಷ್ಯ ಬರೆಯುವ ಚುನಾವಣೆ
ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇದು ಭಾರತದ ಭವಿಷ್ಯ ಬರೆಯುವ ಚುನಾವಣೆ. ದೇಶದ ರಕ್ಷಣೆ, ಸ್ವಾರ್ಥ ರಹಿತ ರಾಜಕಾರಣ, ಭಯೋತ್ಪಾದನೆ ನಿರ್ಮೂಲನೆಗೆ ಮೋದಿ ಮತ್ತೂಮ್ಮೆ ಪ್ರಧಾನಿಯಾಬೇಕು. ಅವರು ರಾಜಕಾರಣವನ್ನು ವೃತ್ತಿಯಾಗಿ ಮಾಡದೇ ವ್ರತವಾಗಿ ಸ್ವೀಕರಿಸಿದ್ದಾರೆ. ಅವರನ್ನು ಇನ್ನೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.

ದ.ಕ. ಬಿಜೆಪಿ ಅಭ್ಯರ್ಥಿ ಬೃಜೇಶ್‌ ಚೌಟ, ಶಾಸಕರಾದ ವಿ. ಸುನಿಲ್‌ ಕುಮಾರ್‌, ಯಶ್‌ಪಾಲ್‌ ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಕಿರಣ್‌ ಕೊಡ್ಗಿ,ಮಾಜಿ ಸಚಿವರಾದ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ, ಆರಗ ಜ್ಞಾನೇಂದ್ರ,
ಕೃಷ್ಣ ಜೆ. ಪಾಲಿಮಾರ್‌, ಪ್ರಮೋದ್‌ ಮಧ್ವರಾಜ, ವಿ.ಪರಿಷತ್‌ ಉಪಸಭಾಪತಿಎಂ.ಕೆ. ಪ್ರಾಣೇಶ್‌, ಸದಸ್ಯ ಭೋಜೇ ಗೌಡ, ಪ್ರತಾಪ್‌ ಸಿಂಹ ನಾಯಕ್‌, ಮಾಜಿಶಾಸಕರಾದ ಜೀವರಾಜ್‌, ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಶೆಟ್ಟಿ, ಜೆಡಿಎಸ್‌ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್‌ ವಿ. ಶೆಟ್ಟಿ, ಪ್ರಮುಖರಾದ ನವೀನ್‌ ಶೆಟ್ಟಿ ಕುತ್ಯಾರು, ರಂಜನ್‌ ಅಜಿತ್‌ ಕುಮಾರ್‌, ಶಿಲ್ಪಾ ಜಿ. ಸುವರ್ಣ, ಕಲ್ಮೂರುಡಪ್ಪ, ಮಣಿರಾಜ್‌ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ಮಟ್ಟಾರು ರತ್ನಾಕರ ಹೆಗ್ಡೆ, ಮನೋಹರ ಕಲ್ಮಾಡಿ ಉಪಸ್ಥಿತರಿದ್ದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ ಪ್ರಸ್ತಾವನೆಗೈದರು. ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಸ್ವಾಗತಿಸಿದರು. ಪ್ರ.ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ ನಿರೂಪಿಸಿ, ರೇಷ್ಮಾ ಉದಯ ಶೆಟ್ಟಿ ವಂದಿಸಿದರು.

ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು
ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಹಾಗೂ ಜೆಡಿಎಸ್‌ನ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು. ಭಾರತ ಮಾತೆ, ಪ್ರಧಾನಿ ಮೋದಿ, ಬಿಜೆಪಿ ಹಾಗೂ ಅಭ್ಯರ್ಥಿ ಪರ ಘೋಷಣೆ ಮುಗಿಲು ಮುಟ್ಟಿತ್ತು. ವೇದಿಕೆಯು ಬಿಜೆಪಿ-ಜೆಡಿಎಸ್‌ ಮುಖಂಡರ ಸಮಾಗಮಕ್ಕೆ ಸಾಕ್ಷಿಯಾಯಿತು.

ಟಾಪ್ ನ್ಯೂಸ್

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.