ಉಡುಪಿ: ಕಳ್ಳರಿಗೆ ‘ಸುಗ್ಗಿ’ಯಾದ ಮಳೆಗಾಲ


Team Udayavani, Jul 23, 2019, 5:08 AM IST

kalla

ಉಡುಪಿ: ನಗರದಲ್ಲಿ ಮತ್ತು ನಗರದ ಆಸುಪಾಸಿನಲ್ಲಿ ಮಳೆಗಾಲ ಕಳ್ಳರಿಗೆ ‘ಸುಗ್ಗಿ’. ಮಳೆ ಬಿರುಸಾಗುತ್ತಿರುವಂತೆ ಕಳ್ಳರ ಹಾವಳಿಯೂ ಹೆಚ್ಚಾಗಿದೆ. ಕಳೆದ 20 ದಿನಗಳ ಅವಧಿಯಲ್ಲಿ ಉಡುಪಿ ಮತ್ತು ಮಣಿಪಾಲ ಠಾಣಾ ವ್ಯಾಪ್ತಿಯ ಆರು ಕಡೆಗಳಲ್ಲಿ ಕಳ್ಳತನ ನಡೆದಿದೆ. ಇದರಲ್ಲಿ ಒಂದು ಕೊಲೆಯೂ ಸೇರಿದೆ.

ಒಂಟಿ ಮಹಿಳೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ ಘಟನೆ ಜು.5ರಂದು ಬೆಳಕಿಗೆ ಬಂದಿತ್ತು. ಈ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಜು.7ರಂದು ಮಣಿಪಾಲ ಕೈಗಾರಿಕಾ ವಲಯದಲ್ಲಿ ಬೈಕ್‌ ಕಳವಾಗಿದೆ. ಇದೇ ದಿನ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿಯೇ ಹೋಂಡಾ ಆ್ಯಕ್ಟಿವಾ ಕಳವಾಗಿತ್ತು. ಜು.12ರಂದು ಇಂದ್ರಾಳಿಯಲ್ಲಿ ಕೊಟ್ಟಿಗೆಗೆ ನುಗ್ಗಿ ದನಗಳನ್ನು ಕಳವು ಮಾಡಲಾಯಿತು. ಜು.16ರಂದು ಇಂದಿರಾನಗರದಲ್ಲಿ ಮನೆ ಮಂದಿ ಇಲ್ಲದ ದಿನ ಚಿನ್ನಾಭರಣ, ನಗದು ಕಳವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮತ್ತೆ ಮುಂದುವರೆದಿದ್ದು ಜು.17ರಂದು ರಾತ್ರಿ ಕರಾವಳಿ ಬೈಪಾಸ್‌ನ ಮನೆಯೊಂದರಿಂದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ. ಮನೆಯವರು ರಾತ್ರಿ 11.30ಕ್ಕೆ ಮಲಗಿ ಬೆಳಗ್ಗೆ 5.30ಕ್ಕೆ ಎದ್ದಿದ್ದರು. ಆದರೆ ಇಷ್ಟರೊಳಗೆ ಕಳವು ನಡೆದಿತ್ತು!

ಮಳೆಯ ಲಾಭ

ಮಳೆ ಬಂದರೆ ಕಳ್ಳರಿಗೆ ವಿವಿಧ ರೀತಿಯಲ್ಲಿ ಅನುಕೂಲ. ಮಳೆ ಸಂದರ್ಭ ಸಾಮಾನ್ಯವಾಗಿ ಜನಸಂಚಾರ ಕಡಿಮೆಯಾಗುವುದು ಕಳ್ಳರಿಗೆ ವರದಾನ. ಸಂಶಯಿತ ವ್ಯಕ್ತಿಗಳನ್ನು ಯಾರೂ ಗುರುತಿಸುವ ಗೋಜಿಗೆ ಹೋಗುವುದಿಲ್ಲ. ಮಳೆ ಬರುತ್ತಿದ್ದರೆ ಅದರ ಸದ್ದಿಗೆ ಕಳ್ಳರು ಮಾಡುವ ಯಾವ ಸದ್ದು ಕೂಡ ಕೇಳಿಸದು. ಪಕ್ಕದಲ್ಲಿ ಮನೆಗಳಿದ್ದರೂ ಅವರು ಮಳೆಯ ಹಿನ್ನೆಲೆಯಲ್ಲಿ ಬಾಗಿಲು ಸರಿದು ನೋಡುವ ಸಾಧ್ಯತೆಗಳು ಕಡಿಮೆ. ಮಳೆಗಾಲಕ್ಕೆ ಹುಲ್ಲು, ಕುರುಚಲು ಗಿಡಗಳು ಬೆಳೆಯುವುದರಿಂದ ಕೆಲವು ದಾರಿಗಳು ಕಳ್ಳರ ಹೆಜ್ಜೆಗೆ ಪೂರಕವಾಗಿರುತ್ತವೆ. ಆಗಾಗ್ಗೆ ವಿದ್ಯುತ್‌ ಕೂಡ ಕೈಕೊಡುವುದರಿಂದ ಕಳ್ಳರ ಕೆಲಸ ಸಲೀಸಾಗುತ್ತದೆ.

ಕಾರ್ಯಾಚರಣೆಯೂ ಸವಾಲು

ಮಳೆ ಬರುತ್ತಿರುವಾಗ ಪೊಲೀಸ್‌ ಕಾರ್ಯಾಚರಣೆಯೂ ಸುಲಭವಲ್ಲ. ಸಾಮಾನ್ಯವಾಗಿ ಬೈಕ್‌ನಲ್ಲೇ ತೆರಳಿ ರಾತ್ರಿ ರೌಂಡ್ಸ್‌ ಮಾಡುವ ಪೊಲೀಸರು ಶಂಕಿತ ವ್ಯಕ್ತಿಗಳನ್ನು ಬೆನ್ನಟ್ಟಿ ಹೋಗುವುದು ಕಷ್ಟಸಾಧ್ಯ. ಜೀಪ್‌ ಮತ್ತಿತರ ವಾಹನಗಳಲ್ಲಿ ಹೋಗಿ ಕಾರ್ಯಾಚರಣೆ ಮಾಡಿದರೂ ರೈನ್‌ ಕೋಟ್ ಧರಿಸಿಕೊಂಡು ಓಡುವುದು ಪೊಲೀಸರಿಗೆ ಇನ್ನೊಂದು ಸವಾಲು.

ಉರಿಯದ ಬೀದಿ ದೀಪಗಳು

ನಗರದ ಹೆಚ್ಚಿನ ಕಡೆಗಳಲ್ಲಿ ಬೀದಿ ದೀಪಗಳು ಸಮರ್ಪಕವಾಗಿಲ್ಲ. ಪೊಲೀಸರು ಟಾರ್ಚ್‌ಲೈಟ್‌ನಲ್ಲೇ ಎಲ್ಲವನ್ನೂ ಮಾಡಬೇಕಾಗಿದೆ. ಬೀದಿ ದೀಪ ಸರಿಯಾಗಿದ್ದರೆ ಸಂಶಯಿತ ವಾಹನ, ಸಂಶಯಿತ ವ್ಯಕ್ತಿಗಳನ್ನು ಗುರುತಿಸಬಹುದು. ಆದರೂ ಪೊಲೀಸ್‌ ತಂಡ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸುತ್ತಿದೆ ಎನ್ನುತ್ತಾರೆ ನಗರದ ಪೊಲೀಸ್‌ ಅಧಿಕಾರಿಗಳು.

ವಿಶೇಷ ನಿಗಾ

ಮಳೆಗಾಲದಲ್ಲಿ ಸಾಮಾನ್ಯವಾಗಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತವೆ. ಇದನ್ನು ನಿಯಂತ್ರಿಸಲು ಇಲಾಖೆ ವಿಶೇಷ ನಿಗಾ ವಹಿಸುತ್ತಿದೆ. ಕೆಲವೊಂದು ಪ್ರಕರಣಗಳಲ್ಲಿ ಬಂಧನವೂ ಆಗಿದೆ. ಸಾರ್ವಜನಿಕರು ಕೂಡ ಹೆಚ್ಚು ಜಾಗರೂಕರಾಗಬೇಕು. ಸಂಶಯಿತ ವ್ಯಕ್ತಿಗಳು, ಕೃತ್ಯಗಳು ಕಂಡು ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಪ್ರಮುಖ ಓಣಿ, ಜಂಕ್ಷನ್‌ಗಳಲ್ಲಿ ಸಾರ್ವಜನಿಕರೇ ಮುಂದೆ ಬಂದು ಸಿಸಿ ಕೆಮರಾಗಳನ್ನು ಅಳವಡಿಸಿದರೆ ಉತ್ತಮ.
– ನಿಶಾ ಜೇಮ್ಸ್‌, ಎಸ್‌ಪಿ ಉಡುಪಿ
ನಿರ್ವಹಣೆ ನಡೆಯುತ್ತಿದೆ

ನಿರಂತರ ಮಳೆಗೆ ಏಕಕಾಲಕ್ಕೆ ದಾರಿದೀಪಗಳು ಕೆಟ್ಟು ಹೋಗುವುದರಿಂದ ಸಮಸ್ಯೆಯಾಗುತ್ತಿದೆ. ಟೆಂಡರ್‌ದಾರರ ಮುಖಾಂತರ ದುರಸ್ತಿ ಮಾಡಲಾಗುತ್ತಿದೆ. ದೂರುಗಳು ಬಂದ ಕೂಡಲೇ ಸ್ಪಂದಿಸಲಾಗುತ್ತಿದೆ.
– ಆನಂದ ಸಿ.ಕಲ್ಲೋಳಿಕರ್‌ ಆಯುಕ್ತರು, ಉಡುಪಿ ನಗರಸಭೆ,
– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.