ಅಶಕ್ತರಿಗೆ ನೆರವಾಗಲಿರುವ ಕಟಪಾಡಿ ರವಿ ಫ್ರೆಂಡ್ಸ್
Team Udayavani, Sep 1, 2018, 2:50 AM IST
ಕಟಪಾಡಿ: ಬಡವರ ಮತ್ತು ಅಂಗವೈಕಲ್ಯದಿಂದ ಬಳಲುತ್ತಿರುವ ಬಡ ಮಕ್ಕಳ ಬಾಳಿಗೆ ಆಶಾ ಕಿರಣ ಮೂಡಿಸುವ ಸಲುವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಮತ್ತು ಫ್ರೆಂಡ್ಸ್ ಕಟಪಾಡಿ ಈ ಬಾರಿ ಅಷ್ಟಮಿಯ ಸೆ. 2 ಮತ್ತು ಸೆ.3ರಂದು ಅಮೇಜಿಂಗ್ ಮಾನ್ಸ್ಟರ್ ವೇಷ ಧರಿಸಿ ದೇಣಿಗೆ ಸಂಗ್ರಹ ಮಾಡಲಿದ್ದಾರೆ.
ವಾರಂಬಳ್ಳಿಯ ಉಪ್ಪಿನಕೋಟೆ ರಿಕ್ಷಾ ಚಾಲಕ ಉಮೇಶ್ ಕುಂದರ್ ಮಗಳಾದ ನಾಲ್ಕು ವರ್ಷ ಪ್ರಾಯದ ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿರುವ ದೀಕ್ಷಾ ಕುಂದರ್, ಕುಂದಾಪುರ ಕೋಡಿಯ ಹಂಝ ಅವರ ಪುತ್ರ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷದ ಝುಲ್ಫಿನ್, ಉಡುಪಿಯ ಜಗದೀಶ್ ಎಂಬವರ ತಲಸೀಮಿಯದಿಂದ ಬಳಲುತ್ತಿರುವ ಪನ್ವಿಕಾ ಎಂಬ 2 ವರ್ಷ 8 ತಿಂಗಳ ಬಾಲೆ, ಕುಂದಾಪುರ ತಾಲೂಕಿನ ಆನಗಳ್ಳಿಯ ರವಿರಾಜ್ ಮಗ ಎರಡೂ ಕಾಲಿನ ಬಲ ಸ್ವಾಧೀನ ಕಳಕೊಂಡಿರುವ 10 ವರ್ಷದ ರಜತ್ ಇಂತಹ 4 ಬಡಕುಟುಂಬಗಳಿಗೆ ಸಹಾಯ ಮಾಡುವ ಉದ್ದೇಶವನ್ನು ತಂಡ ಹೊಂದಿದೆ. ಸಂಗ್ರಹಿತ ಮೊತ್ತವನ್ನು ಸೆ.9ರಂದು ಮಲ್ಪೆ ಕೊಳದ ಹನುಮಾನ್ ವಿಠೊಭ ಭಜನ ಮಂದಿರದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಎಸ್.ಪಿ. ಲಕ್ಷ್ಮಣ ನಿಂಬರಗಿ, ಕೇಮಾರು ಸಾಂದೀಪನಿ ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಸಮಕ್ಷಮದಲ್ಲಿ ಬಡಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ರವಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್