ಸ್ವವಿಕಾಸಕ್ಕಾಗಿ ದೇವರಿಗೆ ವೈಭವ: ಪೇಜಾವರ ಶ್ರೀ

ಶ್ರೀಕೃಷ್ಣ ಮಠದ ಸುವರ್ಣ ಗೋಪುರ ಸಮರ್ಪಣೋತ್ಸವಕ್ಕೆ ಚಾಲನೆ

Team Udayavani, Jun 1, 2019, 9:37 AM IST

udupi

ಉಡುಪಿ: ದೇವರಿಗೆ ಸಂಪತ್ತುಗಳಾವುವೂ ಬೇಡ. ಆತನನ್ನು ನಿತ್ಯತೃಪ್ತ ಎಂದು ಭಕ್ತಪ್ರಹ್ಲಾದನೇ ಪುರಾಣದಲ್ಲಿ ಬಣ್ಣಿಸಿದ್ದಾನೆ. ಆದರೆ ನಾವು, ನಮ್ಮ ಆತ್ಮವಿಕಾಸಕ್ಕಾಗಿ ಭಗವಂತನನ್ನು ವೈಭವದಿಂದ ಪೂಜಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹೇಳಿದರು.

ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶುಕ್ರವಾರ ಸುವರ್ಣ ಗೋಪುರ ಸಮರ್ಪಣೋತ್ಸವದ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದ ಅವರು, ಭಗವಂತ ನಿತ್ಯತೃಪ್ತನಾದ ಕಾರಣ ದೇವರಿಗೆ ನಾವು ಕೊಟ್ಟದ್ದರ ಬಗ್ಗೆ ಅಹಂಭಾವವನ್ನೂ ತಾಳಬಾರದು ಎಂದರು.

ದೇಹವನ್ನು ಅಲಂಕರಿಸಿ ಕನ್ನಡಿಯಲ್ಲಿ ನೋಡಿದರೆ ಅಲಂಕೃತವಾಗಿಯೇ ಕಾಣುತ್ತದೆ. ದೇಹದ ಬದಲು ಕನ್ನಡಿಯನ್ನು ಅಲಂಕರಿಸಿದರೆ ನಿಷ್ಪ್ರಯೋಜಕ. ಭಗವಂತ ಬಿಂಬಸ್ವರೂಪಿಯಾಗಿದ್ದು, ನಾವು ಪ್ರತಿಬಿಂಬಸ್ವರೂಪರು. ಆದ್ದ
ರಿಂದ ಭಗವಂತನನ್ನು ವೈಭವಪೂರ್ಣ ವಾಗಿ ಕಾಣಬೇಕು ಎಂದರು.

ಶ್ರೀಕೃಷ್ಣ ಚಿಣ್ಣ. ಆತನ ಗರ್ಭ ಗುಡಿಗೆ ಚಿನ್ನದ ಗೋಪುರವನ್ನು ನಿರ್ಮಿಸುವುದಕ್ಕೆ ಬಹಳ ಧೈರ್ಯ, ಭಗವತ್ಪ್ರೇಮ ಬೇಕು. ಭಕ್ತರಾದ ನಾವು ಹೃದಯಗರ್ಭದಲ್ಲಿ ದೇವರನ್ನು ಪ್ರಕಟಿಸುತ್ತೇವಾದ ಕಾರಣ ನಾವು ಮಾತಾ ಪಿತೃಗಳಂತೆ. ಇಂತಹ ಗುಣಗಳು ಪಲಿಮಾರು ಶ್ರೀಗಳಲ್ಲಿ ಇರುವುದರಿಂದ ಅವರು ದೊಡ್ಡ ಯೋಜನೆಯನ್ನು ಕೈಗೆತ್ತಿಕೊಂಡು ಸಫ‌ಲವಾಗಿಸಿದ್ದಾರೆ ಎಂದು ಪೇಜಾವರ ಶ್ರೀಗಳು ಬಣ್ಣಿಸಿದರು.

ಸಮಾರಂಭವನ್ನು ಉದ್ಘಾಟಿಸಿದ ಶ್ರೀ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು, ಶ್ರೀಮದಾನಂದತೀರ್ಥ ಭಗವತ್ಪಾದರೇ ಸುವರ್ಣಮಯರು. ಅವರ ಸನ್ನಿಧಾನದಲ್ಲಿರುವ ಶ್ರೀ ಪಲಿಮಾರು ಸ್ವಾಮೀಜಿಯವರು ಶ್ರೀಕೃಷ್ಣನಿಗೆ ಸುವರ್ಣ ಗೋಪುರ ಸಮರ್ಪಿಸುವುದು ಸಮುಚಿತ ವಾದುದು ಎಂದರು.

ಭಗವದ್ಭಕ್ತರ ಸಹಕಾರದಿಂದ ಸುವರ್ಣ ಗೋಪುರದ ಸಮರ್ಪಣೆ ನಡೆಯುತ್ತಿದೆ ಎಂದು ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದರು. ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಶ್ರೀ ಪಲಿಮಾರು ಮಠದ ಶ್ರೀವಿದ್ಯಾ ರಾಜೇಶ್ವರತೀರ್ಥ ಶ್ರೀಪಾದರು ಶುಭಕೋರಿದರು. ವಿದ್ವಾಂಸರಾದ ಸಗ್ರಿ ರಾಘವೇಂದ್ರ ಉಪಾಧ್ಯಾಯ ಸ್ವಾಗತಿಸಿ ಕೊರ್ಲಹಳ್ಳಿ ವೆಂಕಟೇಶಾಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಮೊಮ್ಮಗನ ಉಪಸ್ಥಿತಿ, ಪಿತಾಮಹನ ಸ್ಮರಣೆ
ಉದ್ಘಾಟನಾ ಸಮಾರಂಭಕ್ಕೆ ರಾಮೇಶ್ವರದ ರಾಮನಾಥಪುರ ಮನ್ನಾರ್‌ ಆದಿ ಮಹಾಸಂಸ್ಥಾನದ ಕುಮಾರನ್‌ ಸೇತುಪತಿ ಮಹಾರಾಜರು ಆಗಮಿಸಿದಾಗ, ಅವರ ಅಜ್ಜನ ಸ್ಮರಣೆಯನ್ನು ಪೇಜಾವರ ಶ್ರೀಗಳು ನಡೆಸಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಚಕ್ರವರ್ತಿ ರಾಜಗೋಪಾಲಾಚಾರಿಯವರು ಮದ್ರಾಸ್‌
ಪ್ರಾಂತ್ಯದ ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಕರಾವಳಿ ಪ್ರದೇಶ ಮದ್ರಾಸ್‌ ಪ್ರಾಂತ್ಯಕ್ಕೆ ಒಳಪಟ್ಟಿತ್ತು. ಆಗ ಈಗಿನ ಅರಸರ ಅಜ್ಜ ಷಣ್ಮುಖ ರಾಜೇಶ್ವರ ಸೇತುಪತಿಯವರು ರಾಜಗೋಪಾಲಾಚಾರಿಯವರ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಹೀಗಾಗಿ ಅವರ ಸೇವೆ ಈ ಪ್ರದೇಶಕ್ಕೂ ಸಂದಿತ್ತು. ರಾಮಸೇತುವಿನಿಂದಾಗಿ ಸೇತುಪತಿ ಎಂದು ಹೆಸರು ಬಂದಿದೆ. ಯಾರು ಏನೇ ಮಾಡಿದರೂ ರಾಮಸೇತುವನ್ನು ಕೆಡವಲಾಗಲಿಲ್ಲ ಎಂದು ಪೇಜಾವರ ಶ್ರೀಗಳು ಬೆಟ್ಟು ಮಾಡಿದರು. ಕುಮಾರನ್‌ ಸೇತುಪತಿಯವರು ರಾಮೇಶ್ವರದ ಕೋಟಿತೀರ್ಥ ಮತ್ತು ರಾಮೇಶ್ವರದ ಶಂಖವನ್ನು ಸ್ವಾಮೀಜಿಯವರಿಗೆ ಸಮರ್ಪಿಸಿದರು.

ಟಾಪ್ ನ್ಯೂಸ್

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.