Udupi; ನ್ಯಾಯವಾದಿಗಳು ಒತ್ತಡ ಮುಕ್ತರಾಗಿ ಕೆಲಸ ನಿರ್ವಹಿಸಿ

ರಾಜ್ಯ ಮಟ್ಟದ "ಕಲಾ ಸಂಭ್ರಮ' ಉದ್ಘಾಟಿಸಿ ನ್ಯಾ| ಪಿ.ಎಸ್‌. ದಿನೇಶ್‌ ಕುಮಾರ್‌

Team Udayavani, Feb 11, 2024, 12:11 AM IST

Udupi; ನ್ಯಾಯವಾದಿಗಳು ಒತ್ತಡ ಮುಕ್ತರಾಗಿ ಕೆಲಸ ನಿರ್ವಹಿಸಿ

ಉಡುಪಿ: ನ್ಯಾಯವಾದಿಗಳು ಬಹಳಷ್ಟು ಒತ್ತಡ ದಲ್ಲಿರುತ್ತಾರೆ. ಕ್ರೀಡೆ, ಸಾಂಸ್ಕೃತಿಕ ಸಹಿತ ವಿವಿಧ
ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಒತ್ತಡ ನಿವಾರಣೆ ಸಾಧ್ಯ. ಒತ್ತಡ ಮುಕ್ತವಾಗಿ ಕಾರ್ಯನಿರ್ವಹಿ ಸಲು ಇಂತಹ ಕಾರ್ಯಕ್ರಮಗಳು ಪೂರಕ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ ಕುಮಾರ್‌ ಹೇಳಿದರು.

ಉಡುಪಿ ವಕೀಲರ ಸಂಘದ ವತಿ ಯಿಂದ ಕೋರ್ಟ್‌ ಆವರಣದಲ್ಲಿ ಶನಿವಾರ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ “ಕಲಾ ಸಂಭ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಮಾತನಾಡಿ, ಕಾನೂನು ವೃತ್ತಿಗೆ ಗೌರವ ನೀಡಿ ಸಮಾಜವನ್ನು ಮುಂದುವರಿಸುವ ಜವಾಬ್ದಾರಿ ನ್ಯಾಯವಾದಿಗಳ ಮೇಲಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಅಧಿಕಾರವೂ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗಿದೆ. ವಿವಿಧ ಚಟುವಟಿಕೆಗಳ ಮೂಲಕ ರಾಜ್ಯದವಕೀಲರ ಸಂಘಕ್ಕೆ ಉಡುಪಿ ವಕೀಲರ ಸಂಘ ಮಾದರಿಯಾಗಿದೆ ಎಂದರು.

ಕಲಾಪದಲ್ಲಿ ನಾನು ಕೂಡ ನ್ಯಾಯಾಧೀಶನ ಪಾತ್ರ ನಿಭಾಯಿಸುತ್ತೇನೆ.ಡಾಕ್ಟರ್‌, ಎಂಜಿನಿಯರ್‌ ಆಗಬೇಕೆಂದು ಕೊಂಡಿದ್ದ ನಾನು ಅದು ಅಸಾಧ್ಯವೆಂದು ಭಾವಿಸಿ ಕಲಾವಿಭಾಗ ಪಡೆದು ಕಾನೂನುಅಧ್ಯಯನ ಮಾಡಿದೆ. ಬಳಿಕ ಶಾಸಕನಾಗಿ, ಸಚಿವನಾಗಿ, ಸಭಾಧ್ಯಕ್ಷನಾಗಿದ್ದೇನೆ. ಅದೃಷ್ಟ ಚೆನ್ನಾಗಿದ್ದರೆ ಅಂದುಕೊಂಡದ್ದನ್ನು ಸಾಧಿಸಲು ಸಾಧ್ಯ ಎಂದರು.

ಹೈಕೋರ್ಟ್‌ ನ್ಯಾಯಮೂರ್ತಿ ಸಿ.ಎಂ. ಜೋಷಿ ಮಾತನಾಡಿ, ನ್ಯಾಯ ವಾದಿಗಳು ತಮ್ಮ ವೃತ್ತಿ ಜೀವನದಲ್ಲಿ ಸ್ವಂತಿಕೆ ಮತ್ತು ವೈಯಕ್ತಿಕ ಛಾಪಿಗೆ ಆದ್ಯತೆ ನೀಡಬೇಕು. ಹೊಸತನ, ನೈಪುಣ್ಯ ತರಬೇಕು ಎಂದರು.

ಹೈಕೋರ್ಟ್‌ ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅಧ್ಯಕ್ಷತೆ ವಹಿಸಿದ್ದರು. ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಕೆ.ಎಸ್‌. ಭರತ್‌ ಕುಮಾರ್‌, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ ಕುಮಾರ್‌ ಅವರ ಪತ್ನಿ ಜಯಶ್ರೀ ಉಪಸ್ಥಿತರಿದ್ದರು.

ಉಡುಪಿ ವಕೀಲರ ಸಂಘದ ಅಧ್ಯಕ್ಷರೆನೋಲ್ಡ್‌ ಪ್ರವೀಣ್‌ ಕುಮಾರ್‌ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್‌ ಕುಮಾರ್‌ ಮೂಡುಬೆಳ್ಳೆ ಪ್ರಸ್ತಾವನೆಗೈದರು. ಪ್ರ. ಕಾರ್ಯದರ್ಶಿ ರಾಜೇಶ ಎ.ಆರ್‌. ವಂದಿಸಿದರು. ನಿತೇಶ್‌ ಶೆಟ್ಟಿ ಎಕ್ಕಾರು ಹಾಗೂ ಸಹನಾ ಕುಂದರ್‌ ನಿರೂಪಿಸಿದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.