ಅಪರೂಪದ ಅಂಚೆ ಚೀಟಿ ಸಂಗ್ರಹಕಾರ ಲಕ್ಷ್ಮೀನಾರಾಯಣ ನಾಯಕ್‌

ರಾಜ್ಯೋತ್ಸವಕ್ಕೆ ಜಿಲ್ಲಾದ್ಯಂತ 75 ಕಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಿಶೇಷ ಅಂಚೆ ಚೀಟಿ ಪ್ರದರ್ಶನದ ಗುರಿ

Team Udayavani, Nov 1, 2021, 6:48 AM IST

ಅಪರೂಪದ ಅಂಚೆ ಚೀಟಿ ಸಂಗ್ರಹಕಾರ ಲಕ್ಷ್ಮೀನಾರಾಯಣ ನಾಯಕ್‌

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಪರೂಪದ ಅಂಚೆ ಚೀಟಿ ಸಂಗ್ರಹಕಾರ ಲಕ್ಷ್ಮೀನಾರಾಯಣ ನಾಯಕ್‌ ಅವರು ಜಿಲ್ಲಾದ್ಯಂತ 75 ಕಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಿಶೇಷ ಅಂಚೆ ಚೀಟಿ ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ.

ಲಕ್ಷ್ಮೀನಾರಾಯಣ ನಾಯಕ್‌ ಸಂತೆಕಟ್ಟೆ ಕಲ್ಯಾಣಪುರದ ನಿವಾಸಿ. ಪ್ರಸ್ತುತ ಮಣಿಪಾಲದ ಎಂಐಟಿಯಲ್ಲಿ ಸಿಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಲ್ಯಾಣಪುರ ಹಿಂದೂ ಹಿ.ಪ್ರಾ. ಶಾಲೆಯಲ್ಲಿ ಪಾಠ ಕೇಳುವಾಗ ಶಿಕ್ಷಕರ ಪ್ರೇರಣೆಯಿಂದ ಮೊದಲ ಬಾರಿಗೆ ಅಂಚೆ ಚೀಟಿ ಸಂಗ್ರಹಕ್ಕೆ ಕೈ ಹಾಕಿದ ಲಕ್ಷ್ಮೀನಾರಾಯಣ ಅನಂತರ ಹಿಂದಿರುಗಿ ನೋಡಲಿಲ್ಲ. ಅವರ ಆಸಕ್ತಿಗೆ ಬ್ಯಾಂಕ್‌ ಉದ್ಯೋಗಿಯಾಗಿದ್ದ ತಂದೆ ಪ್ರೇರಣೆ ನೀಡುತ್ತಿದ್ದರು.

ವಿಶೇಷ ಸಂಗ್ರಹ
ಲಕ್ಷ್ಮೀನಾರಾಯಣ ಅವರಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಂಬಂಧಿಸಿದ ವಿಶೇಷ ಸಂಗ್ರಹವಿದೆ. ರಾಜ್ಯ ಸರಕಾರ ಇದುವರೆಗೆ ಬಿಡುಗಡೆ ಗೊಳಿಸಿದ ಸಾಧಕರ, ಪ್ರವಾಸಿ ಸ್ಥಳಗಳ, ಶ್ರದ್ಧಾ ಕೇಂದ್ರ, ರಾಜ್ಯದ ನೆಲ ಜಲ, ಸಂಸ್ಕೃತಿಗೆ ಸಂಬಂಧಿಸಿದ 95 ಅಂಚೆ ಚೀಟಿಗಳ ಪೈಕಿ ಲಕ್ಷ್ಮೀನಾರಾಯಣ ನಾಯಕ್‌ ಅವರ ಬಳಿ ಉಡುಪಿಯ ಶಂಕರಪುರ ಮಲ್ಲಿಗೆ, ಕವಿಮುದ್ದಣ ಅಂಚೆ ಚೀಟಿ ಸೇರಿದಂತೆ ಇತರ 87 ಅಂಚೆ ಚೀಟಿಗಳ ಬೃಹತ್‌ ಸಂಗ್ರಹವಿದೆ. ಇದುವರೆಗೆ ಶಾಲಾ ಕಾಲೇಜುಗಳಲ್ಲಿ, ಸಾಹಿತ್ಯ ಸಮ್ಮೇಳನಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರದರ್ಶನ ನೀಡಿದ್ದಾರೆ. ಇದಕ್ಕೆ ಯಾವುದೇ ರೀತಿಯಾದ ಸಂಭಾವನೆ ಹಾಗೂ ಇತರ ವಸ್ತುಗಳ ಬೇಡಿಕೆ ಇಡುವುದಿಲ್ಲ.

ಇದನ್ನೂ ಓದಿ:ಜಮ್ಮು- ಕಾಶ್ಮೀರ: 3 ವಾರದಲ್ಲಿ 25 ಶಂಕಿತರ ಬಂಧನ: ಎನ್‌ಐಎ

28 ಸಾವಿರ ಅಂಚೆ ಚೀಟಿ
ದೇಶದ ಮೂಲೆ ಮೂಲೆಗಳಿಂದ ಸರಕಾರ ವಿಶೇಷ ಸಂದರ್ಭಗಳಲ್ಲಿ ಹೊರತಂದ ನಾಣ್ಯ, ಅಂಚೆ ಚೀಟಿಗಳನ್ನು ಸಂಗ್ರಹಿಸಿದ್ದಾರೆ. ಇದುವರೆ 168 ದೇಶಗಳ 6,000ಕ್ಕೂ ಅಧಿಕ ನಾಣ್ಯ ಹಾಗೂ ನೋಟು, ದೇಶ-ವಿದೇಶಗಳ ಸುಮಾರು 28ಸಾವಿರಕ್ಕೂ ಅಧಿಕ ಅಂಚೆ ಚೀಟಿಗಳ ಸಂಗ್ರಹವಿದೆ.

ಪ್ರೋತ್ಸಾಹದಿಂದ ಉತ್ಸಾಹ
ನಮ್ಮ ಕಾಲದಲ್ಲಿ ಅಂಚೆ ಚೀಟಿ ಸಂಗ್ರಹದಿಂದಲೇ ಮನೋರಂಜನೆ ಸಿಗುತ್ತಿತ್ತು. ಪೋಷಕರು ನೀಡುತ್ತಿದ್ದ ಹಣವನ್ನು ಕ್ರೋಡೀಕರಿಸಿ ಅಂಚೆ ಚೀಟಿ ಖರೀದಿಸುತ್ತಿದ್ದೆ. ಸಾರ್ವಜನಿಕರ ಪ್ರೋತ್ಸಾಹ ನನ್ನ ಹವ್ಯಾಸಕ್ಕೆ ಹೊಸ ಉತ್ಸಾಹ ನೀಡುತ್ತಿದೆ.
– ಲಕ್ಷ್ಮೀನಾರಾಯಣ ನಾಯಕ್‌,
ಅಂಚೆ ಚೀಟಿ ಸಂಗ್ರಹಕಾರ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.