ಮಲ್ಪೆ ಮುಖ್ಯ ರಸ್ತೆ: ಆಯ ತಪ್ಪಿದರೆ ಅಪಾಯ ಖಚಿತ

ದ್ವಿಚಕ್ರ ಸವಾರರಿಗೆ ಮೃತ್ಯುಕೂಪವಾಗಿ ಕಾಡುತ್ತಿದೆ ಕಾಂಕ್ರೀಟ್‌ ರಸ್ತೆಯ ಇಕ್ಕೆಲಗಳು

Team Udayavani, Oct 14, 2019, 5:01 AM IST

1310MLE1A

ಮಲ್ಪೆ: ರಾಷ್ಟ್ರೀಯ ಹೆದ್ದಾರಿ ಆದಿವುಡುಪಿ- ಮಲ್ಪೆ ಮುಖ್ಯರಸ್ತೆಯ ಕಲ್ಮಾಡಿಯಿಂದ ಮಲ್ಪೆ ಬಸ್ಸು ನಿಲ್ದಾಣದ ವರೆಗೆ ಸುಮಾರು ಒಂದೂವರೆ ಕಿ. ಮೀ. ಅಂತರದ ಕಾಂಕ್ರೀಟ್‌ ರಸ್ತೆಯ ಎರಡೂ ಬದಿಯಲ್ಲಿ ಅಲ್ಲಲ್ಲಿ ದೊಡ್ಡ ದೊಡ್ಡ ಹೊಂಡ ಗುಂಡಿಗಳು ನಿರ್ಮಾಣಗೊಂಡು ದ್ವಿಚಕ್ರ ಸವಾರರಿಗೆ ಕಂಟಕಪ್ರಾಯವಾಗಿ ಪರಿಣಮಿಸಿದೆ.

ಪ್ರಮುಖ ಮೀನುಗಾರಿಕೆ ವಾಣಿಜ್ಯ ಬಂದರು, ಪ್ರವಾಸಿ ಕೇಂದ್ರವಾದ ಮಲ್ಪೆ ಬೀಚ್‌, ಸೈಂಟ್‌ ಮೇರೀಸ್‌ ದ್ವೀಪವನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯೂ ಇದಾಗಿರುವುದರಿಂದ ಈ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದೆ.

ಎಲ್ಲಿಲ್ಲಿ ಹೊಂಡಗಳು ಇವೆ ?
ಇಲ್ಲಿನ ಫಿಶರೀಸ್‌ ಶಾಲೆ ಬಳಿಯ ಪೆಟ್ರೋಲ್‌ ಬಂಕಿನಿಂದ ಹಿಡಿದು ಮುಖ್ಯ ಬಸ್ಸು ನಿಲ್ದಾಣದವರೆಗೆ ರಸ್ತೆ ಬದಿಯಲ್ಲಿ ಹೊಂಡಗಳದ್ದೇ ಕಾರುಬಾರು. 200 ಮೀಟರ್‌ ಉದ್ದ ರಸ್ತೆಯ ಎರಡೂ ಬದಿಗಳಲ್ಲಿ ಅಲ್ಲಲ್ಲಿ ಭೀಮ ಗಾತ್ರದ ಹೊಂಡ 50ಕ್ಕೂ ಹೆಚ್ಚು ಇವೆೆ. ಮುಖ್ಯರಸ್ತೆಯ ಪೆಟ್ರೋಲ್‌ ಬಂಕ್‌ ಎದುರು, ಏಳೂರು ಮೊಗವೀರ ಭವನ, ರೋಯಲ್‌ ಬಾರ್‌ ಮುಂಭಾಗ, ಮೂರು ರಸ್ತೆ ಕೂಡುವಲ್ಲಿ, ಕಾರ್ತಿಕ್‌ ಬಿಲ್ಡಿಂಗ್‌ ಬಳಿಯಲ್ಲಿ ಪ್ರಮುಖವಾಗಿ ಎದ್ದು ಕಾಣುತ್ತಿವೆ. ಇಲ್ಲಿನ ದ್ವಿಚಕ್ರ ವಾಹನಗಳು ಬಿಡಿ, ಕಾರುಗಳ ಚಕ್ರವೂ ಹೊಂಡಕ್ಕೆ ಬಿದ್ದರೆ ತಬ್ಬಿಬ್ಟಾಗುವ ಸ್ಥಿತಿ ಇದೆ. ಈ ಅಪಾಯಕಾರಿ ರಸ್ತೆಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಡೆಯುತ್ತಿರುವುದು ಸರ್ವೇ ಸಾಮಾನ್ಯ.

ತೇಪೆಯೂ ನಡೆದಿಲ್ಲ
ರಸ್ತೆಯ ಬದಿಯಲ್ಲಿ ನಿರ್ಮಾಣವಾದ ಹೊಂಡವನ್ನು ಈ ಬಾರಿ ಮಳೆಗಾಲದ ಮೊದಲು ಆಡಳಿತ ಕನಿಷ್ಠ ತೇಪೆ ಮಾಡುವ ಪ್ರಯತ್ನವನ್ನು ನಡೆಸಿಲ್ಲ. ರಸ್ತೆಯ ಬದಿಯ ಹೊಂಡದಲ್ಲಿ ಮಳೆ ನೀರು ನಿಂತು ಹಲವಾರು ಬೈಕ್‌ ಸವಾರರು ರಸ್ತೆಯ ಅಂಚಿಗೆ ಬಂದು ಸ್ಕಿಡ್‌ ಆಗಿ ಬಿದ್ದು ಗಾಯಗೊಂಡ ಅನೇಕ ಘಟನೆಗಳು ನಡೆದಿವೆ.

ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರಕಾರ ಇರುವುದರಿಂದ ಹಲವಾರು ವರ್ಷಗಳಿಂದ ನನೆ ಗುದಿಗೆ ಬಿದ್ದ ಈ ರಸ್ತೆಯನ್ನು ವಿಸ್ತರಣೆಗೊಳಿಸಲು ಈಗ ಸೂಕ್ತ ಕಾಲ. ಜನಪ್ರತಿನಿಧಿಗಳು ಇಚ್ಛಾಶಕ್ತಿಯಿಂದ ಅಭಿವೃದ್ಧಿಪಡಿಸಬೇಕೆಂಬ ಆಗ್ರಹ ನಾಗರಿಕರದ್ದು.

ಸಂಚಾರಕ್ಕೆ ಸಂಚಕಾರ
ಮಲ್ಪೆ ಮುಖ್ಯರಸ್ತೆಯಲ್ಲಿ ಒಂದೆಡೆ ವಾಹನಗಳ ಓಡಾಟ ಹೆಚ್ಚಾಗಿ ಟ್ರಾಫಿಕ್‌ ಜಾಮ್‌ ಸಮಸ್ಯೆ ಒಂದೆಡೆಯಾದರೆ ಮತ್ತೂಂದಡೆ ರಸ್ತೆಯ ಬದಿಯ ದೊಡ್ಡ ಹೊಂಡಗಳಿಂದ ಮುಖ್ಯರಸ್ತೆಯಲ್ಲಿ ಹೋಗುವುದು ಒಂದು ಸಾಹಸವಾಗುತ್ತದೆ. ಸಂಚಾರಕ್ಕೆ ಸಂಚಕಾರವನ್ನು ತರುವ ಹೊಂಡಗಳನ್ನು ಮುಚ್ಚುವ ಕೆಲಸ ಅತೀ ಶೀಘ್ರದಲ್ಲಿ ಆಗಬೇಕಾಗಿದೆ.
-ಪ್ರದೀಪ್‌ ಟಿ. ಸುವರ್ಣ, ದ್ವಿಚಕ್ರ ಸವಾರರು

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.