Udupi: ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ
Team Udayavani, Dec 18, 2023, 11:40 PM IST
ಉಡುಪಿ: ಡಯಾನ ವೃತ್ತದ ಬಳಿಯಿರುವ ಖಾಸಗಿ ವಸತಿಗೃಹದಲ್ಲಿ ಕೊಠಡಿ ಬಾಡಿಗೆ ಪಡೆದಿದ್ದ ಸಿದ್ದಾಪುರದ ರಾಮಕೃಷ್ಣ ಭಟ್ (40) ಅವರು ರವಿವಾರ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ಬಾಧೆಯೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ.
ನಗರ ಪೋಲಿಸ್ ಠಾಣೆಯ ಎಎಸ್ಐ ಅರುಣ್ ಹಂಗಾರಕಟ್ಟೆ, ತನಿಖಾ ಸಹಾಯಕಿ ಸುಷ್ಮಾ ಅವರು ಮಹಜರು ಪ್ರಕ್ರಿಯೆ ನಡೆಸಿದರು.
ಶವವನ್ನು ತೆರವುಗೊಳಿಸಿ ಮಣಿಪಾಲದ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು.