ಉಡುಪಿ ತಾ| ಮಿನಿ ವಿಧಾನಸೌಧ ಉದ್ಘಾಟನೆಗೆ ಸಜ್ಜು

ತಾಲೂಕು ಕಚೇರಿ ಆವರಣದಲ್ಲಿ ನಿರ್ಮಾಣ; 10 ಕೋಟಿ ರೂ. ವೆಚ್ಚದ ಕಾಮಗಾರಿ

Team Udayavani, Jan 6, 2020, 4:03 AM IST

24

ಉಡುಪಿ: ಬನ್ನಂಜೆಯಲ್ಲಿ ಹಳೆ ಡಿಸಿ ಕಚೇರಿ (ಈಗಿನ ತಾಲೂಕು ಕಚೇರಿ) ಆವರಣದಲ್ಲಿ ನಿರ್ಮಾಣಗೊಂಡ “ಮಿನಿ ವಿಧಾನಸೌಧ’ ಲೋಕಾರ್ಪಣೆಗೊಳ್ಳಲು ಕ್ಷಣಗಣನೆ ಪ್ರಾರಂಭವಾಗಿದೆ.

ನೆಲ ಮಹಡಿಯಲ್ಲಿ ತಹಶೀಲ್ದಾರ್‌ ಕಚೇರಿ, ಕೋರ್ಟ್‌ ಹಾಲ್‌, ಗ್ರೇಡ್‌ 2 ತಹಶೀಲ್ದಾರ್‌ ಚೇಂಬರ್‌, ತಹಶೀಲ್ದಾರ್‌ ದಾಖಲೆ ಕೊಠಡಿ, ಸಿಬಂದಿಗಳ ಕಚೇರಿ, ಭೂಮಿ, ಶಾಸಕರ ಕಚೇರಿ, ಮೀಟಿಂಗ್‌ ಹಾಲ್‌, ಆಹಾರ ಮತ್ತು ನಾಗರಿಕ ಪೂರೈಕೆ ಕಚೇರಿ ಇರಲಿದೆ. 1ನೇ ಮಹಡಿಯಲ್ಲಿ ಎಸಿ ಟ್ರಿಬ್ಯುನಲ್‌, ಮುಖ್ಯ ಕಚೇರಿ, ಎಸಿ ಸಿಬಂದಿ ಕಚೇರಿ, ದಾಖಲೆ ಕೊಠಡಿ, ಉಪನೋಂದಣಿ ಅಧಿಕಾರಿ ಕಚೇರಿ, ಚುನಾವಣೆ ಶಾಖೆ ಸಭಾಂಗಣ ಇರಲಿದೆ. 2ನೇ ಮಹಡಿಯಲ್ಲಿ ಎ.ಡಿ.ಎಲ್‌. ಆರ್‌ ಮತ್ತು ಸರ್ವೆಯರ್ ಶಾಖೆ, ತಹಶೀಲ್ದಾರ್‌ ಕಚೇರಿ ರೆಕಾರ್ಡ್‌ ಹಾಗೂ ಸಾಕಷ್ಟು ವಿಶಾಲ ಕಚೇರಿಗಳಿಗೆ ಸ್ಥಳಾವಕಾಶವಿದೆ.

10 ಕೋ.ರೂ. ವೆಚ್ಚದ ಕಾಮಗಾರಿ
ಬನ್ನಂಜೆ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಿಸಲಾಗಿದೆ. ಈ ಹೊಸ ಕಟ್ಟಡವು ಒಟ್ಟು 40,941 ಚದರಡಿ ವಿಸ್ತೀರ್ಣ ಹೊಂದಿದೆ. ತಹಶೀಲ್ದಾರ್‌ ಕೊಠಡಿ ಮತ್ತು ಶಾಸಕರ ಕಚೇರಿಗಳಿಗೆ ಹವಾ ನಿಯಂತ್ರಕವನ್ನು ಅಳವಡಿಸಲು ಅವಕಾಶ ನೀಡಲಾಗಿದೆ.

ಮಿನಿ ವಿಧಾನಸೌಧ-ವ್ಯವಸ್ಥೆಗಳು
ಮಿನಿ ವಿಧಾನ ಸೌಧ ಮೂರು ಮಹ ಡಿಯ ಕಟ್ಟಡವಾಗಿದೆ. ಇಲ್ಲಿ ಲಿಫ್ಟ್ ವ್ಯವಸ್ಥೆ, ಅಂಗವೈಕಲ್ಯ ಇರುವವರ ಅನುಕೂಲಕ್ಕೆ ರ್‍ಯಾಂಪ್‌, ನೆಲ ಮತ್ತು ಮೊದಲ ಮಹಡಿಯಲ್ಲಿ ಶೌಚಗೃಹ, ಅಂಗವಿಕಲರಿಗೆ ಪ್ರತ್ಯೇಕ ಶೌಚಗೃಹವಿದೆ.

ಒ.ಎಚ್‌.ಟಿ. 2500ಲೀ ಸಾಮರ್ಥ್ಯ, ಸಂಪ್‌ ಟ್ಯಾಂಕ್‌, ಟ್ರಾನ್ಸ್‌ಫಾರ್ಮರ್‌, ಡಿಸೇಲ್‌ ಜನರೇಟರ್‌, ಮುಖ್ಯ ದ್ವಾರಕ್ಕೆ ಟೀಕ್‌ ವಯಡ್‌ ಫ್ರೆàಮ್‌ ಮತ್ತು ಶಟ್ಟರ್‌ ಆಳವಡಿಸಲಾಗಿದೆ. ಪೌಡರ್‌ ಕೋಟೆಡ್‌ ಅಲ್ಯುನಿಯಮ್‌ ಕಿಟಿಕಿಗಳು, ಗ್ರಾನೈಟ್‌ ನೆಲ ಹಾಸು ಹಾಕಲಾಗಿದೆ.

ವರ್ಷದ ಬಳಿಕ ಉದ್ಘಾಟನೆ!
ಕರ್ನಾಟಕ ಗೃಹಮಂಡಳಿ ಮೂಲಕ ಈ ಕಟ್ಟಡ ನಿರ್ಮಿಸಲಾಗಿದೆ. ಜ.18, 2017ರಲ್ಲಿ ಕಟ್ಟಡದ ಕಾಮಗಾರಿಗೆ ಸಚಿವರಾಗಿದ್ದ ಪ್ರಮೋದ್‌ ಮಧ್ವರಾಜರು ಶಿಲಾನ್ಯಾಸ ನೆರವೇರಿಸಿದ್ದರು. 2019ರ ಜನವರಿ ತಿಂಗಳಲ್ಲಿ ಕಾಮಗಾರಿ ಶೇ. 90ರಷ್ಟು ಪೂರ್ಣಗೊಂಡಿತ್ತು. ಕಾಮಗಾರಿ ಮುಗಿದ ಒಂದು ವರ್ಷದ ಬಳಿಕ ಮಿನಿ ವಿಧಾನಸೌಧಕ್ಕೆ ಉದ್ಘಾಟನಾ ಭಾಗ್ಯ ದೊರಕಿದೆ. ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರು ಜ. 8ರಂದು ಲೋಕಾರ್ಪಣೆ ಮಾಡಲಿದ್ದಾರೆ.

ಅಂದಾಜು ಪಟ್ಟಿ
ಮಿನಿ ವಿಧಾನಸೌಧ 40,1941 ಚದರಡಿ ವಿಸ್ತೀರ್ಣ
10ಕೋ.ರೂ. ವೆಚ್ಚದ ಕಾಮಗಾರಿ
ಜ.18, 2017ರಲ್ಲಿ ಕಟ್ಟಡಕ್ಕೆ ಶಿಲಾನ್ಯಾಸ
ಕಾಮಗಾರಿ ಮುಗಿದ ವರ್ಷದ ಅನಂತರ ಉದ್ಘಾಟನೆ

ಉತ್ತಮ ಸೇವೆಯ ನಿರೀಕ್ಷೆ
ಮಎಲ್ಲ ಸೇವೆ ಒಂದೇ ಕಡೆ ಸಿಕ್ಕರೆ ಸಾರ್ವಜನಿಕರ ಸಮಯ ಒಳಿತಾಯವಾಗಲಿದೆ. ಹೊಸ ಕಟ್ಟಡಕ್ಕೆ ಕಚೇರಿಗಳು ಸ್ಥಳಾಂತರಗೊಂಡು ಅನಂತರ ಜನರಿಗೆ ಉತ್ತಮ ಸೇವೆ ದೊರಕುವಂತಾಗಲಿ.
-ಉಷಾ, ಉಡುಪಿ, ನಾಗರಿಕರು

ಕಾಮಗಾರಿ ಸಂಪೂರ್ಣ
ಮುಕ್ತಾಯಗೊಂಡಿದೆ. ಒಳಾಂಗಣ ವಿನ್ಯಾಸ ಬಾಕಿ ಇದೆ. ಹಣ ಬಿಡುಗಡೆಯಾದ ತತ್‌ಕ್ಷಣ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ. ಮಿನಿ ವಿಧಾನಸೌಧ ವಿಶಾಲವಾದ ಕಚೇರಿಯಾಗಿದ್ದು, ಇಲ್ಲಿ ಜನರಿಗೆ ಉತ್ತಮ ಸೇವೆ ಸಿಗಲಿದೆ.
-ಪ್ರದೀಪ್‌ ಕುಡೇಕರ್‌, ತಹಶೀಲ್ದಾರ್‌ ಉಡುಪಿ ತಾಲೂಕು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.