ಟ್ಯಾಕ್ಸಿಮೆನ್‌ ಅಸೋಸಿಯೇಷನ್‌ ಬೇಡಿಕೆ ಈಡೇರಿಕೆ

ಉಡುಪಿ ಶಾಸಕ ರಘುಪತಿ ಭಟ್‌ ಭರವಸೆ

Team Udayavani, Sep 24, 2019, 5:20 AM IST

230919Astro04

ಉಡುಪಿ: ಮ್ಯಾಕ್ಸಿಕ್ಯಾಬ್‌ನಲ್ಲಿ ಈಗ ಇರುವ 12+1 ಪರವಾನಿಗೆಯ ಬದಲು ಅಧಿಕೃತವಾಗಿ 19+1 ಸೀಟು ಸಾಮರ್ಥ್ಯಕ್ಕೆ ಪರವಾನಿಗೆ ನೀಡಬೇಕು ಎಂಬ ಬೇಡಿಕೆಯನ್ನು ಈಡೇರಿಸುವ ಕುರಿತು ಸಾರಿಗೆ ಸಚಿವರ ಜತೆ ಚರ್ಚಿಸುವುದಾಗಿ ಶಾಸಕ ಕೆ.ರಘುಪತಿ ಭಟ್‌ ಭರವಸೆ ನೀಡಿದ್ದಾರೆ.

ಅಸೋಸಿಯೇಷನ್‌ ಜಿಲ್ಲಾಧ್ಯಕ್ಷರೂ ಆಗಿರುವ ಭಟ್‌ ಅವರು ಸೋಮವಾರ ಉಡುಪಿಯ ಲಕ್ಷ್ಮೀ ಸಭಾಭವನದಲ್ಲಿ ಜರಗಿದ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್‌ ಮತ್ತು ಮ್ಯಾಕ್ಸಿಕ್ಯಾಬ್‌ ಅಸೋಸಿಯೇಷನ್‌ ತುರ್ತುಸಭೆಯಲ್ಲಿ ಮಾತನಾಡಿದರು. ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್‌ನವರ ಸಮಸ್ಯೆಗಳ ಅರಿವಿದೆ. ಅಸೋಸಿಯೇಷನ್‌ನ ನಿಯೋಗವನ್ನು ಕೂಡಲೇ ಸಾರಿಗೆ ಸಚಿವರ ಬಳಿ ಕರೆದೊಯ್ಯುತ್ತೇನೆ ಎಂದು ಶಾಸಕರು ತಿಳಿಸಿದರು.

ಕಾರ್ಯಾಧ್ಯಕ್ಷ ಪಿ.ಹರಿದಾಸ್‌ ಭಟ್‌ ಅವರು ಮಾತನಾಡಿ, “ಮ್ಯಾಕ್ಸಿ ಕ್ಯಾಬ್‌ನವರಿಗೆ ಪೊಲೀಸರು ಅಲ್ಲಲ್ಲಿ ತೊಂದರೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 25,000 ಮ್ಯಾಕ್ಸಿಕ್ಯಾಬ್‌ಗಳಿವೆ. ಇವುಗಳನ್ನು 19+1 ಮಾಡಿ ಅಧಿಕೃತಗೊಳಿಸುವುದರಿಂದ ಸರಕಾರಕ್ಕೆ ತೆರಿಗೆ ಆದಾಯವೂ ಹೆಚ್ಚಾಗ ಲಿದೆ. ಮ್ಯಾಕ್ಸಿಕ್ಯಾಬ್‌ನವರ ಮೇಲೆ ಅನಗತ್ಯ ಕಿರುಕುಳವೂ ತಪ್ಪುತ್ತದೆ’ ಎಂದರು.

ಪ್ರವಾಸಿತಾಣಗಳು, ಬೇರೆ ಜಿಲ್ಲೆ, ಬೇರೆ ರಾಜ್ಯಗಳಿಗೆ ಹೋದರೆ ಭಾರೀ ತೊಂದರೆ ಎದುರಿಸುವಂತಾಗಿದೆ. ಮಂತ್ರಾಲಯದಲ್ಲಿ ಇತ್ತೀಚೆಗೆ 12 ಮಂದಿ ಇದ್ದ ಮ್ಯಾಕ್ಸಿ ಕ್ಯಾಬ್‌ನವರಿಗೆ 60,000 ರೂ. ದಂಡ ವಿಧಿಸಲಾಗಿದೆ ಎಂದು ಓರ್ವ ಮ್ಯಾಕ್ಸಿ ಕ್ಯಾಬ್‌ ಚಾಲಕರು ಅಲವತ್ತುಕೊಂಡರು. ಇದೇ ರೀತಿ 25,000 ರೂ., 40,000 ರೂ.ಗಳನ್ನು ಕೂಡ ವಸೂಲಿ ಮಾಡಲಾಗಿದೆ ಎಂದು ಅನೇಕ ಮಂದಿ ಚಾಲಕರು ಅಹವಾಲು ಸಲ್ಲಿಸಿದರು.

ಒಗ್ಗಟ್ಟಿನ ಹೋರಾಟ
ಅಸೋಸಿಯೇಷನ್‌ ಪ್ರಧಾನ ಕಾರ್ಯದರ್ಶಿ ರಮೇಶ್‌ ಕೆ.ಕೋಟ್ಯಾನ್‌ ಅವರು ಮಾತನಾಡಿ “ಮ್ಯಾಕ್ಸಿಕ್ಯಾಬ್‌ನವರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಲ್ಲಿ ಸದ್ಯಕ್ಕೆ 19+1 ಸೀಟು ಸಮಾರ್ಥ್ಯದ ವಿಚಾರ ಪ್ರಮುಖವಾಗಿದೆ. ಇದನ್ನು ಸರಕಾರದ ಗಮನಕ್ಕೆ ತರುವುದಕ್ಕಾಗಿ ತುರ್ತು ಸಭೆ ಕರೆದಿದ್ದೇವೆ. ಬೇಡಿಕೆ ಈಡೇರಲು ಒಗ್ಗಟ್ಟಿನ ಹೋರಾಟದ ಅಗತ್ಯವಿದೆ. ಮ್ಯಾಕ್ಸಿ ಕ್ಯಾಬ್‌ ಚಾಲಕರು ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ಸೌಲಭ್ಯ ಗಳನ್ನು ಪಡೆದುಕೊಳ್ಳಬೇಕು ಎಂದರು.

ಕೋಶಾಧಿಕಾರಿ ಪ್ರಕಾಶ್‌ ಅಡಿಗ, ಉಪಾಧ್ಯಕ್ಷರಾದ ಸತೀಶ್‌ ನಾಯ್ಕ ,ರಾಘವೇಂದ್ರ ಸೋಮಯಾಜಿ, ದ.ಕ ಟ್ಯಾಕ್ಸಿ ಯೂನಿಯನ್‌ ಪ್ರಧಾನ ಕಾರ್ಯ ದರ್ಶಿ ಆನಂದ್‌, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗದ ಅಸೋಸಿ ಯೇಷನ್‌ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.