ಉಡುಪಿ ಮೋದಿ, ಗಾಂಧಿಗೆ ಗುಜರಾತ್‌ ಬೇಡಿಕೆ!


Team Udayavani, Dec 5, 2017, 2:58 PM IST

05-28.jpg

ಉಡುಪಿ: ಪ್ರಧಾನಿ ನರೇಂದ್ರ ಮೋದಿಯನ್ನು ಹೋಲುವ ಹಿರಿಯಡಕದ ಸದಾನಂದ ನಾಯಕ್‌, ಮಹಾತ್ಮಾ ಗಾಂಧಿಯವರನ್ನು ಹೋಲುವ ಉಡುಪಿ ಮೂಲದ ಆಗಸ್ಟಿನ್‌ ಅಲ್ಮೇಡಾರಿಗೆ ಈಗ ಗುಜರಾತ್‌ನಲ್ಲಿ ಭಾರೀ ಬೇಡಿಕೆ ಕಂಡುಬಂದಿದೆ. 

ಗುಜರಾತ್‌ನಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರು ಗುಜರಾತ್‌ ಪ್ರಚಾರದಲ್ಲಿದ್ದಾರೆ. ಅವರು ಮುಂಬಯಿಯಿಂದ ರವಿ ವಾರ ಗುಜರಾತ್‌ಗೆ ತಲುಪಿದರು. ಮೊದಲು ಖಾನಾಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸೋಮವಾರ ಅಹಮದಾಬಾದ್‌ನ ಗಾಂಧೀ ಆಶ್ರಮಕ್ಕೆ ಬಂದರು. ಅಲ್ಲಿ ಅವರಿಬ್ಬರ ಸೆಲ್ಫಿಗೂ ಜನ ಮುಗಿ ಬಿದ್ದರು. ಡಿಎಸ್ಪಿಯಂತಹ ದೊಡ್ಡ ದೊಡ್ಡ ವ್ಯಕ್ತಿಗಳೂ ಸೆಲ್ಫಿಗೆ ಮುಗಿ ಬೀಳುತ್ತಿದ್ದಾರೆ. ಇವರಿಬ್ಬರ ಬಳಿ ಆಧುನಿಕ ಸೆಲ್‌ ಫೋನ್‌ ಇಲ್ಲದಿದ್ದರೂ ಅತೀ ಹೆಚ್ಚು ಸೆಲ್ಫಿ ತೆಗೆಸಿಕೊಳ್ಳುವ ಭಾಗ್ಯ ಇವರಿಗೆ ಒದಗಿದೆ. 

ಇವರು ಸ್ವಂತ ಖರ್ಚಿನಿಂದ ಗುಜರಾತ್‌ಗೆ ತೆರಳಿದ್ದಾರೆ. ಅಹಮದಾಬಾದ್‌ನಲ್ಲಿ ಮಾತ್ರ ಅವಿನಾಶ್‌ ಎಂಬ ಬಿಜೆಪಿ ಕಾರ್ಯಕರ್ತರು ಸಹಕಾರ ನೀಡಿದರು. ಇನ್ನು ಮಣಿಪುರ ವಿಧಾನಸಭಾ ಕ್ಷೇತ್ರಕ್ಕೆ ತೆರಳುತ್ತೇವೆ. ಇಲ್ಲಿನ ವಾತಾವರಣ ನೋಡಿದರೆ ಬಿಜೆಪಿ ಗೆಲ್ಲುವುದು ಖಚಿತ. ನಮಗೆ ವಸತಿ, ಊಟಕ್ಕೆ ವ್ಯವಸ್ಥೆ ಸಿಕ್ಕಿದರೆ ಡಿ. 15ರ ಬಳಿಕ ಊರಿಗೆ ಬರುತ್ತೇವೆ ಎನ್ನುತ್ತಾರೆ ಸದಾನಂದ ನಾಯಕ್‌ ಮತ್ತು ಆಗಸ್ಟಿನ್‌ ಅಲ್ಮೇಡಾ ಅವರು. 

ಇತ್ತೀಚೆಗೆ ಇವರಿಬ್ಬರೂ ಉಡುಪಿಯಲ್ಲಿ ಧರ್ಮಸಂಸದ್‌, ಉಜಿರೆಗೆ ಪ್ರಧಾನಿ ಬಂದಾಗ ಜನಾಕರ್ಷಣೆಯ ಕೇಂದ್ರವಾಗಿದ್ದರು. ಇದಕ್ಕೂ ಹಿಂದೆ ಸದಾನಂದ ಅವರು ಬಜಪೆಯಲ್ಲಿ ಟ್ಯಾಬ್ಲೋದಲ್ಲಿ ಭಾಗವಹಿಸಿದ್ದರು. 

ಸದಾನಂದ ನಾಯಕ್‌ ಅವರು ಹಿಂದೆ ಹೊಟೇಲ್‌ನಲ್ಲಿ ಕೆಲಸ ಮಾಡಿದ್ದರು. ಮಣಿಪಾಲ ಕೆಎಂಸಿಯಲ್ಲಿದ್ದರು. ಈಗಷ್ಟೇ ನಿವೃತ್ತಿಯಾಗಿದ್ದಾರೆ. ಇವರಿಗೆ 59 ವರ್ಷ. ಆಗಸ್ಟಿನ್‌ ಅಲ್ಮೇಡಾ ಅವರು ಸಮುದ್ರದಡಿ ವೆಲ್ಡಿಂಗ್‌ ಕೆಲಸ ಮಾಡು ತ್ತಿದ್ದರು. ಇವರು ಹೆಚ್ಚಾಗಿ ಇದ್ದದ್ದು ಮುಂಬಯಿಯಲ್ಲಿ ಹಲವು ವಿದೇಶ ಗಳಲ್ಲಿಯೂ ಕೆಲಸ ಮಾಡಿದ ಅನುಭವ ಇದೆ. ಇವರ ತಾಯಿ ಮನೆ ಮೂಲ್ಕಿ, ತಂದೆ ಮನೆ ತೊಟ್ಟಂ. ಪ್ರಸ್ತುತ ನೆಲೆಸಿರುವುದು ಮುಂಬಯಿ ಅಂಧೇರಿಯಲ್ಲಿ. ಇವರಿಗೆ 71 ವರ್ಷ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.