ಉಡುಪಿ : ಕಲ್ಲಿನ ಕ್ವಾರಿಗೆ ಬಿದ್ದು ತಾಯಿ ಮಗು ದಾರುಣ ಸಾವು
Team Udayavani, Apr 25, 2017, 2:44 PM IST
ಉಡುಪಿ: ಅಲೆವೂರಿನ ದುರ್ಗಾನಗರದಲ್ಲಿ ಬಟ್ಟೆ ಒಗೆಯಲೆಂದು ತೆರಳಿದ್ದ ತಾಯಿ,ಮಗು ಕಲ್ಲಿನ ಕ್ವಾರಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಮೃತರು ಬಾಗಲಕೋಟೆಯ ಹುನಗುಂದ ಮೂಲದ ನೀಲವ್ವ(28)ಮತ್ತು ಪುತ್ರ ಹನುಮಂತ (6) ಎಂದು ತಿಳಿದು ಬಂದಿದೆ. ಹನುಮಂತ ಮೊದಲು ನೀರಿಗೆ ಬಿದ್ದಿದ್ದು ರಕ್ಷಿಸಲು ತೆರಳಿದ್ದ ತಾಯಿಯೂ ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ನೀಲವ್ವ ಪತಿ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದು ಕಳೆದ ಕೆಲ ವರ್ಷಗಳಿಂದ ಅಲೆವೂರಿನಲ್ಲಿ ನೆಲೆಸಿದ್ದರು ಎಂದು ತಿಳಿದು ಬಂದಿದ್ದು, ಇನ್ನಿಬ್ಬರು ಚಿಕ್ಕ ಪ್ರಾಯದ ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.
ಮಣಿಪಾಲ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ