ಡ್ರೈನೇಜ್‌ ಸಮಸ್ಯೆ: ತ್ವರಿತಗತಿ ಪರಿಹಾರಕ್ಕೆ ಸದಸ್ಯರ ಆಗ್ರಹ


Team Udayavani, Feb 27, 2021, 2:40 AM IST

ಡ್ರೈನೇಜ್‌ ಸಮಸ್ಯೆ: ತ್ವರಿತಗತಿ ಪರಿಹಾರಕ್ಕೆ ಸದಸ್ಯರ ಆಗ್ರಹ

ಉಡುಪಿ:  ನಗರಸಭೆ ವ್ಯಾಪ್ತಿಯ ಬಹುತೇಕ ವಾರ್ಡ್‌ಗಳಲ್ಲಿ ಡ್ರೈನೇಜ್‌ ನೀರಿನ ಸಮಸ್ಯೆಯಿದೆ. ಇಂದ್ರಾಳಿಯಲ್ಲಿ ವಸತಿ ಸಂಕೀರ್ಣಗಳ ತ್ಯಾಜ್ಯ ನೀರನ್ನು ಹರಿಯಬಿಡುತ್ತಿರುವುದರಿಂದ ಇಂದ್ರಾಣಿ ನದಿ ನೀರು ಕಲುಷಿತವಾಗುತ್ತಿದೆ. ಯುಜಿಡಿ ಅಸಮರ್ಪಕ ನಿರ್ವಹಣೆಯಿಂದಾಗಿ ನಿಟ್ಟೂರು, ಶಾರದಾ ಹೊಟೇಲ್‌ ಬಳಿ ತ್ಯಾಜ್ಯ ನೀರು ರಸ್ತೆಯಲ್ಲಿಯೇ ಹರಿಯುವಂತಾಗಿದೆ ಇದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ನಗರಸಭೆ ಸದಸ್ಯರು ಆಗ್ರಹಿಸಿದರು.

ನಗರಸಭೆಯ ಸಾಮಾನ್ಯ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌ ಅಧ್ಯಕ್ಷತೆಯಲ್ಲಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ಸದಸ್ಯ ವಿಜಯ ಕೊಡವೂರು ಮಾತನಾಡಿ, ನಗರದ ಡ್ರೈನೇಜ್‌ ಪರಿಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದೆ. ಇದರಲ್ಲಿ ನಗರಸಭೆಯ ಇಚ್ಛಾಶಕ್ತಿಯ ಕೊರತೆಯೂ ಎದ್ದು ಕಾಣುತ್ತಿದೆ. ನವಯುಗ ಸಂಸ್ಥೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಕೆಲಸವಾಗಿಲ್ಲ. ಈ ರೀತಿಯ ನಿರ್ಲಕ್ಷ್ಯತನದಿಂದ ಜನರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ.  ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ಸಾಮಾನ್ಯ ಸಭೆಗೆ ಅದೇ ನೀರಿನಲ್ಲಿ ಸ್ನಾನ ಮಾಡಿ ಹಾಜರಾಗುವುದಾಗಿ ಅವರು ಎಚ್ಚರಿಕೆ ನೀಡಿದರು. ಜನರು ದಂಗೆ ಏಳುವ ಮುನ್ನ ಈ ಸಮಸ್ಯೆಯನ್ನು ನಿವಾರಿಸುವಂತೆ ಒತ್ತಾಯಿಸಿದರು. ಸದಸ್ಯ ಸುಂದರ ಜೆ.ಕಲ್ಮಾಡಿ ಪೂರಕವಾಗಿ ಮಾತನಾಡಿದರು.

ಕರಾವಳಿ ಜಂಕ್ಷನ್‌ ಬಳಿ ಹೆದ್ದಾರಿ ಇಲಾಖೆಯವರ ವೈಫ‌ಲ್ಯದಿಂದಾಗಿ ಡ್ರೈನೇಜ್‌ ನೀರು ಪೋಲಾಗುತ್ತಿದೆ. ಒಂದು ವಾರದೊಳಗೆ ಈ ಸಮಸ್ಯೆಯನ್ನು ಬಗೆಹರಿಸಲು ಯತ್ನಿಸಲಾಗುವುದು ಎಂದು ಅಧ್ಯಕ್ಷರು ಹೇಳಿದರು.

ಮೊದಲು ನೀರಿನ ಸಮಸ್ಯೆ ಪರಿಹರಿಸಿ :

ನಮ್ಮ ವಾರ್ಡ್‌ನಲ್ಲಿ ಈಗಾಗಲೇ ಒಂದು ಬೋರ್‌ವೆಲ್‌ ಇದ್ದು, ನಿರ್ವಹಣೆ ಇಲ್ಲದಂತಾಗಿದೆ. ಈ ನಡುವೆ ಇನ್ನೊಂದು ಬೋರ್‌ವೆಲ್‌ ಮಾಡಲಾಗುತ್ತಿದೆ. ಈ ಬಗ್ಗೆ ಯಾರಿಗೂ ಮಾಹಿತಿ ನೀಡಿಲ್ಲ. ಕಾಮಗಾರಿ ಮಾಡುವ ಸಂದರ್ಭದಲ್ಲಿ ಸ್ಥಳೀಯ ಸದಸ್ಯರ ಗಮನಕ್ಕೆ ತರಬೇಕು ಎಂಂದು ಸದಸ್ಯೆ ಅಮೃತಾ ಕೃಷ್ಣಮೂರ್ತಿ ಆಚಾರ್ಯ ತಿಳಿಸಿದರು. ಪೌರಾಯುಕ್ತ ಡಾ| ಉದಯ ಶೆಟ್ಟಿ, ಭುಜಂಗ ಪಾರ್ಕ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಚಿಟ್ಟೆ ಪಾರ್ಕ್‌ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನೀರಿನ ಆವಶ್ಯಕತೆ ಇದ್ದು, ಅದಕ್ಕಾಗಿ ಬೋರ್‌ವೆಲ್‌ ಕೊರೆಯಲಾಗಿದೆ ಎಂದರು. ಇದಕ್ಕೆ ಪಟ್ಟು ಬಿಡದ ಸದಸ್ಯರು ಮೊದಲು ಸಾರ್ವಜನಿಕರಿಗೆ ನೀರು ಒದಗಿಸಿ. ಮೂಲಸೌಕರ್ಯ ಕಲ್ಪಿಸಲು ಸಹಕಾರ ಮಾಡಿ ಎಂದರು. ವಾರಾಹಿ ನೀರು ಬಂದ ಮೇಲೆ ಸಮಸ್ಯೆ ಬಗೆಹರಿಯಲಿದೆ ಎಂದು ಅಧ್ಯಕ್ಷರು ತಿಳಿಸಿದರು. ಅಲ್ಲಿಯವರೆಗೆ ಜನರು ಏನು ಮಾಡಬೇಕು ಎಂದು ಸದಸ್ಯ ರಮೇಶ್‌ ಕಾಂಚನ್‌ ಪ್ರಶ್ನಿಸಿದರು.

ರಾಜಾಂಗಣದ ಪಾರ್ಕಿಂಗ್‌ ಪ್ರದೇಶದಲ್ಲಿ ನಗರಸಭೆಯ ಅನುಮತಿ ಇಲ್ಲದೆ ಅಂಗಡಿಗಳ ನಿರ್ಮಾಣವಾಗುತ್ತಿದೆ. ಈ ಬಗ್ಗೆ ಮಾಹಿತಿ ಇದೆಯಾ ಎಂದು ಸದಸ್ಯ ರಮೇಶ್‌ ಕಾಂಚನ್‌ ಪ್ರಶ್ನಿಸಿದರು. ಈ ಬಗ್ಗೆ ಸಂಬಂಧಪಟ್ಟವರಿಗೆ ನೋಟಿಸ್‌ ನೀಡಲಾಗಿದೆ ಎಂದು ಅಧ್ಯಕ್ಷರು ತಿಳಿಸಿದರು.

ಬಯಲು ಶೌಚಾಲಯ ಮುಕ್ತಗೊಳಿಸಿ :

ಕಲ್ಮಾಡಿ ಭಾಗದಲ್ಲಿ 149 ಮನೆಗಳಿಗೆ ಪಿಟ್‌ ಇಲ್ಲವಾಗಿದೆ. ಇದನ್ನು ನಗರಸಭೆಯ ವತಿಯಿಂದ ನಿರ್ಮಿಸಬೇಕು. ಪಿಟ್‌ಗಳು ಓವರ್‌ಫ್ಲೋ ಆಗಿ ಬಯಲು ಶೌಚಾಲಯಗಳು ಆರಂಭವಾಗಿವೆ ಎಂದು ಸದಸ್ಯ ಸುಂದರ ಜೆ.ಕಲ್ಮಾಡಿ ತಿಳಿಸಿದರು. ನಮ್ಮ ವಾರ್ಡ್‌ನಲ್ಲಿಯೂ ಇದೇ ರೀತಿಯ ಸಮಸ್ಯೆ ಇದೆ ಎಂದು ಸರಳೇಬೆಟ್ಟು ವಾರ್ಡ್‌ ಸದಸ್ಯ ವಿಜಯಲಕ್ಷ್ಮೀ ಹಾಗೂ ಬನ್ನಂಜೆ ವಾರ್ಡ್‌ ಸದಸ್ಯೆ ಸವಿತಾ ಹರೀಶ್‌ ರಾಂ ಭಂಡಾರಿ ತಿಳಿಸಿದರು.  ಬೀದಿನಾಯಿ ಸಮಸ್ಯೆ ಬಗ್ಗೆ ಸದಸ್ಯ ವಿಜಯ ಕೊಡವೂರು ಪ್ರಸ್ತಾವಿಸಿದರು. ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದರು.

ಗರಿಷ್ಠ ಶುಲ್ಕದಿಂದ ಹೊರೆ :

ಪೌರಾಡಳಿತ 1964ರ ನಿಯಮ ಪ್ರಕಾರ ಉದ್ಯಮ ಪರವಾನಿಗೆ ಶುಲ್ಕ ಗರಿಷ್ಠ 500 ರೂ., ವಿಧಿಸಲು ಅವಕಾಶವಿದೆ. ಆದರೆ ಪ್ರಸ್ತುತ ಸಾವಿರಗಟ್ಟಲೆ ವಸೂಲಿ ಮಾಡಲಾಗುತ್ತಿದೆ. ಇದರಿಂದ ವ್ಯಾಪಾರಿಗಳಿಗೆ ಹೊರೆಯಾಗಿದೆ ಎಂದು ಸದಸ್ಯ ಕೃಷ್ಣರಾವ್‌ ಕೊಡಂಚ ಅಭಿಪ್ರಾಯಪಟ್ಟರು. ನಗರಸಭೆ ವ್ಯಾಪ್ತಿ 2014ರ ಕೌನ್ಸಿಲ್‌ ನಿರ್ಣಯ ಪ್ರಕಾರ ಉದ್ಯಮ ಪರವಾನಿಗೆ ಶುಲ್ಕ ಪರಿಷ್ಕರಿಸಿ ಸರಕಾರಕ್ಕೆ ಕಳುಹಿಸಲಾಗಿದೆ. ಅಂದಿನಿಂದ ನಗರಸಭೆಯಿಂದಲೇ ಉದ್ಯಮ ಪರವಾನಿಗೆ ಶುಲ್ಕ ಪರಿಷ್ಕರಿಸಿ ಶುಲ್ಕ ವಸೂಲಿ ಮಾಡುತ್ತಿದೆ. ಈ ಹಿಂದಿಗಿಂತ ನಗರ ದೊಡ್ಡದಾಗಿ ಬೆಳೆದಿದ್ದು ದೊಡ್ಡ ಕಂಪೆನಿಗಳು, ಜುವೆಲರಿ ಮಳಿಗೆಗಳು ನಗರದಲ್ಲಿ ಕಾರ್ಯಾಚರಿಸುತ್ತಿದೆ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡರು. ಸರಕಾರದಿಂದ ಗೆಜೆಟ್‌ ನೋಟಿಫಿಕೇಶನ್‌ ಆಗದೆ ಹೇಗೆ ನಗರಸಭೆ ಹೇಗೆ ಬದಲಿಸಿ ಶುಲ್ಕ ವಸೂಲಿ ಮಾಡುತ್ತಿದೆ ಎಂದು ಸದಸ್ಯರು ಪ್ರಶ್ನಿಸಿದರು. ಸರಕಾರದ ನೋಟಿಫಿಕೇಶನ್‌ ಬಳಿಕ ಉದ್ಯಮ ಪರವಾನಿಗೆ ಶುಲ್ಕ ಪರಿಷ್ಕರಣೆ ಇಳಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.  ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಸಾಲ್ಯಾನ್‌ ಉಪಸ್ಥಿತರಿದ್ದರು.

ಪ್ರತಿಧ್ವನಿಸಿದ ಉದಯವಾಣಿ ಸರಣಿ ವರದಿ :

ವಾಣಿಜ್ಯ ಕಟ್ಟಡಕ್ಕೆ ನಗರಸಭೆ ಅನುಮತಿ ನೀಡುತ್ತಾರೆ. ಅನಂತರ ಅವರು ನಿಗದಿಪಡಿಸಿದ ಪಾರ್ಕಿಂಗ್‌ ಸ್ಥಳದಲ್ಲಿಯೂ ಮಾಲಕರು ಅಂಗಡಿಗಳನ್ನು ನಿರ್ಮಿಸುತ್ತಾರೆ. ಈ ಬಗ್ಗೆ ಉದಯವಾಣಿ ಪತ್ರಿಕೆಯಲ್ಲಿ ನಿರಂತರವಾಗಿ ಸರಣಿ ವರದಿ ಪ್ರಕಟಗೊಂಡಿತ್ತು. ಫ‌ುಟ್‌ಪಾತ್‌ಗಳ ಅತಿಕ್ರಮಣ, ಸಿಟಿಬಸ್‌ ನಿಲ್ದಾಣ ಸಹಿತ ನಗರದ ಹಲವೆಡೆ ಫ‌ುಟ್‌ಪಾತ್‌ಗಳೇ ಇಲ್ಲದಂತಾಗಿದೆ. ಪಾರ್ಕಿಂಗ್‌ ಪ್ರದೇಶದಲ್ಲಿನ ಜಾಗಗಳಲ್ಲಿ ಪ್ಲಾಸ್ಟಿಕ್‌, ಬಟ್ಟೆ ಅಂಗಡಿಗಳನ್ನು ನಿರ್ಮಿಸಲಾಗಿದೆ. ಎಪ್ರಿಲ್‌ 1 ರ ಅನಂತರ ನಗರಸಭೆಯ ವತಿಯಿಂದ ಇದನ್ನು ತೆರವುಗೊಳಿಸುವ ಕಾರ್ಯ ಮಾಡಬೇಕು. ಇದ್ದ ರಸ್ತೆ ಹಾಗೂ ಫ‌ುಟ್‌ಪಾತ್‌ಗಳನ್ನು ಉಳಿಸಿಕೊಂಡು ಪಾರ್ಕಿಂಗ್‌ ಸಮಸ್ಯೆಯನ್ನು ನಿವಾರಿಸಬೇಕು ಎಂದು ಗಿರೀಶ್‌ ಎಂ.ಅಂಚನ್‌ ತಿಳಿಸಿದರು.

ವೆಚ್ಚದ ಬಗ್ಗೆ ಆಕ್ಷೇಪ  :

ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ 2.11 ಲ. ರೂ.ವೆಚ್ಚವಾಗಿದೆ. ಜಿಲ್ಲಾಡಳಿತದ ಕಾರ್ಯಕ್ರಮಕ್ಕೆ ನಗರಭೆಯವರೇಕೆ ಲಕ್ಷಾಂತರ ರೂ. ವಿನಿಯೋಗಿಸಬೇಕು ಎಂದು ಸ್ಥಾಯೀ ಸಮಿತಿ ಅಧ್ಯಕ್ಷ ಗಿರೀಶ್‌ ಎಂ.ಅಂಚನ್‌ ಪ್ರಶ್ನಿಸಿದರು. ನಿರ್ದಿಷ್ಟ ಮೊತ್ತ ನೀಡಬೇಕೆಂದು ಸಲಹೆ ನೀಡಿದರು. ಇತರ ಸದಸ್ಯರೂ ಸಮ್ಮತಿಸಿದರು.

ಬನ್ನಂಜೆ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ ಡಾ|ಆಚಾರ್ಯ ಹೆಸರು :

ಬನ್ನಂಜೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ ಡಾ|ವಿ.ಎಸ್‌. ಆಚಾರ್ಯ ಅವರ ಹೆಸರು ಇಡುವಂತೆ ನಗರಸಭೆ ನಿರ್ಣಯ ಸ್ವೀಕರಿಸಿತು. ನಿರ್ಣಯವನ್ನು ಸರಕಾರಕ್ಕೆ ಕಳುಹಿಸುವುದಾಗಿ ಅಧ್ಯಕ್ಷರು ತಿಳಿಸಿದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.