ಕೋವಿಡ್‌ ಚೇತರಿಕೆ ಪಟ್ಟಿಯಲ್ಲಿ ಉಡುಪಿ ಅಗ್ರಣಿ!

ಸರಾಸರಿ ಪ್ರಕರಣ 300ರಿಂದ 50ಕ್ಕೆ ಇಳಿಕೆ; ಮರಣ ಪ್ರಮಾಣ ಶೇ. 1

Team Udayavani, Nov 9, 2020, 5:55 AM IST

ಕೋವಿಡ್‌ ಚೇತರಿಕೆ ಪಟ್ಟಿಯಲ್ಲಿ ಉಡುಪಿ ಅಗ್ರಣಿ!

ಸಾಂದರ್ಭಿಕ ಚಿತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌- 19ನಿಂದ ಗುಣ ಹೊಂದುತ್ತಿರುವವರ ಪ್ರಮಾಣ ಶೇ. 97.1ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾದಿಂದ ಚೇತರಿಕೆ ಕಾಣುತ್ತಿರುವ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.

ದೇಶ, ರಾಜ್ಯ ಮಟ್ಟದಲ್ಲಿ ಸೋಂಕು ಪ್ರಮಾಣ ಇಳಿಕೆಯಾಗುತ್ತಿದೆ. ಇದು ಉಡುಪಿ ಜಿಲ್ಲಾ ಮಟ್ಟದಲ್ಲಿಯೂ ಪ್ರತಿಫ‌ಲಿಸಿದೆ. ಸೋಂಕು ಹರಡುವಿಕೆಯೂ ಗಣನೀಯವಾಗಿ ಕಡಿಮೆ ಆಗಿದೆ. ಆದರೂ ಜನ ಮೈ ಮರೆತರೆ ಅಪಾಯ ತಪ್ಪಿದ್ದಲ್ಲ ಎಂದು ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ಎಚ್ಚರಿಕೆ ನೀಡುತ್ತಲೇ ಇದೆ.

ಜಿಲ್ಲೆಯಲ್ಲಿ ಆರಂಭದಿಂದ ಇಲ್ಲಿಯವರೆಗೆ 1,94,198 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ದೃಢಪಟ್ಟು ಚಿಕಿತ್ಸೆ ಪಡೆದವರಲ್ಲಿ 21,532 ಮಂದಿ ಗುಣ ಮುಖರಾಗಿದ್ದಾರೆ.

ಸೋಂಕಿನ ಪ್ರಮಾಣ ಇಳಿಕೆ
ಜಿಲ್ಲೆಯಲ್ಲಿ ಎರಡು ತಿಂಗಳ ಹಿಂದೆ ಪತ್ತೆಯಾಗುತ್ತಿದ್ದ ಒಟ್ಟು ಸೋಂಕಿನ ಪ್ರಮಾಣ ಶೇ. 16.2 ಇದ್ದರೆ, ಈಗ ಶೇ. 11.6ಕ್ಕೆ ಇಳಿದಿದೆ. ಕಳೆದ 3 ದಿನದಲ್ಲಿ ಪರೀಕ್ಷೆಗೆ ಕಳುಹಿಸಲಾದ ಒಟ್ಟು ಮಾದರಿಗಳಲ್ಲಿ ಶೇ. 2.3ರಷ್ಟು ಪಾಸಿಟಿವ್‌ ಪ್ರಕರಣಗಳು ಕಂಡುಬಂದಿವೆ. ಈ ಹಿಂದೆ ದಿನಕ್ಕೆ ಸುಮಾರು 300 ಪ್ರಕರಣಗಳು ಪತ್ತೆಯಾಗುತ್ತಿದ್ದರೆ ಒಂದು ವಾರದಿಂದ ಕೇವಲ 20ರಿಂದ 70ರ ಒಳಗೆ ವರದಿಯಾಗುತ್ತಿದೆ.

1.94 ಲಕ್ಷ ಜನರ ಪರೀಕ್ಷೆ
ಜಿಲ್ಲೆಯಲ್ಲಿ ಇಲ್ಲಿಯ ವರೆಗೆ 1,94,198 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಮಾರ್ಚ್‌, ಎಪ್ರಿಲ್‌ಗ‌ಳಲ್ಲಿ ಇಲ್ಲಿ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಆಗಸ್ಟ್‌ ಮತ್ತು ಸೆಪ್ಟಂಬರ್‌ನಲ್ಲಿ ಜಿಲ್ಲೆಯಲ್ಲಿ ಕೊರೊನಾ ಅಬ್ಬರಿಸಿತ್ತು. ಆಗಸ್ಟ್‌ನಲ್ಲಿ ಪ್ರತೀ ದಿನ 300ರಷ್ಟು ಪ್ರಕರಣ ಗಳು ಪತ್ತೆಯಾಗಿದ್ದರೆ ಒಂದು ದಿನ ಗರಿಷ್ಠ 421 ಪ್ರಕರಣಗಳು ದಾಖಲಾಗಿದ್ದವು.

427 ಸಕ್ರಿಯ ಪ್ರಕರಣ
ಮರಣ ಪ್ರಮಾಣ ಶೇ. 1.1ರಷ್ಟಿದ್ದುದು ಕೂಡ ಕಳೆದ ಒಂದು ವಾರದಲ್ಲಿ ಶೇ. 1ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಇದುವರೆಗೆ 186 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ ಇಲ್ಲಿ ಕೇವಲ 427 ಪಾಸಿಟಿವ್‌ ಸಕ್ರಿಯ ಪ್ರಕರಣಗಳಿವೆ.

ಕೋವಿಡ್‌ ಚೇತರಿಕೆಯಲ್ಲಿ ರಾಜ್ಯದ ಜಿಲ್ಲಾವಾರು ಪಟ್ಟಿಯಲ್ಲಿ ಉಡುಪಿ ಅಗ್ರ ಸ್ಥಾನದಲ್ಲಿದೆ. ದಿನೇ ದಿನೇ ಕೊರೊನಾ ಪ್ರಕರಣ ಕಡಿಮೆ ಆಗುತ್ತಿವೆ. ಆದರೂ ಜನತೆ ಇನ್ನಷ್ಟು ಎಚ್ಚರಿಕೆ ವಹಿಸಬೇಕು, ನಿಯಮಗಳನ್ನು ಪಾಲಿಸಬೇಕು, ಎಚ್ಚರ ತಪ್ಪುವುದು ಸಲ್ಲದು.
– ಡಾ| ಪ್ರಶಾಂತ್‌ ಭಟ್‌, ಕೋವಿಡ್‌-19 ನೋಡಲ್‌  ಅಧಿಕಾರಿ, ಉಡುಪಿ

ಟಾಪ್ ನ್ಯೂಸ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.