ಉಡುಪಿ: ಸಂತೆಕಟ್ಟೆ ಓವರ್ಪಾಸ್ ಕಾಮಗಾರಿಗೆ ಸಿದ್ಧತೆ
ಟ್ರಿನಿಟಿ ಕನ್ಸ್ಟ್ರಕ್ಷನ್ ಸಂಸ್ಥೆಯು ಓವರ್ಪಾಸ್ ನಿರ್ಮಾಣ ಗುತ್ತಿಗೆ ಪಡೆದಿದೆ.
Team Udayavani, Jan 3, 2023, 10:25 AM IST
ಉಡುಪಿ: ಉಡುಪಿ- ಕುಂದಾಪುರ ಮುಖ್ಯರಸ್ತೆಯ ರಾಷ್ಟ್ರೀಯ ಹೆದ್ದಾರಿ-66ರ ಸಂತೆಕಟ್ಟೆ ಜಂಕ್ಷನ್ನಲ್ಲಿ ವೆಹಿಕ್ಯೂಲರ್ ಓವರ್ಪಾಸ್ ನಿರ್ಮಾಣ ಕಾಮಗಾರಿಗೆ ಸಿದ್ಧತೆ ನಡೆಸಲಾಗುತ್ತಿದೆ. ಹಲವಾರು ವರ್ಷಗಳಿಂದ ಸಂಚಾರ ದಟ್ಟಣೆ, ಅಪಘಾತಗಳ ಕೇಂದ್ರವಾಗಿದ್ದ ಈ ಜಂಕ್ಷನ್ನಲ್ಲಿ ಓವರ್ಪಾಸ್ ನಿರ್ಮಿಸುವಂತೆ ಸಾರ್ವಜನಿಕ ವಲಯದಲ್ಲಿ ಬೇಡಿಕೆ ಹೆಚ್ಚಿತ್ತು.
ಅನಂತರ ಇಲ್ಲಿ ಓವರ್ಪಾಸ್ ನಿರ್ಮಾಣ ಕುರಿತ ಪ್ರಸ್ತಾವನೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) 27.4 ಕೋ. ರೂ. ವೆಚ್ಚದ ಅನುಮೋದನೆ ನೀಡಿದ್ದು, ಇದೀಗ ಟೆಂಡರ್ ಪಕ್ರಿಯೆ ಪೂರ್ಣಗೊಂಡು ಕಾಮಗಾರಿಗೆ ತಯಾರಿ ನಡೆಸಲಾಗುತ್ತಿದೆ. ಟ್ರಿನಿಟಿ ಕನ್ಸ್ಟ್ರಕ್ಷನ್ ಸಂಸ್ಥೆಯು ಓವರ್ಪಾಸ್ ನಿರ್ಮಾಣ ಗುತ್ತಿಗೆ ಪಡೆದಿದೆ.
ಸೋಮವಾರದಿಂದ ಜಂಕ್ಷನ್ನಲ್ಲಿ ವಾಹನಗಳು ಸಂಚರಿಸದಂತೆ ಬ್ಯಾರಿಕೇಡ್ ಇಟ್ಟು ನಿರ್ಬಂಧಿಸಲಾಗಿದ್ದು, ಸರ್ವಿಸ್ ರಸ್ತೆ ಮೂಲಕ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಜ.12ಕ್ಕೆ ಭೂಮಿ ಪೂಜೆ ಜರಗಲಿದ್ದು, ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಬಹುದು ಎಂದು ಹೆದ್ದಾರಿ ಸಚಿವಾಲಯದ ಮೂಲಗಳು ತಿಳಿಸಿದೆ. ಸಂತೆಕಟ್ಟೆ ಜಂಕ್ಷನ್ ಅವ್ಯವಸ್ಥೆ ಸಂಬಂಧಿಸಿ “ಉದಯವಾಣಿ’ ಸರಣಿ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ