- Monday 09 Dec 2019
ಉಡುಪಿ :PWD ಗುತ್ತಿಗೆದಾರನ ಆ್ಯಕ್ಟಿವಾದಲ್ಲಿದ್ದ 2.90 ಲಕ್ಷ ರೂ ಕಳವು!
Team Udayavani, Mar 24, 2017, 2:59 PM IST
ಉಡುಪಿ: ನಗರದ ಮಾರುಥಿ ವಿಥಿಕಾ ರಸ್ತೆಯಲ್ಲಿ ಪಿಡಬ್ಲ್ಯೂಡಿ ಗುತ್ತಿಗೆದಾರರೊಬ್ಬರು ಸ್ಕೂಟರ್ ಸೀಟ್ ಅಡಿ ಇರಿಸಿದ್ದ 2.90 ಲಕ್ಷ ರೂಪಾಯಿ ಹಣವನ್ನು ಕಳ್ಳರು ಎಗರಿಸಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಕಟಪಾಡಿ ಕೋಟೆ ಗ್ರಾಮದ ಪ್ರಭಾಕರ ಕೋಟ್ಯಾನ್ ಅವರು ಅಜ್ಜರಕಾಡುವಿನ ಬ್ಯಾಂಕ್ನಲ್ಲಿ ಚೆಕ್ ಡ್ರಾ ಮಾಡಿ 3,44,000 ರೂಪಾಯಿ ಪಡೆದು ಮಾರುತಿ ವಿಥಿಕಾದಲ್ಲಿರುವ ಜೋಸ್ ಆಲುಕ್ಕಾಸ್ ಜ್ಯುವೆಲ್ಲರಿಯಲ್ಲಿ ಆಭರಣ ಖರೀದಿಗೆ ಬಂದಿದ್ದರು.
ಜ್ಯುವೆಲ್ಲರಿಯಿಂದ ಅನತಿ ದೂರದಲ್ಲಿ ಸ್ಕೂಟರ್ ಪಾರ್ಕ್ ಮಾಡಿ , 54 000 ರೂಪಾಯಿ ತೆಗೆದುಕೊಂಡು ಉಳಿದ 2,90,000ರೂಪಾಯಿ ಹಣವನ್ನು ಸ್ಕೂಟರ್ನ ಸ್ಟೀಟ್ ಅಡಿಯಲ್ಲಿ ಬಿಟ್ಟು ಲಾಕ್ ಮಾಡಿ ತೆರಳಿದ್ದರು ಎಂದು ಹೇಳಲಾಗಿದೆ. ಚಿನ್ನದಂಗಡಿಯಿಂದ ಮರಳಿ ಬಂದಾಗ ಸ್ಕೂಟರ್ನಿಂದ ಹಣ ಕಳವಾಗಿರುವುದು ಕಂಡು ದಿಗಿಲಾಗಿದ್ದಾರೆ.
ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ. ಜೋಸ್ ಆಲುಕ್ಕಾಸ್ ಜ್ಯುವೆಲ್ಲರಿಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮರಾದಲ್ಲಿ ಪ್ರಭಾಕರ್ ಅವರು ಸ್ಕೂಟರ್ ಇರಿಸಿದ ಸ್ಥಳ ಸೆರೆಯಾಗಿಲ್ಲ.
ಪ್ರಕರಣದ ತನಿಖೆ ನಡೆಸುವ ವೇಳೆ ಪೊಲೀಸ್ ಇಲಾಖೆ ಅಳವಡಿಸಿರುವ ಕ್ಯಾಮರಾಗಳು ನಿಷ್ಕ್ರೀಯವಾಗಿರುವುದು ಕಂಡು ಬಂದಿದೆ ಎಂದು ಪ್ರಭಾಕರ್ ಅವರು ಆರೋಪಿಸದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಪಡುಬಿದ್ರಿ:ಇಲ್ಲಿನ ಬೀಡು ಸಮೀಪದ ಜಾಗದಲ್ಲಿ ವಾಸಿಸುತ್ತಿದ್ದು ಅಲ್ಲಿಂದ ಸುಜ್ಲಾನ್ ಪುನರ್ವಸತಿ ಕಾಲೋನಿ ಸಮೀಪಕ್ಕೆ ಸ್ಥಳಾಂತರಗೊಂಡು ಕಳೆದ 6 ವರ್ಷಗಳಿಂದ...
-
ಅಜೆಕಾರು: ಹಿರ್ಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದ ಕಟ್ಟೆಯಿಂದ ಕಾನಂಗಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ರಸ್ತೆ ಅಭಿವೃದ್ಧಿಗೆ...
-
ಕುಂದಾಪುರ: ಪುರಸಭೆ ವ್ಯಾಪ್ತಿಯಲ್ಲಿ 42 ಕೋ.ರೂ.ಗಳಲ್ಲಿ ಆರಂಭಿಸಿದ ಒಳಚರಂಡಿ ಯೋಜನೆ ಕಾಮಗಾರಿ ಸ್ಥಗಿತವಾಗಿದೆ. ಚರಂಡಿ ನೀರು ಹರಿಸಿ ಶುಚಿ ಮಾಡಲು ಬಾವಿಗಳಿಲ್ಲದ...
-
ಗಂಗೊಳ್ಳಿ: ಇಲ್ಲಿನ ಬೀಚ್ ಬಳಿ ಚರ್ಚ್ ರಸ್ತೆಗೆ ತಾಗಿಕೊಂಡಿರುವ ಮಡಿವಾಳರ ಕೆರೆ, ಗಂಗೊಳ್ಳಿಯ ಕಡಲ ಕಿನಾರೆಗಳು, ಸೇರಿದಂತೆ ರಸ್ತೆ ಬದಿಯ ಚರಂಡಿಗಳೆಲ್ಲ ಕಸ...
-
ವಿಶೇಷ ವರದಿ-ಉಡುಪಿ: ಅಸಮರ್ಪಕ ಚರಂಡಿ, ಹದಗೆಟ್ಟ ರಸ್ತೆ, ಅಲ್ಲಲ್ಲಿ ಕಾರಂಜಿಯಂತೆ ಉಕ್ಕಿ ಹರಿಯುತ್ತಿರುವ ಕೊಳಚೆ ನೀರಿನ ಮ್ಯಾನ್ಗಳು, ಕಿ.ಮೀ. ಒಂದರಂತೆ ಅಗೆದ ರಸ್ತೆ,...
ಹೊಸ ಸೇರ್ಪಡೆ
-
ಹೊಸದಿಲ್ಲಿ: ನೆರೆರಾಷ್ಟ್ರಗಳ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡುವ ಉದ್ದೇಶ ವಿರುವ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಧ್ಯಾಹ್ನ...
-
ಬೆಂಗಳೂರು: ರಾಜ್ಯದಲ್ಲಿ ಐದು ತಿಂಗಳ ಹಿಂದೆ ನಡೆದ ರಾಜಕೀಯ ಪ್ರಹಸನದ ಅನಂತರ ರಚನೆಯಾದ ಬಿಜೆಪಿ ಸರಕಾರದ ಅಳಿವು-ಉಳಿವು ಹಾಗೂ ಅನರ್ಹಗೊಂಡ 17 ಶಾಸಕರ ಪೈಕಿ ಉಪಚುನಾವಣೆಗೆ...
-
ಹೊಸದಿಲ್ಲಿ: ಸೋಮವಾರದಿಂದ ರಣಜಿ ಪಂದ್ಯಾವಳಿ ಆರಂಭವಾಗಲಿದೆ. ಆದರೆ ಬಿಸಿಸಿಐ ಇನ್ನೂ ಅಂಕಣ ಹೇಗಿರಬೇಕೆಂಬ ಮಾರ್ಗದರ್ಶಿ ಸೂತ್ರಗಳನ್ನು ತಿಳಿಸಿಲ್ಲ ಎಂದು ಕ್ಯುರೇಟರ್ಗಳು...
-
ಹೊಸದಿಲ್ಲಿ: ಎಲ್ಲ ವಾಹನ ಮಾಲಕರೂ ತಮ್ಮ ವಾಹನಗಳ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಗಳನ್ನು ಜೋಡಿಸುವ ನಿಯಮ ಎ. 1ರಿಂದ ದೇಶವ್ಯಾಪಿ ಕಡ್ಡಾಯವಾಗಲಿದೆ. ಕೇಂದ್ರ ಸಾರಿಗೆ...
-
ಕೋಟಿ ರೂ. ಎನ್ನುವುದು ನಮಗೆ ಇಂದಿಗೂ ಕನಸು. ಅಷ್ಟು ಹಣ ಸಂಪಾದಿಸಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಆದರೆ, ಬ್ಯಾಂಕಿನಲ್ಲಿ ತಿಂಗಳಿಗೆ ಕೇವಲ 5,000ರೂ. ಕೂಡಿಡುವುದರ...