ಉಡುಪಿ: ಶೀಘ್ರ ಜನೆರಿಕ್ ಔಷಧ ಕೇಂದ್ರ: ಸಚಿವ ಪ್ರಮೋದ್
Team Udayavani, Feb 16, 2017, 3:35 AM IST
ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿ ಶೀಘ್ರದಲ್ಲಿ ಅತಿ ಕಡಿಮೆ ಬೆಲೆಯಲ್ಲಿ ಔಷಧ ಮಾರಾಟ ಮಾಡುವ ಜನೆರಿಕ್ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಅವರು ಬುಧವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಆರೋಗ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಜನೆರಿಕ್ ಔಷಧ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲಿ ಕೇಂದ್ರ ತೆರೆಯಲಾಗುವುದು. ಈ ಕೇಂದ್ರದಲ್ಲಿ ರೋಗಿಗಳಿಗೆ ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಔಷಧಗಳು ಲಭ್ಯವಾಗಲಿವೆ ಎಂದು ಸಚಿವರು ತಿಳಿಸಿದರು.
ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿದ ಸಚಿವರು, ವಲಸೆ ಕಾರ್ಮಿಕ ಮಹಿಳೆಯರ ಆರೋಗ್ಯ ಕುರಿತು ವಿಶೇಷ ಗಮನ ಹರಿಸುವಂತೆ ಹಾಗೂ ವಿಶೇಷ ಅಭಿಯಾನ ಕೈಗೊಂಡು ಅವರನ್ನು ಗುರುತಿಸಿ ಸೇವೆ ಒದಗಿಸುವಂತೆ ಸೂಚಿಸಿದರು.
ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಔಷಧಗಳ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದ ಸಚಿವರು, ಆರೋಗ್ಯ ಕಾರ್ಯಕ್ರಮಗಳ ಪ್ರಚಾರ ಮಾಡುವಾಗ ಶಿಕ್ಷಣ ಇಲಾಖೆ ಸಹಕಾರ ಪಡೆಯುವಂತೆ ಹಾಗೂ ಇಲಾಖೆ ಸಮಸ್ಯೆಗಳ ಬಗ್ಗೆ ತಮ್ಮ ಗಮನಕ್ಕೆ ತರುವಂತೆ ಸೂಚಿಸಿದರು.
ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಡಿಎಚ್ಒ ಡಾ| ರೋಹಿಣಿ ಹಾಗೂ ಜಿಲ್ಲೆಯ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ