ಉಡುಪಿ: ಮಳೆ ಬಿರುಸು, ಮತ್ತಷ್ಟು ರಸ್ತೆ ಹೊಂಡಗಳು
Team Udayavani, Jun 29, 2018, 6:00 AM IST
ಉಡುಪಿ: ಮಳೆಯ ಪರಿಣಾಮ ಉಡುಪಿ ನಗರದ ಹಲವೆಡೆ ರಸ್ತೆಗಳಲ್ಲಿ ಹೊಂಡಗಳ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ.
ಬನ್ನಂಜೆಯಿಂದ ಬ್ರಹ್ಮಗಿರಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಹೊಂಡಗಳಾ ಗಿವೆ. ವಾಹನ ದಟ್ಟಣೆಯಿಂದಾಗಿ ಮೊದಲೇ ಇಕ್ಕಟ್ಟಾದ ಈ ರಸ್ತೆ ಮಳೆಗಾಲಕ್ಕೆ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ. ಪ್ರತಿ ಮಳೆಗಾಲಕ್ಕೂ ಈ ರಸ್ತೆಯಲ್ಲಿ ಹೊಂಡಗಳುಂಟಾಗುವುದು, ನೀರು ನಿಲ್ಲುವುದು ಸಾಮಾನ್ಯ ಎಂಬಂತಾಗಿದೆ. ಇದನ್ನು ಅಗಲಗೊಳಿಸಬೇಕೆಂಬ ಬೇಡಿಕೆ ಕೂಡ ಈಡೇರಿಲ್ಲ.
ಹೆದ್ದಾರಿ ಸಂಪರ್ಕ ರಸ್ತೆ
ಉಡುಪಿ ತಾಲೂಕು ಕಚೇರಿ, ಎಸ್ಪಿ ಕಚೇರಿ ಸೇರಿದಂತೆ ಪ್ರಮುಖ ಕಚೇರಿಗಳಿಗೆ ರಾಷ್ಟ್ರೀಯ ಹೆದ್ದಾರಿ 66ರಿಂದ ಸಂಪರ್ಕ ಕಲ್ಪಿಸುವ ವಿಶ್ವೇಶ್ವರಯ್ಯ ರಸ್ತೆ ಕೂಡ ನಿರ್ಲಕ್ಷ್ಯಕ್ಕೊಳಪಟ್ಟಿದೆ. ಈ ಬಾರಿಯ ಮಳೆಗಾಲಕ್ಕೂ ಇದು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸುತ್ತಿದೆ. ಈ ಭಾಗದವರು ಸುಲಭವಾಗಿ ಹೆದ್ದಾರಿಯನ್ನು ಸಂಪರ್ಕಿಸಲು ಇದು ಉಪಯುಕ್ತವಾಗಿದೆ. ಆದರೆ ಈಗ ಹೊಂಡಗಳು ಮೇಲೆದ್ದು ಸಂಚಾರಕ್ಕೆ ಸಮಸ್ಯೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ