ಫೋನ್‌-ಇನ್‌ನಲ್ಲಿ ಎಸ್‌ಪಿ ಜತೆ ಮಾತನಾಡಿ


Team Udayavani, Sep 9, 2017, 6:05 AM IST

Phone-in-program.jpg

ಉಡುಪಿ: ಜಿಲ್ಲಾ ಎಸ್‌ಪಿ ಡಾ| ಸಂಜೀವ ಪಾಟೀಲ್‌ ಅವರ 4ನೇ ಫೋನ್‌-ಇನ್‌ ಕಾರ್ಯಕ್ರಮವು ಶನಿವಾರ ನಡೆಯಲಿದ್ದು, ಸಾರ್ವಜನಿಕರು ಮೌನಿಯಾಗಿದ್ದರೆ ಬದಲಾವಣೆ ಸಾಧ್ಯವಿಲ್ಲ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಇರುವ ಪೊಲೀಸ್‌ ಇಲಾಖೆ ಮತ್ತು ಸಾರ್ವಜನಿಕರಿಗೆ ಸಂಬಂಧಪಟ್ಟ ಸಮಸ್ಯೆಗಳು ಮತ್ತು ಮಾಹಿತಿಗಳ ಕುರಿತು ಎಸ್‌ಪಿಯವರಿಗೆ ಕರೆ ಮಾಡಿ ತಿಳಿಸಿದರೆ ಉತ್ತಮ.

ಗ್ರಾಮಗಳಿಂದ ಹಿಡಿದು ನಗರಗಳಲ್ಲಿನ ಕೆಲವೊಂದು ಸಮಸ್ಯೆಗಳು ಎಸ್‌ಪಿಯವರ ಗಮನಕ್ಕೆ ಬಾರದೆ ಇದ್ದು, ಸಮಸ್ಯೆ ಹಾಗೆಯೇ ಉಳಿದು ಬಿಡುತ್ತದೆ. ಇನ್ನು ಕೆಲವು ಸಮಸ್ಯೆಗಳು ಬೆಳೆಯುತ್ತಾ ಹೋಗುತ್ತದೆ. ಕೆಲವೊಂದು ವಾಹನಗಳ ಸವಾರರು ರಾತ್ರಿ ವೇಳೆಯಲ್ಲಿ ಕಣ್ಣಿಗೆ ಹೊಡೆಯುವಂತಹ ದೀಪಗಳನ್ನು ಹಾಕುತ್ತಾರೆ, ಜೀಬ್ರಾ ಕ್ರಾಸಿಂಗ್‌ನಲ್ಲಿ ಜನರು ಕ್ರಾಸಿಂಗ್‌ ಮಾಡುವಾಗ ವಾಹನದವರು ನಿಧಾನಿಸುವುದಿಲ್ಲ. ಅನಗತ್ಯ ರಸ್ತೆ ತಡೆಗಳು, ರಸ್ತೆ ತಿರುವುಗಳು, ಸೂಚನಾ ಫ‌ಲಕಗಳು ಮೊದಲಾದ ಸ್ಥಳೀಯ ಸಮಸ್ಯೆಗಳ ಬಗ್ಗೆಯೂ ಮಾಹಿತಿ ನೀಡಬಹುದಾಗಿದೆ.

ಹಿಂದೆ ಗಾಂಜಾ ಮಾರಾಟ ಮಾಡುವವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿತ್ತು. ಈಗ ಗಾಂಜಾ ಸೇವಿಸಿರುವವರ ಮೇಲೂ ಪ್ರಕರಣ ದಾಖಲಿಸಿಕೊಳ್ಳಲು ಎಸ್‌ಪಿಯವರು ಸೂಚಿಸಿದ್ದಾರೆ. ಅದರಂತೆ ಪ್ರಕರಣವೂ ದಾಖಲಾಗುತ್ತಿದೆ. ಗಾಂಜಾ ಸೇವಿಸುವವರ ಮಾಹಿತಿಯು ಕೆಲ ಸಾರ್ವಜನಿಕರಿಗೆ ಇರುತ್ತದೆ. ಈ ಬಗ್ಗೆ ಎಸ್‌ಪಿಯವರ ಗಮನಕ್ಕೆ ತರಬಹುದು. ಈಗಾಗಲೇ ಮಟ್ಕಾ ದಂಧೆಯ ಕುರಿತು ಎಲ್ಲ ಕಡೆಯಿಂದಲೂ ಮಾಹಿತಿ ಬರುತ್ತಲಿದೆ. ಇದೇ ರೀತಿ ಇನ್ನೂ ಹಲವು ಅಕ್ರಮ ದಂಧೆಗಳು ಕಾರ್ಯಾಚರಿಸುತ್ತಿರಬಹುದು. ಇದು ಸ್ಥಳೀಯ ಮಟ್ಟದ ಅಧಿಕಾರಿಗಳ ಸುಪರ್ದಿಯಲ್ಲಿಯೇ ನಡೆಯುತ್ತಿದ್ದಿರಲೂಬಹುದು. ಮೇಲಧಿಕಾರಿಗಳ ಗಮನಕ್ಕೆ ಇದು ಬಾರದಿರಬಹುದು. ಇದನ್ನೂ ಸಹ ಎಸ್‌ಪಿಯವರ ಗಮನಕ್ಕೆ ತಂದರೆ ಅವುಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ.

ಹೆಸರು ಗೌಪ್ಯತೆಗೆ 
ಕೊಡುತ್ತಾರೆ ಒತ್ತು

ಎಸ್‌ಪಿಯವರ ಫೋನ್‌-ಇನ್‌ನಲ್ಲಿ  ಎಲ್ಲ ದೂರು/ವಿಚಾರ/ಮಾಹಿತಿ ಗಳನ್ನು ಮುಕ್ತವಾಗಿ ಅವ ರೊಂದಿಗೆ ಹಂಚಿಕೊಳ್ಳಬಹುದು. ಇಲ್ಲಿ ಗೌಪ್ಯತೆ ಕಾಪಾಡಲಾಗುವುದು. ಮಾಹಿತಿ ತಿಳಿಸುವವರ ಹೆಸರನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸಲಾಗುವುದಿಲ್ಲ.  ಫೋನ್‌-ಇನ್‌ನಲ್ಲಿ ಪತ್ರಕರ್ತರು ಭಾಗಿಯಾಗುತ್ತಾರಾದರೂ, ಅವರಿಗೆ ಸಹ ಕರೆ ಮಾಡಿದವರ ಹೆಸರು, ವಿಳಾಸದ ವಿವರವನ್ನು ಎಸ್‌ಪಿಯವರು ನೀಡದೆ ಗೌಪ್ಯವಾಗಿಡುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರಿಗೆ ಗೌಪ್ಯತೆಯ ಬಗ್ಗೆ ಯಾವುದೇ ಸಂದೇಹ ಬೇಡ. ಉತ್ತಮ ಸಮಾಜಕ್ಕಾಗಿ ಫೋನ್‌-ಇನ್‌ಗೆ ಕರೆ ಮಾಡಿ ಮಾಹಿತಿ ಕೊಡಿ. ಈ ಶನಿವಾರ ಕರೆ ಬ್ಯುಸಿ ಬಂದರೆ, ಕನೆಕ್ಟ್ ಆಗದಿದ್ದರೆ, ತಾಳ್ಮೆಯಿಂದಿರಿ. ಮತ್ತೂಂದು ಶನಿವಾರ ಬೆಳಗ್ಗೆ 10ಕ್ಕೆ ಸಿದ್ಧರಾಗಿರಿ.

ಟಾಪ್ ನ್ಯೂಸ್

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.